ಟಿಪ್ಪು ಸುಲ್ತಾನ್ ನ ಹೊಗಳಿದ್ದ ರಾಷ್ಟ್ರಪತಿ ಕೋವಿಂದ್ ರಾಜೀನಾಮೆ ಕೇಳುತ್ತೀರಾ? BJPಗೆ ರಾವತ್
ನಮಗೆ ಟಿಪ್ಪು ಸುಲ್ತಾನ್ ಬಗ್ಗೆ ಗೊತ್ತಿದೆ. ಬಿಜೆಪಿಯಿಂದ ನಮಗೆ ಪಾಠ ಕಲಿಯಬೇಕಾಗಿಲ್ಲ
Team Udayavani, Jan 27, 2022, 1:32 PM IST
ಮುಂಬಯಿ: 2017ರಲ್ಲಿ ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 18ನೇ ಶತಮಾನದ ಮೈಸೂರು ರಾಜ ಟಿಪ್ಪು ಸುಲ್ತಾನ್ ನನ್ನು ಹೊಗಳಿದ್ದು, ಭಾರತೀಯ ಜನತಾ ಪಕ್ಷ ಅವರು (ಕೋವಿಂದ್) ರಾಜೀನಾಮೆ ಕೊಡಲಿ ಎಂದು ಕೇಳುತ್ತದೆಯೇ ಎಂಬುದಾಗಿ ಶಿವಸೇನಾ ಮುಖಂಡ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನ ಗೆಳೆಯನೊಂದಿಗೆ ಗೋವಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜೆಎಫ್ ಬೆಡಗಿ
ಮುಂಬಯಿಯ ಕ್ರೀಡಾ ಸಮುಚ್ಛಯಕ್ಕೆ ಮಹಾರಾಷ್ಟ್ರ ಸರ್ಕಾರ 18ನೇ ಶತಮಾನದ ಮೈಸೂರು ರಾಜ ಟಿಪ್ಪು ಸುಲ್ತಾನ್ ಹೆಸರು ಇಡಲು ಮುಂದಾಗಿದ್ದು, ಇದಕ್ಕೆ ಭಾರತೀಯ ಜನತಾ ಪಕ್ಷ ಮತ್ತು ಬಜರಂಗದಳ ತೀವ್ರ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾವತ್ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ಹೇಳಿದೆ.
ಕರ್ನಾಟಕ ವಿಧಾನಸಭೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟಿಪ್ಪು ಸುಲ್ತಾನ್ ಬಗ್ಗೆ ಹೊಗಳಿದ್ದರು. ಈಗ ನೀವು (ಬಿಜೆಪಿ) ರಾಷ್ಪ್ರಪತಿ ಕೋವಿಡ್ ಅವರ ರಾಜೀನಾಮೆಯನ್ನೂ ಕೇಳಬೇಕಲ್ಲವೇ? ಇದನ್ನು ಬಿಜೆಪಿ ಸ್ಪಷ್ಟಪಡಿಸಬೇಕು ಎಂದು ರಾವತ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ತಮಗೆ ಮಾತ್ರ ಇತಿಹಾಸದ ಜ್ಞಾನ ಇದೆ ಎಂದು ಬಿಜೆಪಿ ಆಲೋಚಿಸುತ್ತಿದೆ. ಪ್ರತಿಯೊಬ್ಬರು ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ, ಈ ಇತಿಹಾಸಕಾರರು ಇಲ್ಲಿಯೂ (ಮಹಾರಾಷ್ಟ್ರ) ಇತಿಹಾಸ ಬದಲಾಯಿಸಲು ಹೊರಟಿದ್ದಾರೆ. ನಮಗೆ ಟಿಪ್ಪು ಸುಲ್ತಾನ್ ಬಗ್ಗೆ ಗೊತ್ತಿದೆ. ಬಿಜೆಪಿಯಿಂದ ನಮಗೆ ಪಾಠ ಕಲಿಯಬೇಕಾಗಿಲ್ಲ ಎಂದು ರಾವತ್ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.