ಸಚಿವ ಕತಿ ವಿರುದ್ದ ರೈತ ಸಂಘಟನೆಗಳ ಆಕ್ರೋಶ


Team Udayavani, Jan 27, 2022, 1:40 PM IST

18katti

ಬಸವನಬಾಗೇವಾಡಿ: ರೈತರ ಸಮಸ್ಯೆಯನ್ನು ಆಲಿಸದೆ ಉದ್ಧಟತನ ಪ್ರದರ್ಶಿಸಿದ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಉಮೇಶ ಕತ್ತಿವರ ವರ್ತನೆಗೆ ರೈತರು, ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿಯವರು ವಿಜಯಪುರದಲ್ಲಿ ಗಣರಾಜೋತ್ಸವ ಕಾರ್ಯಕ್ರಮ ಮುಗಿಸಿ ಪಟ್ಟಣದ ಮಾರ್ಗವಾಗಿ ಮುದ್ದೇಬಿಹಾಳಕ್ಕೆ ತೆರಳುವ ಮಧ್ಯ ಮಾರ್ಗದಲ್ಲಿ ಅಖಂಡ ಕರ್ನಾಟಕ ರೈತ ಸಂಘನೆ ಹಾಗೂ ರೈತರು ಉಮೇಶ ಕತ್ತಿ ಅವರಿಗೆ ಮನವಿ ಸಲ್ಲಿಸುವ ವೇಳೆ ಈ ಘಟನೆ ಜರುಗಿದೆ.

ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿವರು ಜಿಲ್ಲೆಯಲ್ಲಿ ಕಳೆದ ವರ್ಷ ಅಕಾಲಿಕ ಮಳೆಯಿಂದ ತೊಗರಿ, ಉಳ್ಳಾಗಡ್ಡಿ, ಮೆಕ್ಕೆಜೋಳ ಸೇರಿದಂತೆ ಅನೇಕ ಬೆಳೆಗಳು ಹಾಳಾಗಿದ್ದು. ಬೇರೆ ಜಿಲ್ಲೆಗಳಿಗೆ ಪರಿಹಾರ ದೊರೆತಿದೆ. ನಮ್ಮ ಜಿಲ್ಲೆಗೆ ಪರಿಹಾರ ಸಿಕ್ಕಿಲ್ಲ, ರೈತರು ಸಂಕಷ್ಟದಲ್ಲಿ ಇದ್ದಾರೆ. ಆದ್ದರಿಂದ ನಮ್ಮ ಮನವಿ ಸ್ವೀಕರಿಸಿ ಎಂದು ಸಚಿವರಲ್ಲಿ ಕೋರಿದರು.

ಆದರೆ ಸಚಿವರು ತಮ್ಮ ಕಾರಿನಿಂದ ಕೆಳೆಗಿಳಿದು ರೈತರ ಸಮಸ್ಯೆಯನ್ನು ಆಲಿಸದೆ ಏನಿದೆ ಕೊಡಪ್ಪಾ ನೋಡೊನಾ, ಮುಂದೆ ನನಗೆ ಕೆಲಸವಿದೆ ಎಂದು ಹೇಳಿ ಕಾರಿನಲ್ಲೇ ಕುಳಿತು ಮನವಿಯನ್ನು ತೆಗೆದುಕೊಂಡು ಹೊರಟು ಹೋದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅರವಿಂದ ಕುಲಕರ್ಣಿ, ಸೌಜನ್ಯಕ್ಕೂ ಕೂಡಾ ರೈತರ ಸಮಸ್ಯೆಯನ್ನು ಆಲಿಸದೆ ತಮ್ಮ ಉದ್ಧಟತನ ಪ್ರದರ್ಶಿಸಿದ ಸಚಿವರು ಮತ್ತು ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರಿಗೆ ರೈತರ ಬಗ್ಗೆ ಕಿಂಚತ್ತೂ ಕಾಳಜಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ರೈತರಾದ ಮಲ್ಲಪ್ಪ ಪಡಸಲಗಿ, ಶೇಖಪ್ಪ ಸಜ್ಜನ, ಗುರಲಿಂಗಪ್ಪ ಪಡಸಲಗಿ, ವಿಠ್ಠಲ ಬಿರಾದಾರ, ರಾಜೇಸಾಬ ವಾಲೀಕಾರ, ಚನ್ನಬಸಪ್ಪ ಸಿಂಧೂರ, ಮಲ್ಲಪ್ಪ ಮಾಡ್ಯಾಳ, ಶಿವಪ್ಪ ಸುಂಟ್ಯಾಣ, ಬಾಬು ಸುಂಟ್ಯಾಣ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.