ವಿದ್ಯಾರ್ಥಿಗಳಲ್ಲಿರಲಿ ಸವಾಲು ಎದುರಿಸುವ ದಿಟ್ಟ ಶಕ್ತಿ; ಶಾಸಕ ದೊಡ್ಡನಗೌಡ

ಗ್ರಾಮೀಣ ಮಟ್ಟದಲ್ಲಿ 5 ಪ್ರೌಢಶಾಲೆ ನಿರ್ಮಾಣ, 16 ಶಾಲೆಗಳಿಗೆ ಅನುದಾನ ಮಂಜೂರು ಮಾಡಲಾಗಿದೆ.

Team Udayavani, Jan 27, 2022, 5:39 PM IST

Udayavani Kannada Newspaper

ಹುನಗುಂದ: ವಿದ್ಯಾರ್ಥಿ ಜೀವನದಲ್ಲಿ ಮುಂದೆ ಗುರಿ ಇರಬೇಕು, ಹಿಂದೆ ಗುರು ಇರಬೇಕು. ಅದರೊಂದಿಗೆ ಸವಾಲು ಎದುರಿಸುವ ದಿಟ್ಟ ಶಕ್ತಿ ಇರಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಪಟ್ಟಣದ ಕರ್ನಾಟಕ ಗೃಹ ಮಂಡಳಿ ವತಿಯಿಂದ 4.57.ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡ ಬೃಹತ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದಿಂದಲೇ ಅಭಿವೃದ್ಧಿ, ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ. ಯುವಕರು ದುಶ್ಚಟಗಳಿಗೆ ಬಲಿಯಾಗಿ ದಾರಿ ತಪ್ಪುತ್ತಿದ್ದಾರೆ. ಅಂತಹ ಯುವಕರಿಗೆ ಸೂಕ್ತ ಶಿಕ್ಷಣ ನೀಡಿ ಸನ್ಮಾರ್ಗದಲ್ಲಿ ನಡೆಸುವುದು ಮುಖ್ಯ. ಸರ್ಕಾರ ಶಿಕ್ಷಣಕ್ಕಾಗಿ ವಿನೂತನ ಯೋಜನೆ ಜಾರಿ ಮಾಡುತ್ತಿದ್ದು, ಸದುಪಯೋಗ ಮಾಡಿಕೊಳ್ಳಬೇಕು.

ನನ್ನ ಅವಧಿಯಲ್ಲಿ ಗ್ರಾಮೀಣ ಮಟ್ಟದಲ್ಲಿ 5 ಪ್ರೌಢಶಾಲೆ ನಿರ್ಮಾಣ, 16 ಶಾಲೆಗಳಿಗೆ ಅನುದಾನ ಮಂಜೂರು ಮಾಡಲಾಗಿದೆ. ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಅಧ್ಯಯನ ಮಾಡುತ್ತಿದ್ದು ಅವರಿಗೊಂದು ವಸತಿ ನಿಲಯ ಬೇಕು ಎನ್ನುವ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಸಂಬಂಧಿ ಸಿ ಸಚಿವರೊಂದಿಗೆ ಮಾತನಾಡಿ ಮಂಜೂರು ಮಾಡಿಸುವ ಪ್ರಯತ್ನ ಮಾಡಲಾಗುವುದು ಎಂದರು.

ಪ್ರಾಶುಂಪಾಲ ಡಾ| ಎಸ್‌.ಎಲ್‌. ಪಾಟೀಲ ಮಾತನಾಡಿ, 4.57 ಕೋಟಿ ಬೃಹತ್‌ ಕಟ್ಟಡ ಉದ್ಘಾಟನೆಯಾಗಿದ್ದು 1500 ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗಿದೆ. 2 ಕೋಟಿ ಅನುದಾನದಲ್ಲಿ ಇನ್ನೊಂದು ಕಟ್ಟಡ ನಿರ್ಮಾಣ ಹಂತದಲ್ಲಿದೆ. ಅದರಲ್ಲಿಯೇ ಹೆಚ್ಚುವರಿ ಎರಡು ಕೊಠಡಿ ನಿರ್ಮಾಣಕ್ಕೆ 47 ಲಕ್ಷ ಅನುದಾನವೂ ಮಂಜೂರಾಗಿದೆ. ಕೆಲವೇ ದಿನಗಳಲ್ಲಿ ಆ ಕಟ್ಟಡವೂ ಉದ್ಘಾಟನೆಯಾಗಲಿದೆ. ನಮ್ಮ ಕಾಲೇಜಿನಲ್ಲಿ 672 ವಿದ್ಯಾರ್ಥಿನಿಯರು ಓದುತ್ತಿದ್ದು, ಬಹುತೇಕ ಅವರೆಲ್ಲ ಗ್ರಾಮೀಣ ಭಾಗದವರಾಗಿದ್ದಾರೆ.

ಅದಕ್ಕಾಗಿ ಒಂದು ವಿದ್ಯಾರ್ಥಿನಿಯರ ವಸತಿ ನಿಲಯ ಒದಗಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಸಿಡಿಸಿ ಕಮಿಟಿ ಸದಸ್ಯ ಮಲ್ಲಿಕಾರ್ಜುನ ಹಳಪೇಟಿ, ಮುಖಂಡರಾದ ಡಾ| ಮಹಾಂತೇಶ ಕಡಪಟ್ಟಿ ಮಾತನಾಡಿದರು. ಈ ವೇಳೆ ಚನ್ನಬಸಪ್ಪ ಹೊನವಾಡ, ಎಸ್‌. ಎನ್‌. ಹುನಕುಂಟಿ, ಗುರಬಸಪ್ಪಗೌಡ ಪಾಟೀಲ, ಮಹಾಂತೇಶ ರೇವಡಿ, ಮಂಜುನಾಥ ಕಿರಸೂರ, ಸುಭಾಸ ಮುಕ್ಕಣ್ಣವರ, ಸಂಗಣ್ಣ ಕಡಪಟ್ಟಿ, ತಿಮ್ಮಣಗೌಡ ದಾದ್ಮಿ, ಮಂಜುನಾಥ ಕೊಡಗಾನೂರ, ಮಲ್ಲೇಶ ಹುನಗುಂದ,ಪುರಸಭೆ ಮುಖ್ಯಾ ಧಿಕಾರಿ ಅಜ್ಜಪ್ಪ ನಾಡಗೌಡ್ರ, ಶಾಂತಯ್ಯ ಮಠ, ಗೃಹ ಮಂಡಳಿ ಎಇಇ ಮಲ್ಲನಗೌಡ ಬಿರಾದರ, ಗುತ್ತಿಗೆದಾರ ಅಬ್ದುಲ್‌ ರಜಾಕ್‌ ಇತರ ರಿದ್ದರು. ಪ್ರೊ| ಗಾಯತ್ರಿ ದಾದ್ಮಿ ಸ್ವಾಗತಿಸಿದರು. ಪ್ರೊ| ನಿಜೇಶಕುಮಾರ.ಡಿ ನಿರೂಪಿಸಿದರು. ಶ್ರೀದೇವಿ ಕಡಿವಾಲ ವಂದಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.