ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಬೀದಿ ನಾಯಿಗಳು


Team Udayavani, Jan 28, 2022, 6:07 AM IST

ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಬೀದಿ ನಾಯಿಗಳು

ಉಡುಪಿ: ನಗರದಲ್ಲಿ ಕೆಲವು ದಿನಗಳಿಂದ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ. ಇದು ಸಾರ್ವಜನಿಕರಿಗೆ ಅತಿಯಾದ ಕಿರಿಕಿರಿ ಉಂಟುಮಾಡುವ ಜತೆಗೆ ರಾತ್ರಿ ವೇಳೆ ತಿರುಗಾಟಕ್ಕೂ ಭಯಪಡುವಂತಾಗಿದೆ.

ಬೀದಿ ನಾಯಿಗಳು ಹಗಲು, ರಾತ್ರಿ ಬೊಗಳುವುದು, ರಸ್ತೆಯಲ್ಲಿ ವಾಹನಗಳನ್ನು ( ವಿಶೇಷವಾಗಿ ದ್ವಿಚಕ್ರ ವಾಹನ) ಹಿಂಬಾಲಿಸಿಕೊಂಡು ಹೋಗುವುದು, ವಾಹನದ ಹತ್ತಿರ ಬಂದು ಸವಾರರಿಗೆ ಭಯ ಹುಟ್ಟಿಸುತ್ತಿವೆ.

ನಗರದ  ಕೆಲವು ಸಾರ್ವಜನಿಕ ಸ್ಥಳದಲ್ಲಿ ಬೀದಿನಾಯಿ ಗಳ ಅಡ್ಡಾದಿಟ್ಟಿ ಓಡಾಟ ಹೆಚ್ಚಾಗಿದೆ. ಬಸ್‌ ನಿಲ್ದಾಣ, ಶಾಲಾ ಆವರಣ, ಮಕ್ಕಳ ಪಾರ್ಕ್‌ಗಳು, ಸರ್ವಿಸ್‌, ಸಿಟಿಬಸ್‌ ನಿಲ್ದಾಣ, ಮಣಿಪಾಲ ಬಸ್‌ ನಿಲ್ದಾಣ, ಮಲ್ಪೆ  ಬಸ್‌ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳಿವೆ. ಕಳೆದ ಹಲವು ವರ್ಷಗಳಿಂದ ನಗರದಲ್ಲಿ ಇವುಗಳ  ನಿಯಂತ್ರಣ ಸಮರ್ಪಕವಾಗಿ ಸಾಧ್ಯವಾಗಿಲ್ಲ. ನಗರಸಭೆ ವತಿಯಿಂದ ಸಂತಾನಹರಣ ಚಿಕಿತ್ಸೆ ನೀಡಿದರೂ ನಾಯಿಗಳ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ ಹಾಗೂ ಸಾರ್ವಜನಿಕರಲ್ಲಿ ಈ ನಾಯಿಗಳು ಭಯ ಹುಟ್ಟಿಸುವ ಘಟನೆ ನಿತ್ಯವೂ ನಡೆಯುತ್ತಿದೆ.

ಮಿಷನ್‌ ಕಾಂಪೌಂಡ್‌, ಕುಕ್ಕಿಕಟ್ಟೆ, ಚಿಟ್ಪಾಡಿ, ಕಲ್ಸಂಕ, ಗುಂಡಿಬೈಲು , ಕಲ್ಮಾಡಿ, ಮಲ್ಪೆ, ದೊಡ¡ಗುಡ್ಡೆ, ಅಜ್ಜರಕಾಡು, ಮಣಿಪಾಲದ ಟೈಗರ್‌ ಸರ್ಕಲ್‌, ಪೋಸ್ಟ್‌ ಆಫೀಸ್‌, ಈಶ್ವರನಗರ, ಪರ್ಕಳ, ಅಲೆವೂರು ರಸ್ತೆ, ಅಂಬಾಗಿಲು, ಇಂದ್ರಾಳಿ, ಪಿಪಿಸಿ ಮೀನು ಮಾರುಕಟ್ಟೆ, ಅಂಬಲಪಾಡಿ, ಆದಿಉಡುಪಿ ಸಹಿತ ಹಲವು ಭಾಗದಲ್ಲಿ ಬೀದಿ ನಾಯಿಗಳ ಉಪಟಳದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿವೆ.

ಬೀದಿನಾಯಿಗಳು ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳು, ಸಾರ್ವಜನಿಕರನ್ನು ಏಕಾಏಕಿ ಬೆನ್ನಟ್ಟುವ ಜತೆಗೆ ಕರ್ಕಶವಾಗಿ ಬೊಗಳಿ ಆತಂಕ, ಭಯ ಉಂಟುಮಾಡುತ್ತಿವೆ. ಕೆಲಸಕ್ಕೆ ಹೋಗಿ ಬರುವ ಕಾರ್ಮಿಕರ ಮೇಲೆಯೂ ದಾಳಿಗೆ ಯತ್ನಿಸುತ್ತವೆ.

ಅನಾರೋಗ್ಯ ಪೀಡಿತ ನಾಯಿಗಳು :

ಬೀದಿನಾಯಿಗಳಲ್ಲಿ ಕೆಲವು ಅನಾರೋಗ್ಯದಿಂದ ಬಳಲುತ್ತಿವೆ. ಮೈ ಮೇಲಿನ ಕೂದಲು ಉದುರಿ, ಚರ್ಮ  ಎದ್ದು ಕಾಣುತ್ತಿವೆ. ಅಲ್ಲಲ್ಲಿ ಗಾಯವಾಗಿವೆ.  ಸದಾ ಬಾಯಿಯಲ್ಲಿ ನೀರು ಸೋರುತ್ತಿರುತ್ತವೆ. ಇವುಗಳಿಗೆ  ಕನಿಷ್ಠ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನಾದರೂ ಸಂಬಂಧಪಟ್ಟ ಆಡಳಿತ ವ್ಯವಸ್ಥೆ ಮಾಡಬೇಕು.

ನಗರಕ್ಕೆ ವಲಸೆ ಹೆಚ್ಚಳ  :

ನಗರಕ್ಕೆ ಆಹಾರ ಅರಸಿಕೊಂಡು ಗ್ರಾಮಾಂತರ ದಿಂದ ಬೀದಿನಾಯಿಗಳ ವಲಸೆ ಹೆಚ್ಚುತ್ತಿದೆ. ಗ್ರಾಮೀಣ ಭಾಗದಿಂದ ಬಂದ ನಾಯಿಗಳು ಇಲ್ಲಿನ ಆಹಾರ, ಇತರೆ ನಾಯಿಗಳ ಸಂಗಡದಿಂದ ಇಲ್ಲಿಯೇ ವಾಸ ಮಾಡುತ್ತವೆ.  ಪ್ರತಿವರ್ಷ ಲಸಿಕೆ, ಚಿಕಿತ್ಸೆ ನೀಡಿದರೂ ನಿಯಂತ್ರಣ ಕಷ್ಟಸಾಧ್ಯ. ನಾಯಿ ಹೆಣ್ಣು ಮರಿಹಾಕಿದ ತತ್‌ಕ್ಷಣವೇ ಆ ಮರಿಯನ್ನು ಬೀದಿಗೆ ಬಿಡುವ ಪರಿಪಾಠವೂ ಇದೆ. ಇದು ಬದಲಾಗಬೇಕು. ಬೀದಿನಾಯಿಗಳ ಸಂಖ್ಯೆ ಹೆಚ್ಚಾಗಲು ಇದು ಕೂಡ ಒಂದು ಕಾರಣ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪಾಲ ಪೋಸ್ಟ್‌ ಆಫೀಸ್‌ ಸುತ್ತಲೂ ಬೀದಿ ನಾಯಿ ಸಮಸ್ಯೆ  :

ಮಣಿಪಾಲದಲ್ಲಿರುವ ಅಂಚೆ ಕಚೇರಿ, ಪೊಲೀಸ್‌ ಠಾಣೆ ಸಮೀಪ ವೃತ್ತದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಬೀದಿ ನಾಯಿಗಳು ಸೇರಿಕೊಂಡಿವೆ. ಸಂಜೆಯಾಗುತ್ತಿದ್ದಂತೆ ವಿಪರೀತ ಬೊಗಳುವುದು. ವಾಹನಗಳನ್ನು ಹಿಂಬಾಲಿಸುವುದು ನಡೆಯುತ್ತದೆ. ಶಾಲಾ, ಕಾಲೇಜು ಮಕ್ಕಳು ಈ ರಸ್ತೆಯಲ್ಲಿ ಹೆಚ್ಚು ಓಡಾಡುವುದರಿಂದ ವಿದ್ಯಾರ್ಥಿಗಳಲ್ಲೂ ಬೀದಿನಾಯಿಗಳು ಭಯ ಹುಟ್ಟಿಸುತ್ತಿವೆ. ಪೋಸ್ಟ್‌ ಆಫೀಸ್‌, ಪೊಲೀಸ್‌ಠಾಣೆಗೆ ಬರುವ ಸಾರ್ವಜನಿಕರಿಗೂ ಬೀದಿ ನಾಯಿಗಳು ಉಪಟಳ ನೀಡುತ್ತಿವೆ. ಅಂಚೆ ಕಚೇರಿಯಲ್ಲಿ ಗ್ರಾಹಕರು,  ಸಿಬಂದಿ ವರ್ಗದವರ ಬೈಕ್‌ ಸೀಟುಗಳಿಗೆ ಬೀದಿ ನಾಯಿಗಳು, ಕೆಲವು ಬೆಕ್ಕುಗಳು ಹಾನಿ ಮಾಡುತ್ತಿರುವ ಬಗ್ಗೆಯೂ ದೂರುಗಳು ಕೇಳಿಬಂದಿವೆ.

ಬೀದಿನಾಯಿಗಳ ಉಪಟಳ ನಿಯಂತ್ರಣಕ್ಕೆ ಚುಚ್ಚುಮದ್ದು, ಸಂತಾನಹರಣ  ಚಿಕಿತ್ಸೆ ಹೊರತುಪಡಿಸಿ ಬೇರೆ ಪರ್ಯಾಯ ಮಾರ್ಗವಿಲ್ಲ. ಎಲ್ಲ ವಾರ್ಡ್‌ಗಳಲ್ಲಿ  ಒಂದು ವಾರದಿಂದ  ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮತ್ತು ರೇಬಿಸ್‌ ಚುಚ್ಚುಮದ್ದು ನೀಡುವ  ಕಾರ್ಯ ನಗರಸಭೆಯಿಂದ  ನಡೆಯುತ್ತಿದೆ. – ಕರುಣಾಕರ್‌ ವಿ. ಹಿರಿಯ ಆರೋಗ್ಯ ನಿರೀಕ್ಷಕರು. ಉಡುಪಿ ನಗರಸಭೆ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.