ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ
ಹಿಮಪಾತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು.
Team Udayavani, Jan 28, 2022, 11:18 AM IST
ವಾಷಿಂಗ್ಟನ್: ಮೈಕೊರೆಯುವಂತಹ ಚಳಿಗಾಳಿ, ಹಿಮಪಾತಕ್ಕೆ ಸಿಲುಕಿ ಇತ್ತೀಚೆಗೆ ಕೆನಡಾ/ಅಮೆರಿಕದ ಗಡಿಭಾಗದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದ ನಾಲ್ವರು ಭಾರತೀಯರ ಗುರುತು ಪತ್ತೆ ಹಚ್ಚಲಾಗಿದೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತ: 24ಗಂಟೆಯಲ್ಲಿ 2.51 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.16
ಈ ಭಾರತೀಯ ಕುಟುಂಬ ಕಾನೂನು ಬಾಹಿರವಾಗಿ ಮಧ್ಯವರ್ತಿಗಳ ಸಲಹೆಯಂತೆ ಗಡಿಯನ್ನು ದಾಟಿದ್ದು, ರಾತ್ರಿ ವೇಳೆ ಮೈನಸ್ 36 ಡಿಗ್ರಿ ಸೆಲ್ಸಿಯಸ್ ಮೈಕೊರೆಯುವಂತಹ ಚಳಿಗಾಳಿ, ಹಿಮಪಾತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು.
ಜನವರಿ 19ರಂದು ಮ್ಯಾನಿಟೋಬಾ ಸಮೀಪದ ಎಮರ್ಸನ್ ಪ್ರದೇಶದಲ್ಲಿ ಅಮೆರಿಕವನ್ನು ಅಕ್ರಮವಾಗಿ ಗಡಿಭಾಗದ ಮೂಲಕ ಒಳಪ್ರವೇಶಿಸುವ ವೇಳೆ ಭಾರತೀಯ ಮೂಲದ ಜಗದೀಶ್ ಬಲ್ ದೇವ್ ಭಾಯಿ ಪಟೇಲ್ (39), ಪತ್ನಿ ವೈಶಾಲಿಬೆನ್ ಜಗದೀಶ್ ಕುಮಾರ್ ಪಟೇಲ್ 37ವರ್ಷ), ವಿಹಾಂಗಿ ಜಗದೀಶ್ ಕುಮಾರ್ (11ವರ್ಷ) ಮತ್ತು ಧಾರ್ಮಿಕ್ ಜಗದೀಶ್ ಕುಮಾರ್ (3ವರ್ಷ) ಭಾರೀ ಚಳಿ, ಹಿಮಪಾತ ತಾಳಲಾರದೆ ಸಾವನ್ನಪ್ಪಿರುವುದಾಗಿ ಕೆನಡಾದ ಅಧಿಕಾರಿಗಳು ವಿವರಿಸಿದ್ದಾರೆ.
ಪಟೇಲ್ ಕುಟುಂಬ ಗುಜರಾತ್ ನ ಕಾಲೋಲ್ ನ ದಿಂಗುಚಾ ಗ್ರಾಮದವರಾಗಿದ್ದಾರೆ ಎಂದು ವರದಿ ತಿಳಿಸಿದೆ. ಇದಕ್ಕೂ ಮುನ್ನ ಕೆನಡಾ ಅಧಿಕಾರಿಗಳು, ಹಿಮಪಾತ, ಚಳಿಗಾಳಿಗೆ ಸಿಲುಕಿ ಭಾರತೀಯ ಮೂಲದ ಪುರುಷ, ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರ ಶವ ಪತ್ತೆಯಾಗಿರುವುದಾಗಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ