ಸಿಎಂಗೆ ಬಿಜೆಪಿ ಅಭಿನಂದನೆ : ಪಕ್ಷ-ಸರಕಾರದ ನಡುವಿನ ಅಂತರ ತಗ್ಗಿಸಲು ಕ್ರಮ
Team Udayavani, Jan 28, 2022, 11:28 AM IST
ಬೆಂಗಳೂರು: ಮುಖ್ಯಮಂತ್ರಿಯಾಗಿ ಆರು ತಿಂಗಳು ಪೂರೈಸಿದ ಬಸವರಾಜ್ ಬೊಮ್ಮಾಯಿ ಅವರಿಗೆ ಈಗ ಪಕ್ಷದ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲು ಬಿಜೆಪಿ ನಿರ್ಧರಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಅದ ಶ್ರೀ ನಳಿನ್ಕುಮಾರ್ ಕಟೀಲ್ ಶುಕ್ರವಾರ ಸಂಜೆ 5 ಗಂಟೆಗೆ ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಬೊಮ್ಮಾಯಿ ಅವರಿಗೆ ಅಭಿನಂದಿಸುವರು. ರಾಜ್ಯದ ಸಚಿವರು, ಪಕ್ಷದ ಶಾಸಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಪಕ್ಷ ಹಾಗೂ ಸರಕಾರದ ನಡುವಿನ ಅಂತರ ತಗ್ಗಿಸುವಲ್ಲಿ ಈ ಕಾರ್ಯ ಕ್ರಮ ಮಹತ್ವದ್ದಾಗಲಿದೆ.
ಬೊಮ್ಮಾಯಿ ಅವರಿಗೆ ಪಕ್ಷದ ವತಿಯಿಂದ ಇದುವರೆಗೆ ಯಾವುದೇ ಅಭಿನಂದನಾ ಕಾರ್ಯಕ್ರಮ ಇದುವರೆಗೆ ನಡೆದಿಲ್ಲ. ಗೋಹತ್ಯಾ ನಿಷೇಧ ಕಾಯಿದೆ ಜಾರಿಗೆ ತಂದಿದ್ದಕ್ಕಾಗಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಅವರನ್ನು ಅಭಿನಂದಿಸಲಾಗಿತ್ತು. ಅದನ್ನು ಬಿಟ್ಟರೆ ಬೇರೆ ಯಾವುದೇ ರೀತಿಯಿಂದಲೂ ಪಕ್ಷದ ಆಂತರಿಕ ವಲಯದಲ್ಲಿ ಅವರಿಗೆ ಗೌರವ ಸಮರ್ಪಣೆ ನಡೆದಿರಲಿಲ್ಲ.
ಆದರೆ ಬದಲಾದ ಪರಿಸ್ಥಿತಿಯಲ್ಲಿ ಬೊಮ್ಮಾಯಿ ಪಕ್ಷದ ಆಂತರಿಕ ವಲಯಕ್ಕೂ ಆಪ್ತರಾಗುತ್ತಿದ್ದಾರೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ಸಂಘಪರಿವಾರದ ಮುಖಂಡರ ಜತೆಗೂ ಅವರು ಉತ್ತಮ ಸಂಬಂಧ ಕಾಯ್ದುಕೊಂಡಿದ್ದಾರೆ.
ಯಡಿಯೂರಪ್ಪ ಸಂಘ ಪರಿವಾರದ ಒಂದು ವರ್ಗದ ನಾಯಕರ ಜತೆಗೆ ಭಿನ್ನಮತ ಹೊಂದಿದ್ದರು. ಹೀಗಾಗಿ ಅವರು ಮುಖ್ಯಮಂತ್ರಿಯಾಗಿದ್ದಾಗ ಪಕ್ಷ ಹಾಗೂ ಸರಕಾರದ ನಡುವಿನ ಅಂತರ ಕಡಿಮೆ ಮಾಡುವ ಪ್ರಯತ್ನಗಳು ನಡೆದಿರಲಿಲ್ಲ. ಆದರೆ ಬೊಮ್ಮಾಯಿ ಪಕ್ಷದ ಮುಖಂಡರ ಜತೆ ಸೌಹಾರ್ದ ಸಂಬಂಧವನ್ನು ಕಾಯ್ದುಕೊಳ್ಳುವುದಕ್ಕೂ ಆದ್ಯತೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ