ಜೋಳ ಖರೀದಿಗೆ ಆಗ್ರಹಿಸಿ ಹೋರಾಟ: ಬಾದರ್ಲಿ
Team Udayavani, Jan 28, 2022, 5:46 PM IST
ಸಿಂಧನೂರು: ರೈತರು ಬೆಳೆದ ಸಂಪೂರ್ಣ ಜೋಳ ಖರೀದಿಗೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ಸಿಂಧನೂರು ನಗರಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಶೀಘ್ರವೇ ಪಕ್ಷಾತೀತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಖರೀದಿ ಮಿತಿ ತೆಗೆಯುವುದಕ್ಕೆ ಸಂಬಂಧಿಸಿ ಕಳೆದ ಗುರುವಾರ ನಡೆದ ಕೃಷಿ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪಸಮಿತಿಯಲ್ಲಿ ವಾರದ ಬಳಿಕ ನಿರ್ಧಾರ ಎನ್ನಲಾಗಿತ್ತು. ವಾರ ಕಳೆದು ಹೋಗಿದೆ. ಆದರೂ, ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದನ್ನು ಖಂಡಿಸಿ ಹೋರಾಟ ನಡೆಸಲಾಗುವುದು ಎಂದರು.
ನೇಮಕಾತಿಯಲ್ಲಿ ಅನ್ಯಾಯ: ಪಿಎಸ್ಐ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಭಾಗದಲ್ಲಿ ಶಿಕ್ಷಣ ಹಾಗೂ ಉದ್ಯೋಗ ಸಿಗಲಿ ಎನ್ನುವ ಮಹೋನ್ನತ ಉದ್ದೇಶದಿಂದ ಕಾಂಗ್ರೆಸ್ 371(ಜೆ) ಅನುಷ್ಠಾನಕ್ಕೆ ತಂದಿತ್ತು. ಸರಕಾರದ ನೇಮಕಾತಿ ನಿಮಯಗಳಿಂದ ಈ ಭಾಗದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಒತ್ತಾಯಿಸಿ ಸಿಎಂ ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದರು.
ಸ್ಮಶಾನದಲ್ಲಿ ನಿರ್ಮಾಣ ಬೇಡ
ಕಲ್ಲೂರು ಬಳಿಯ ಸ್ಮಶಾನದಲ್ಲಿ ಹಿರಿಯರ ಆತ್ಮಗಳಿವೆ. ಅಂತಹ ಜಾಗದಲ್ಲಿ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಾಣ ಸರಿಯಲ್ಲ. ಹಿರಿಯ ಆತ್ಮಗಳಿಗೆ ಇದರಿಂದ ನೋವಾಗುತ್ತದೆ. ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ನೂತನವಾಗಿ ನೇಮಕವಾದ ಅಸಂಘಟಿತ ಕಾರ್ಮಿಕರ ವಿಭಾಗದ ಕಾಂಗ್ರೆಸ್ ಘಟಕದ ನಗರ ಅಧ್ಯಕ್ಷ ನಿರುಪಾದಿ ಗೋಮರ್ಸಿ, ಗ್ರಾಮೀಣ ಬ್ಲಾಕ್ನ ಅಧ್ಯಕ್ಷರಾಗಿ ರಾಜಾ ಹುಸೇನ ಗಾಂಧಿ ನಗರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ