ಪುತ್ತೂರು: ಜೀಪ್-ರಿಕ್ಷಾ ಢಿಕ್ಕಿ; ಮೂವರು ಕೂಲಿ ಕಾರ್ಮಿಕರು ಗಂಭೀರ
Team Udayavani, Jan 29, 2022, 12:05 PM IST
ಪುತ್ತೂರು: ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ಜೀಪ್ ಮತ್ತು ರಿಕ್ಷಾ ಢಿಕ್ಕಿಯಾಗಿ ಮೂವರ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಕೆಯ್ಯೂರಿನಿಂದ ದೇರ್ಲ ಕಡೆಗೆ ಹೋಗುತ್ತಿದ್ದ ಜೀಪು, ದೇರ್ಲ ಕಡೆಯಿಂದ ಕೆಯ್ಯೂರು ಕಡೆಗೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಕೂಲಿ ಕಾರ್ಮಿಕರಾದ ಪ್ರವೀಣ್, ಗುರು, ಅನೀಶ್ ಎಂಬವರು ತ್ರೀವವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದ್ಯೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.
ರಿಕ್ಷಾ ಚಾಲಕ ಗಿರಿಧರ ಎಟ್ಯಡ್ಕ, ಜೀಪು ಚಾಲಕ ಚಂದ್ರಶೇಖರ ಕಣಿಯಾರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ