ನಿರ್ಗತಿಕರಿಗೆ ಆಹಾರ ಧಾನ್ಯ ಕಿಟ್ ವಿತರಣೆ
Team Udayavani, Jan 29, 2022, 12:48 PM IST
ಜೇವರ್ಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನ್ಮದಿನದ ಅಂಗವಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಶೋಕ ಸಾಹು ಗೋಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಬಡ, ನಿರ್ಗತಿಕ ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಲು ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಶುಕ್ರವಾರ ಚಾಲನೆ ನೀಡಿದರು.
ತಾಲೂಕಿನ ಹರವಾಳ ಕ್ರಾಸ್ ಹತ್ತಿರದ ಶ್ರೀ ಮೂಕಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಿಟ್ ವಿತರಿಸುವ ಸಮಾರಂಭದಲ್ಲಿ ಬಡವರಿಗೆ, ನಿರ್ಗತಿಕ ಕುಟುಂಬಗಳಿಗೆ ಜೋಳ, ಅಕ್ಕಿ, ಬೇಳೆ, ಎಣ್ಣೆ ಸೇರಿದಂತೆ ವಿವಿಧ ಪದಾರ್ಥಗಳ ಆಹಾರ ಧಾನ್ಯದ ಕಿಟ್ಗಳನ್ನು ಮಾಲೀಕಯ್ಯ ಗುತ್ತೇದಾರ ವಿತರಿಸಿ, ಅಶೋಕ ಗೋಗಿ ಕಾರ್ಯವನ್ನು ಶ್ಲಾಘಿಸಿದರು.
ನಂತರ ತಾಲೂಕಿನ ರದ್ದೇವಾಡಗಿ, ಕೋಳಕೂರ, ಕೂಡಿ, ರಾಸಣಗಿ, ಬಣಮಿ, ಕೋಬಾಳ, ಹಂದನೂರ ಸೇರಿದಂತೆ 20 ಹಳ್ಳಿಗಳಿಗೆ ತೆರಳಿ ನೂರಾರು ಬಡವರಿಗೆ ಕಿಟ್ ವಿತರಿಸಲಾಯಿತು.
ಸಮಾಜ ಸೇವಕ ಅಶೋಕ ಸಾಹು ಗೋಗಿ, ಶಿವಾನಂದ ಸಾಹು ಮಾಕಾ, ರೇವಣಸಿದ್ಧ ಅಕ್ಕಿ, ಶರಣು ಮುತ್ತಕೋಡ ಕಲ್ಲಹಂಗರಗಾ, ದೇವಿಂದ್ರ ಜನಿವಾರ, ಶಂಕರಲಿಂಗ ಕರಕಿಹಳ್ಳಿ, ಹಣಮಂತ್ರಾವ ಹೂಗಾರ, ಅಶೋಕ ಸಾಹು ಗಣಜಲಖೇಡ, ಪ್ರಭಾಕರ ರಬಶೆಟ್ಟಿ, ವಿಶ್ವನಾಥ ಪಾಟೀಲ ಗವನಳ್ಳಿ, ಬಸವರಾಜ ಮಾಲಿಪಾಟೀಲ ಗವನಳ್ಳಿ, ನಾಗರಾಜ ಕಲ್ಲಹಂಗರಗಾ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ