ಸಿನಿಮಾ ಥಿಯೇಟರ್ಗೂ 100% ವಿನಾಯಿತಿ ನೀಡುವಂತೆ ವಾಣಿಜ್ಯ ಮಂಡಳಿ ಮನವಿ
Team Udayavani, Jan 29, 2022, 4:21 PM IST
ಬೆಂಗಳೂರು: ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಹಲವು ನಿಯಮಗಳನ್ನು ಸಡಿಲಿಕೆ ಮಾಡಿದೆ. ಜ.31ರ ಬಳಿಕ ನೈಟ್ ಕರ್ಫ್ಯೂ ರದ್ದು ಸೇರಿದಂತೆ ಹಲವಾರು ನಿಯಮಗಳುಳ್ಳ ಹೊಸ ಮಾರ್ಗಸೂಚಿಯನ್ನು ಸರ್ಕಾರ ಇಂದು ಪ್ರಕಟಿಸಿದೆ.
ಆದರೆ ಚಿತ್ರಮಂದಿರಗಳಿಗಿದ್ದ 50-50 ನಿಯಮವನ್ನು ಮುಂದುವರಿಸಲಾಗಿದೆ. ಹೀಗಾಗಿ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.
ಸಿನಿಮಾ ಥಿಯೇಟರ್ಗೂ 100% ವಿನಾಯಿತಿ ನೀಡುವಂತೆ ಸಿಎಂ ಬೊಮ್ಮಾಯಿಗೆ ವಾಣಿಜ್ಯ ಮಂಡಳಿ ಮನವಿ ಪತ್ರ ಸಲ್ಲಿಸಿತು. ವಾಣಿಜ್ಯ ಮಂಡಳಿ ಸಭೆ ಬಳಿಕ ಸಿಎಂ ಬೊಮ್ಮಾಯಿ ಆರ್ ಟಿ ನಗರ ನಿವಾಸಕ್ಕೆ ತೆರಳಿದರು. ಬಳಿಕ ಕಂದಾಯ ಸಚಿವ ಆರ್.ಅಶೋಕ್ ಅವರು ವಾಣಿಜ್ಯ ಮಂಡಳಿ ಸದಸ್ಯರ ಜೊತೆ ಚರ್ಚೆ ನಡೆಸಿದರು.
ಇದನ್ನೂ ಓದಿ:ಶಾಲಾರಂಭಕ್ಕೆ ಗ್ರೀನ್ ಸಿಗ್ನಲ್, ನೈಟ್ ಕರ್ಫ್ಯೂ ರದ್ದು: ಹೊಸ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, “ನಾವು ಸೋಮವಾರ ಮತ್ತೆ ಸಿಎಂ ಭೇಟಿ ಮಾಡುತ್ತೇವೆ. ಎಸ್ಒಪಿ ನಿಯಮಗಳ ಪಾಲನೆ ಮಾಡಿ ಚಿತ್ರಮಂದಿರ ನಡೆಸುತ್ತೇವೆ. ಇದರ ಬಗ್ಗೆ ಸಿಎಂಗೆ ಮಾಹಿತಿ ಕೊಡುತ್ತೇವೆ. ಚಿತ್ರಮಂದಿರಗಳ ಎಸಿ, ನಾನ್ ಎಸಿ ಮಾಹಿತಿ ಕೊಡುತ್ತೇವೆ. ಹಲವು ಚಿತ್ರಗಳು ಬಿಡುಗಡೆಗೆ ಕಾದಿವೆ. ಈಗಾಗಲೇ ಚಿತ್ರರಂಗಕ್ಕೆ ಸಾಕಷ್ಟು ನಷ್ಟವಾಗಿದೆ. ಮುಂದಿನ ಶುಕ್ರವಾರ ಸರ್ಕಾರ ನಿರ್ಬಂಧ ತೆರವು ಮಾಡುವ ವಿಶ್ವಾಸವಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
MUST WATCH
ಹೊಸ ಸೇರ್ಪಡೆ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು