ಮಜೂರಿ ಹೆಚ್ಚಳಕ್ಕಾಗಿ ಆಗ್ರಹಿಸಿ ಪ್ರತಿಭಟನೆ

ಕೋವಿಡ್‌ ಸಂದರ್ಭದಲ್ಲಿ ಉದ್ಯೋಗ ಇಲ್ಲದೆ ಇರುವುದರಿಂದ ಬಹಳಷ್ಟು ನೇಕಾರರು ತೊಂದರೆ ಅನುಭವಿಸಿದ್ದಾರೆ

Team Udayavani, Jan 29, 2022, 6:09 PM IST

ಮಜೂರಿ ಹೆಚ್ಚಳಕ್ಕಾಗಿ ಆಗ್ರಹಿಸಿ ಪ್ರತಿಭಟನೆ

ರಬಕವಿ-ಬನಹಟ್ಟಿ: ಜೋಡಣಿದಾರರ ನೇಕಾರರು ಮಜೂರಿ ಹೆಚ್ಚಳಕ್ಕಾಗಿ ಮೂರು ದಿನಗಳಿಂದ ತಮ್ಮ ಮಗ್ಗಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಅಂದಾಜು 3000ಕ್ಕೂ ಹೆಚ್ಚು ಮಗ್ಗಗಳು ಮೂರು ದಿನಗಳಿಂದ ಬಂದ್‌ ಆಗಿವೆ.

ಜೋಡಣಿದಾರರ ಮಗ್ಗಗಳು ಬಂದಾಗಿರುವುದರಿಂದ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಅವಲಂಬಿತರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜೋಡಣಿದಾರರ ನೇಕಾರರ ಮುಖಂಡರಾದ ಕುಬೇರ ಸಾರವಾಡ ಮತ್ತು ಕುಮಾರ ಬೀಳಗಿ ಹೇಳಿದರು. ಜೋಡಣಿದಾರ ನೇಕಾರರು ಮಜೂರಿ ಹೆಚ್ಚಳಕ್ಕಾಗಿ ಆಗ್ರಹಿಸಿ ಉಪ ತಹಶೀಲ್ದಾರ್‌ ಎಸ್‌. ಎಲ್‌.ಕಾಗಿಯವರ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಪ್ರತಿ ಸೀರೆಗೆ 9 ರೂ. ಹೆಚ್ಚು ಮಾಡುವಂತೆ ಮಾಲೀಕರಿಗೆ ಜನವರಿ 7ರಂದು ನೊಟೀಸ್‌ ನೀಡಲಾಗಿತ್ತು. ಆದರೆ, ಜೋಡಣಿದಾರ ಮಾಲೀಕರು 4.50 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಮಾಲೀಕರು ಬೇಡಿಕೆಗೆ ಸ್ಪಂದಿಸದೆ ಇರುವುದರಿಂದ ಮೂರು ದಿನಗಳಿಂದ ಮಗ್ಗಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತಿದ್ದೇವೆ.

ಈಗಾಗಲೇ ಪಕ್ಕದ ರಬಕವಿ ನಗರದಲ್ಲಿ 9ರೂ. ಹೆಚ್ಚಳ ಮಾಡಿದ್ದಾರೆ. ಆದ್ದರಿಂದ ನಮಗೂ ಕೂಡಾ 9 ರೂ. ನೀಡಬೇಕು ಎಂದು ಕೇಳಿದ್ದೇವೆ. ಈಗ ಜೋಡಣಿದಾರರ ನೇಕಾರರಿಗೆ ಒಂದು ಸೀರೆಗೆ 93 ರೂ. ಕೊಡಲಾಗುತ್ತಿದೆ ಎಂದರು.

ಜೋಡಣಿದಾರರ ನೇಕಾರರು ಕೂಡಾ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. 2015ರಿಂದ ಮಜೂರಿ ಹೆಚ್ಚಳಕ್ಕಾಗಿ ಬೇಡಿಕೆ ಇಟ್ಟಿಲ್ಲ. ಏಳು ವರ್ಷಗಳಿಂದ ಒಂದೇ ಮಜೂರಿಯಲ್ಲಿ ಉದ್ಯೋಗ ಮಾಡುತ್ತಿದ್ದೇವೆ. ಮಾರುಕಟ್ಟೆಯಲ್ಲಿ ಆಹಾರ ಪದಾರ್ಥ, ತರಕಾರಿ ಬೆಲೆಗಳು ಸೇರಿದಂತೆ ಇನ್ನೀತರ ಅವಶ್ಯಕ ವಸ್ತುಗಳ ಬೆಲೆಗಳು ಹೆಚ್ಚಾಗಿವೆ. ಅದೇ ರೀತಿಯಾಗಿ ಕೋವಿಡ್‌ ಸಂದರ್ಭದಲ್ಲಿ ಉದ್ಯೋಗ ಇಲ್ಲದೆ ಇರುವುದರಿಂದ ಬಹಳಷ್ಟು ನೇಕಾರರು ತೊಂದರೆ ಅನುಭವಿಸಿದ್ದಾರೆ.

ಅದೇ ರೀತಿಯಾಗಿ ವಿದ್ಯುತ್‌ ದರ ಕೂಡಾ ಹೆಚ್ಚಾಗಿದೆ. ಒಂದು ಎಚ್‌.ಪಿ ಮೋಟಾರ್‌ಗೆ ಕನಿಷ್ಟ ದರವನ್ನು 25 ರೂ. ಇದ್ದ ಬೆಲೆಯನ್ನು 75 ರೂ.ಗೆ ಹೆಚ್ಚಳ ಮಾಡಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ನೀಡಿದ ರಿಯಾಯ್ತಿಯನ್ನು ವಿದ್ಯುತ್‌ ಇಲಾಖೆಯವರು ಈಗ ಮರಳಿ ಪಡೆದುಕೊಳ್ಳುತ್ತಿದ್ದಾರೆ. ಇದು ಭಾರಿ ಹೊಣೆಯಾಗಿದೆ. ಮಾರುಕಟ್ಟೆಯಲ್ಲಿ ಮಗ್ಗದ ಬಿಡಿ ಭಾಗಗಳು ದುಬಾರಿಯಾಗಿವೆ. ಇದರಿಂದಾಗಿ ಮಗ್ಗಗಳ ನಿರ್ವಹಣೆ ಕೂಡಾ ಸಮಸ್ಯೆಯಾಗಿದೆ ಎನ್ನುತ್ತಾರೆ ಜೋಡಣಿದಾರರು.

ಆದ್ದರಿಂದ ಜೋಡಣಿದಾರ ನೇಕಾರಿಕೆ ಅವಲಂಬಿಸಿದ ಕುಟುಂಬಗಳು ಎರಡು ಹೊತ್ತಿನ ಊಟ ಮಾಡಬೇಕಾದರೆ 9 ರೂ. ಮಜೂರಿ ಹೆಚ್ಚಳವಾಗಬೇಕಾಗಿದೆ ಎಂದು ಮುಖಂಡರಾದ ಬಸವರಾಜ ಮುರಗೋಡ, ಪರಮಾನಂದ ಭಾವಿಕಟ್ಟಿ,ಮಹಾದೇವ ನುಚ್ಚಿ, ಬಾಗಪ್ಪ ಬಾಣಕಾರ, ನಾಮದೇವ ಮಾನೆ, ರಮೇಶ ಸುಪ್ತಾನಪುರ ಸೇರಿದಂತೆ ನೂರಾರು ನೇಕಾರರು ಆಗ್ರಹಿಸಿದರು. ಬನಹಟ್ಟಿಯಲ್ಲಿ ಜೋಡಣಿದಾರ ನೇಕಾರರು ಮಜೂರಿ ಹೆಚ್ಚಳಕ್ಕಾಗಿ ಆಗ್ರಹಿಸಿ ಉಪ ತಹಶೀಲ್ದಾರ್‌ ಎಸ್‌.ಎಲ್‌.ಕಾಗಿಯವರ ಅವರಿಗೆ ಮನವಿ ಸಲ್ಲಿಸಿದರು.

ನೇಕಾರ ಮಾಲೀಕರ ಮುಖಂಡರಾದ ಶಂಕರ ಜಾಲಿಗಿಡದ ಮಾತನಾಡಿ, ಈಗಾಗಲೇ ನಾವು 4.50 ರೂ. ಹೆಚ್ಚಳ ಮಾಡುತ್ತೇವೆ ಎಂದು ಹೇಳಿದ್ದೇವೆ. ಇದಕ್ಕೆ ಸ್ಪಂದಿಸಿದ ಕೆಲವು ನೇಕಾರರು ಉದ್ಯೋಗದಲ್ಲಿ ತೊಡಗಿದ್ದಾರೆ. ನೇಕಾರ ಮಾಲೀಕರ ಮುಖಂಡರಿಗೂ ಸಾಕಷ್ಟು ಸಮಸ್ಯೆಗಳಿವೆ. ನೇಕಾರಿಕೆಯ ಉದ್ಯೋಗಕ್ಕೆ ಬೇಕಾದ ಕಚ್ಚಾ ನೂಲು, ಬಣ್ಣ, ಝರಿ, ಚಮಕಾ ಜೊತೆಗೆ ಜಿಎಸ್ಟಿ ಏರಿಕೆಯಿಂದಾಗಿ ನಮಗೂ ಕೂಡಾ ಹೊರೆಯಾಗಿದೆ. ಇವೆಲ್ಲವುಗಳಿಂದ ಮುಖ್ಯವಾಗಿ ನಮ್ಮ ಸೀರೆಗಳಿಗೆ ಮಾರುಕಟ್ಟೆಯೂ ಕೂಡಾ ಕಡಿಮೆಯಾಗುತ್ತಿದೆ. ನಾವು ನೇಕಾರರಿಗೂ ಮುಂಗಡ ಹಣ ನೀಡಬೇಕಾಗಿದೆ. ಜೊತೆಗೆ ಸೀರೆ ಖರೀದಿ ಮಾಡಿದವರಿಗೂ ಕೂಡಾ ಉದ್ರಿ ನೀಡಬೇಕಾಗಿದೆ. ಆದ್ದರಿಂದ ನಾವು 4.50 ರೂ. ಕೊಡಲು ಸಂಪೂರ್ಣ ಒಪ್ಪಿದ್ದೇವೆ ಎಂದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.