ನಾಗಮಂಗಲ ಕ್ಷೇತ್ರದ ದಳ ಟಿಕೆಟ್‌ಗೆ ಫೈಟ್‌


Team Udayavani, Jan 31, 2022, 12:15 PM IST

ನಾಗಮಂಗಲ ಕ್ಷೇತ್ರದ ದಳ ಟಿಕೆಟ್‌ಗೆ ಫೈಟ್‌

ಮಂಡ್ಯ: ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ನಾಗಮಂಗಲದಲ್ಲಿ ರಾಜಕಾರಣ ಬಿರುಸು ಪಡೆದುಕೊಂಡಿದೆ. ಜೆಡಿಎಸ್‌ ಪಕ್ಷದ ಹಾಲಿ-ಮಾಜಿ ಶಾಸಕರ ನಡುವೆ ಟಿಕೆಟ್‌ ಫೈಟ್‌ ವಾರ್‌ ಶುರುವಾಗಿದೆ.

ಈಗಾಗಲೇ ಹಾಲಿ ಶಾಸಕ ಕೆ.ಸುರೇಶ್‌ಗೌಡ ವರಿಷ್ಠರು ನನಗೆ ಟಿಕೆಟ್‌ ನೀಡಲಿದ್ದಾರೆ ಎಂದುಹೇಳುತ್ತಿದ್ದಾರೆ. ಇತ್ತ ಎಲ್‌.ಆರ್‌.ಶಿವರಾಮೇಗೌಡ ನನಗೆ ಟಿಕೆಟ್‌ ನೀಡಲಿದ್ದು, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದು ಹೋದ ಕಡೆಯಲೆಲ್ಲ ಹೇಳಿಕೊಳ್ಳುತ್ತಿದ್ದಾರೆ. ಇದರಿಂದ ಇಬ್ಬರ ನಡುವಿನ ಶೀಥಲ ಸಮರಕ್ಕೆ ನಾಂದಿ ಹಾಡಿದೆ.

ಕಾರ್ಯಕರ್ತರಿಗೆ ಎಲ್‌ಆರ್‌ಎಸ್‌ ಗಾಳ: ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಶಿವರಾಮೇಗೌಡ ನಾಗಮಂಗಲ ಕ್ಷೇತ್ರದ ಹೋಬಳಿವಾರು ಕಾರ್ಯಕರ್ತರಿಗೆ ಗಾಳ ಹಾಕಲು ಮುಂದಾಗಿದ್ದಾರೆ. ಅದರಂತೆ ಕೊಪ್ಪ ಹೋಬಳಿಯ ಮಹಿಳಾ ಕಾರ್ಯಕರ್ತೆಯೊಬ್ಬರಿಗೆ ಕರೆ ಮಾಡಿ ಬೆಂಬಲಿಸುವಂತೆ ಕೋರಿರುವ ಆಡಿಯೋ ವೈರಲ್‌ ಆಗಿದೆ.

ಶೀಥಲ ಸಮರ: ಶಾಸಕ ಕೆ.ಸುರೇಶ್‌ಗೌಡ ಹಾಗೂ ಮಾಜಿ ಶಾಸಕ ಶಿವರಾಮೇಗೌಡ ನಡುವೆ ಮೊದಲಿ  ನಿಂದಲೂ ಭಿನ್ನಾಭಿಪ್ರಾಯ, ವೈಮನಸ್ಸು ಕೇಳಿ ಬರುತ್ತಲೇ ಇದೆ. ಹಲವು ಬಾರಿ ಸುರೇಶ್‌ಗೌಡ ವಿರುದ್ಧಶಿವರಾಮೇಗೌಡ ಭ್ರಷ್ಟಾಚಾರದ ಆರೋಪ ಮಾಡುತ್ತಲೇ ಬಂದಿದ್ದಾರೆ. ವೈರಲ್‌ಆಗಿರುವ ಆಡಿಯೋದಲ್ಲೂ ಸಹ ಸುರೇಶ್‌ಗೌಡವಿರುದ್ಧ ಕಿಡಿಕಾರಿರುವುದು ಇಬ್ಬರ ನಡುವಿನ ಕದನ ಬಹಿರಂಗ ಗೊಂಡಂತಾಗಿದೆ.

ಟಿಕೆಟ್‌ಗಾಗಿ ತ್ರಿಮೂರ್ತಿಗಳ ಫೈಟ್‌: ನಾಗಮಂಗಲ ಜೆಡಿಎಸ್‌ನಲ್ಲಿ ತ್ರಿಮೂರ್ತಿಗಳ ನಡುವಿನ ಅಸಮಾಧಾನ, ಭಿನ್ನಾಭಿಪ್ರಾಯ ಹೊಸದೇನಲ್ಲ. ಮಾಜಿ ಸಂಸದ ಶಿವರಾಮೇಗೌಡ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ ಎನ್‌.ಅಪ್ಪಾಜಿಗೌಡಇಬ್ಬರು ಒಂದಾಗಿದ್ದು, ಸುರೇಶ್‌ಗೌಡ ವಿರುದ್ಧ ಕಿಡಿಕಾರುತ್ತಿದ್ದರು. ಆದರೆ, ಈಗ ಜೆಡಿಎಸ್‌ ಟಿಕೆಟ್‌ಗಾಗಿ ಮೂವರ ನಡುವೆ ಫೈಟ್‌ ಶುರವಾಗಿದೆ ಎನ್ನಲಾಗುತ್ತಿದೆ. ಶಿವರಾಮೇಗೌಡ ಹಾಗೂ ಸುರೇಶ್‌ ಗೌಡ ನನಗೆ ಟಿಕೆಟ್‌ ನೀಡಲಿದ್ದಾರೆ ಎಂದು ಜಗಳವಾಡುತ್ತಿದ್ದರೆ, ಎನ್‌.ಅಪ್ಪಾಜಿಗೌಡ ಮೌನವಾಗಿಯೇ ವರಿಷ್ಠರ ಮೇಲೆ ಟಿಕೆಟ್‌ಗಾಗಿ ಒತ್ತಡ ಹಾಕುತ್ತಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಅಪ್ಪಾಜಿಗೌಡ ಪಾಲಾದರೂ ಅಚ್ಚರಿಯಿಲ್ಲ: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೂ ವರಿಷ್ಠರ ಮಾತಿಗೆ ಕಟ್ಟುಬಿದ್ದು ಸ್ಪರ್ಧೆ ಮಾಡಿದ್ದೆ. ಆದರೆ ಗೆಲುವು ಸಾಧ್ಯವಾಗಲಿಲ್ಲ. ಆದರೆ ಈಗ ನಾಗಮಂಗಲ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಟಿಕೆಟ್‌ ನೀಡಬೇಕು ಎಂದು ವರಿಷ್ಠರಿಗೆ ದುಂಬಾಲು ಬಿದ್ದಿದ್ದಾರೆ.ಶಿವರಾಮೇಗೌಡ ಹಾಗೂ ಸುರೇಶ್‌ಗೌಡ ನಡುವಿನಟಿಕೆಟ್‌ ಸಮರದಲ್ಲಿ ಅಂತಿಮವಾಗಿ ಅಪ್ಪಾಜಿಗೌಡ ಪಾಲಾದರೂ ಅಚ್ಚರಿಯಿಲ

ಮಗನಿಗೂ ಟಿಕೆಟ್‌ ಕೊಡಿಸಲು ಯತ್ನ :

ನಾಗಮಂಗಲ ತಾಲೂಕಿನ ಚೀಣ್ಯ ಜಿಪಂ ಕ್ಷೇತ್ರದಿಂದ ತಮ್ಮ ಮಗ ಚೇತನ್‌ ಗೌಡಗೆ ಟಿಕೆಟ್‌ ಕೊಡಿಸಲು ಈಗಾಗಲೇ ಕಸರತ್ತು ಆರಂಭಿಸಿರುವಶಿವರಾಮೇಗೌಡ, ತನಗೂ ವಿಧಾನಸಭಾ ಕ್ಷೇತ್ರದ ಟಿಕೆಟ್‌ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ. ವೈರಲ್‌ ಆಗಿರುವ ಆಡಿಯೋದಲ್ಲಿ ಮುಂದಿನವಿಧಾನಸಭಾ ಚುನಾವಣೆಯಲ್ಲಿ 30 ಕೋಟಿ ರೂ. ಖರ್ಚು ಮಾಡುವುದಾಗಿ ತಿಳಿಸಿದ್ದಾರೆ. ಲೋಕಸಭೆ ಉಪಚುನಾವಣೆಯಲ್ಲಿ 30 ಕೋಟಿ ರೂ. ಖರ್ಚು ಮಾಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲೂ 30 ಕೋಟಿ ರೂ. ಖರ್ಚು ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.

ಟಿಕೆಟ್‌ ಯಾರಿಗೇ ಸಿಕ್ಕರೂ ಬಂಡಾಯ? :

ಟಿಕೆಟ್‌ಗಾಗಿ ತ್ರಿಮೂರ್ತಿಗಳ ನಡುವಿನ ಶೀಥಲಸಮರಕ್ಕೆ ವರಿಷ್ಠರೇ ಅಂತ್ಯವಾಡಬೇಕಿದೆ. ಮೂವರಲ್ಲಿಯಾರಿಗೆ ಟಿಕೆಟ್‌ ನೀಡಬೇಕು ಎಂಬುದು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂಎಚ್‌.ಡಿ.ಕುಮಾರಸ್ವಾಮಿ ನಿರ್ಧಾರದ ಮೇಲೆ ನಿಂತಿದೆ.ಮೂವರನ್ನು ಸಮಾಧಾನಪಡಿಸುವ ಪ್ರಯತ್ನನಡೆಯಬೇಕಿದೆ. ಮೂವರಲ್ಲಿ ಒಬ್ಬರಿಗೆ ಟಿಕೆಟ್‌ನೀಡಿದರೂ ಇನ್ನೊಬ್ಬರು ಬಂಡಾಯ ಏಳುವ ಸಾಧ್ಯತೆ ಹೆಚ್ಚಿದೆ.

ಜೆಡಿಎಸ್‌ ಟಿಕೆಟ್‌ಗಾಗಿ ಪೈಪೋಟಿ ಯಾಕೆ?: ನಾಗಮಂಗಲ ಕ್ಷೇತ್ರದ ಟಿಕೆಟ್‌ಗೆ ಬೇಡಿಕೆ ಹೆಚ್ಚಿದೆ. ಅಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ  ಪ್ರಭಾವ ಹೆಚ್ಚಿರುವುದರಿಂದ ಜೆಡಿಎಸ್‌ನಿಂದ ಸ್ಪರ್ಧಿಸುವ ಅಭ್ಯರ್ಥಿ ಗೆಲುವಿನ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ಇಡೀ ಜಿಲ್ಲೆಯ ಏಳು ವಿಧಾನಸಭಾಕ್ಷೇತ್ರಗಳ ಪೈಕಿ ಅತಿ ಹೆಚ್ಚು ಒಕ್ಕಲಿಗರ ಮತದಾರರನ್ನು ಹೊಂದಿರುವ ಕ್ಷೇತ್ರವಾಗಿರುವುದರಿಂದದೇವೇಗೌಡರ ಕೃಪಕಟಾಕ್ಷ ಹೆಚ್ಚಿದೆ. ಲೋಕಸಭೆ ಚುನಾವಣೆಯಲ್ಲಿ ನಿಖೀಲ್‌ ಕುಮಾರ ಸ್ವಾಮಿಗೆಲೀಡ್‌ ತಂದುಕೊಟ್ಟಿದ್ದೇ ನಾಗಮಂಗಲ. ಅದಕ್ಕಾಗಿಯೇ ಜೆಡಿಎಸ್‌ ನಾಯಕರ ನಡುವೆಯೇ ಟಿಕೆಟ್‌ಗಾಗಿ ಸಮರ ಏರ್ಪಟ್ಟಿದೆ. ಇನ್ನು ಕಾಂಗ್ರೆಸ್‌ನ ಮಾಜಿ ಸಚಿವ ಎನ್‌.ಚಲುವರಾಯ ಸ್ವಾಮಿ ಈಗಾಗಲೇ ನಾಗಮಂಗಲ ಹಾಗೂ ಮಂಡ್ಯ ಎರಡು ಕ್ಷೇತ್ರಗಳಲ್ಲಿ ಎಲ್ಲಿ ಸ್ಪರ್ಧಿಸಬೇಕು ಎಂಬ ಗೊಂದಲ ದಲ್ಲಿದ್ದಾರೆ. ಅಲ್ಲದೆ, ಒಂದೇ ವರ್ಷ ಚುನಾವಣೆ ಇರುವುದರಿಂದ ಕ್ಷೇತ್ರದಲ್ಲಿ ಚಲು ವರಾಯ ಸ್ವಾಮಿ ಕ್ರಿಯಾಶೀಲರಾಗಿದ್ದಾರೆ. ಅಲ್ಲದೆ, ಮಂಡ್ಯ ಕ್ಷೇತ್ರದಲ್ಲೂ ಸಂಚರಿಸುತ್ತಿದ್ದಾರೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.