ಡಾ. ಅಂಬೇಡ್ಕರ್ ಭಾವಚಿತ್ರ ತೆಗೆದಿಟ್ಟ ಜಡ್ಜ್ ವಜಾಕ್ಕೆ ಒತ್ತಾಯ
Team Udayavani, Feb 1, 2022, 11:35 AM IST
ಕುರುಗೋಡು: ಗಣರಾಜ್ಯೋತ್ಸ ದಿನದಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಛಲವಾದಿ ಮಹಾಸಭಾ ಕುರುಗೋಡು ತಾಲೂಕು ಅಧ್ಯಕ್ಷ ಸಿ. ರಾಮಚಂದ್ರ ಒತ್ತಾಯಿಸಿದ್ದಾರೆ.
ನ್ಯಾಯಾಂಗ ಹುದ್ದೆಯಲ್ಲಿ ಇರುವವರು ಸಂವಿಧಾನ ಶಿಲ್ಪಿ ಅವರ ಭಾವ ಚಿತ್ರಕ್ಕೆ ಅವಮಾನಿಸುವ ಮೂಲಕ ವಿಕೃತಿ ಮನಸ್ಥಿತಿ ಮೆರೆದಿದ್ದಾರೆ. ಅಂಬೇಡ್ಕರ್ ಅವರ ಭಾವ ಚಿತ್ರವಿದ್ದರೆ ದ್ವಜಾರೋಹಣ ಮಾಡುವುದಿಲ್ಲ ಎಂದು ಉಡಾಫೆಯಾಗಿ ಮಾತನಾಡಿರುವುದು ನಾಗರೀಕ ಸಮಾಜ ತಲೆತಗ್ಗಿಸಬೇಕಾದ ಸಂಗತಿ ಎಂದು ಮಾಧ್ಯಮದವರಿಗೆ ಅವರು ತಿಳಿಸಿದರು.
ದೇಶಕ್ಕೆ ಸಂವಿಧಾನ ಬರೆದವರ ಬಗ್ಗೆ ಈ ರೀತಿ ಮಾಡಿರುವುದು ನಾಡಿನಲ್ಲೆಡೆ ಈಗಲೂ ಆಕ್ರೋಶಕ್ಕೆ ಕಾರಣವಾಗಿದೆ. ಇದು ಅತ್ಯಂತ ನೋವಿನ ಸಂಗತಿಯಾಗಿದ್ದು, ಮಾನವ ಕುಲಕ್ಕೆ ಅವಮಾನದ ವಿಚಾರವಾಗಿದೆ.
ಹೀಗಾಗಿ ತಕ್ಷಣವೇ ಹೈಕೋರ್ಟ್ ನ್ಯಾಯಾಮೂರ್ತಿಗಳು ಮಧ್ಯ ಪ್ರವೇಶಿಸಿ ಇಂದಿನ ಆಧುನಿಕ ಕಾಲಘಟ್ಟದಲ್ಲೂ ಅಸ್ಪೃಶ್ಯತೆಯ ಮನೋಭಾವ ಉಳಿಸಿಕೊಂಡಿರುವ ಇವರನ್ನು ನ್ಯಾಯಾಂಗ ಇಲಾಖೆಯಿಂದ ವಜಾ ಮಾಡಬೇಕು ಹಾಗೂ ವಿಷಯದ ಕುರಿತು ದಲಿತ ಪರ ಸಂಘಟನೆ ಗಳು ಸರ್ಕಾರ ಮತ್ತು ಕಾನೂನು ಇಲಾಖೆಗೆ ಮನವಿ ನೀಡಿ ಗಮನಕ್ಕೆ ಕೂಡ ತರಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
ಪ್ರಜ್ವಲ್ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್