ಮಣಿಪಾಲ: ಅಪಘಾತದ ರಭಸಕ್ಕೆ ಧಗಧಗನೇ ಹೊತ್ತಿ ಉರಿದ ಸ್ಕೂಟರ್
Team Udayavani, Feb 1, 2022, 3:38 PM IST
ಮಣಿಪಾಲ: ಲಾರಿಯೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಪ್ಪಳಿಸಿದ ಸ್ಕೂಟರ್ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿಉರಿದ ಘಟನೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಉಡುಪಿಯಿಂದ ಡಿಸಿ ಆಫೀಸ್ ಕಡೆಗೆ ಹೋಗುತ್ತಿದ್ದ ಲಾರಿಯೊಂದು ಸೂಜುಕಿ ಆಕ್ಸಿಸ್ ಸ್ಕೂಟರ್ ಗೆ ಢಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಉರುಳಿದ ಸ್ಕೂಟರ್ ನ ಪೆಟ್ರೋಲ್ ಟ್ಯಾಂಕ್ ಹಾನಿಯಾಗಿ ಸ್ಕೂಟರ್ ಗೆ ಕ್ಷಣಾರ್ಧದಲ್ಲಿ ಬೆಂಕಿ ಹತ್ತಿಕೊಂಡಿದೆ. ನೋಡು ನೋಡುತ್ತಿದ್ದಂತೆ ಸ್ಕೂಟರ್ ಧಗಧಗ ಉರಿದಿದೆ.
ತಕ್ಷಣವೇ ಸಮೀಪದ ಮ್ಯಾಕ್ಸ್ ಬಟ್ಟೆ ಮಳಿಗೆಯ ಸಿಬ್ಬಂದಿ ಬೆಂಕಿ ನಂದಿಸುವ ಸಾಧನ ತಂದು ಸ್ಕೂಟರ್ ಗೆ ಹತ್ತಿಕೊಂಡಿದ್ದ ಬೆಂಕಿ ನಂದಿಸಿದರು. ಇದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು