ವೃಂಧಗಳ ವರ್ಗೀಕರಣ ನೌಕರರನ್ನು ಸ್ಥಳೀಯ ವೃಂಧಕ್ಕೆ ಹಂಚಿಕೆ ಮಾಡದಿರುವುದು ಅಕ್ಷಮ್ಯ : ಬಯ್ಯಾಪೂರ
Team Udayavani, Feb 1, 2022, 7:00 PM IST
ಕುಷ್ಟಗಿ : ಜಲ ಸಂಪನ್ಮೂಲ ಇಲಾಖೆ ಸರ್ಕಾರದ ನಿಯಮಗಳನ್ನು ಗಾಳಿಗೆ ತೋರಿದ್ದು 371(ಜೆ) ನಿಯಮ ಜಾರಿಯಾಗಿ 7 ವರ್ಷಗಳಾದರೂ ವೃಂಧಗಳ ವರ್ಗೀಕರಣ ನೌಕರರನ್ನು ಸ್ಥಳೀಯ ವೃಂಧಕ್ಕೆ ಹಂಚಿಕೆ ಮಾಡದಿರುವುದು ಅಕ್ಷಮ್ಯ ಅಪರಾಧವಾಗಿದೆ. 371 (ಜೆ) ನಿಯಮ ಪಾಲಿಸದಿರುವುದರಿಂದ ಕಲ್ಯಾಣ ಕರ್ನಾಟಕ ಉದ್ಯೋಗ ಆಕಾಂಕ್ಷಿಗಳ ಸಂವಿಧಾನಾತ್ಮಕ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರು, ಸಿಬ್ಬಂದಿ ಮತ್ತು ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಜಲಸಂಪನ್ಮೂಲ ಇಲಾಖೆ ಪ್ರಧಾನ ಇಂಜೀನೀಯರಿಂಗ್ ಇಲಾಖೆಯ, ಜಲ ಸಂಪನ್ಮೂಲ ಅಭಿವೃಧ್ಧಿ ಸಂಸ್ಥೆ ಬೆಂಗಳೂರು ಇವರ ನೇಮಕಾತಿ ಪ್ರಾಧಿಕಾರವಾಗಿರುವ ಪ್ರಥಮ ದರ್ಜೆ ಸಹಾಯಕರು, ಶೀಘ್ರ ಲಿಪಿಕಾರ ಹುದ್ದೆಗಳನ್ನು 371 (ಜೆ ಅನ್ವಯ ಸ್ಥಲಿಯ ಹಾಗೂ ಮಿಕ್ಕುಳಿದ ವೃಂಧಗಳಿಗೆ ಹಂಚಿಕೆ ಮಾಡಿಲ್ಲ. ನಿಯಮದಂತೆ ಸ್ಥಳೀಯ ಮಿಕ್ಕುಳಿದ ವೃಂಧದ ಜೇಷ್ಠತೆ ಪಟ್ಟಿಯನ್ನು ತಯಾರಿಸದೇ ಇರುವುದು ಕಲ್ಯಾಣ ಕರ್ನಾಟಕ ಪ್ರದೇಶ ನೌಕರರಿಗೆ ಸಂವಿಧಾನ ಬದ್ದವಾಗಿ ಬಂದಂತಹ ಸೌಲಭ್ಯದಿಂದ ವಂಚಿತಗೊಳಿಸಿದಂತಾಗಿದೆ.
371 ಅಡಿಯಲ್ಲಿ ರಚಿಸಲಾದ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದ್ರಾಬಾದ ಕರ್ನಾಟಕ ನೇಮಕಾತಿಯ ಮೀಸಲಾತಿ) ಆದೇಶ 2013ರ ನಿಯಮದಂತೆ ನೇಮಕಾತಿ ಹಾಗೂ ಬಡ್ತಿಯಲ್ಲಿ ವೃಂದಗಳ ಆಧಾರದಲ್ಲಿ ಮೀಸಲಾತಿ ನಿಗದಿಗೊಳಿಸುವುದು, ಹುದ್ದೆಗಳ ವರ್ಗೀಕರಣ ಮಾಡುವುದು, ಪ್ರತ್ಯೇಕ ಜೇಷ್ಠತೆ ರಚಿಸುವುದು ಪ್ರತಿಯೊಂದು ಇಲಾಖೆಯ ಕರ್ತವ್ಯವಾಗಿದೆ. ಈ ಪ್ರಕರಣದಲ್ಲಿ ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದು 371 (ಜೆ) ನಿಯಮ ಪಾಲಿಸಿಲ್ಲ 29-1-2014 ರ ಅಧಿಸೂಚನೆ ಯನ್ವಯ ಜಾರಿಯಾದ ಮೂರು ತಿಂಗಳ ಅನ್ವಯ ಈ ಎಲ್ಲಾ ಪ್ರಕ್ರಿಯೆಯನ್ನು ಮಾಡಬೇಕಿತ್ತು.
ಆದರೆ ಈಗ ಸದರಿ ಇಲಾಖೆ 371 (ಜೆ) ನಿಯಮಗಳಂತೆ ಸ್ಥಳೀಯ ಹಾಗೂ ಮಿಕ್ಕುಳಿದ ವೃಂಧದ ಜೇಷ್ಠತಾ ಪಟ್ಟಿಯನ್ನು ತಯಾರಿಸದೇ ಪ್ರಥಮ ದರ್ಜೆ ಸಹಾಯಕರು, ಹಾಗೂ ಶೀಘ್ರಲಿಪಿಕಾರ ಹುದ್ದೆಯಿಂದ ಅಧೀಕ್ಷರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸಿದೆ. ಸದರಿ ಹುದ್ದೆಗೆ ಬಡ್ತಿ ನೀಡುವುದನ್ನು ತಡೆ ಹಿಡಿದು ಸ್ಥಳೀಯ ನೌಕರರ ಹಾಗೂ ಮಿಕ್ಕುಳಿದ ವೃಂದದ ಜೇಷ್ಠತಾ ಪಟ್ಟಿಯನ್ನು ತಯಾರಿಸಿದ ನಂತರ ಬಡ್ತಿ ನೀಡುವಂತೆ ಸಂಬಂಧಿಸಿದ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ