ಕೋರಿಸಿದ್ಧೇಶ್ವರ ರಥೋತ್ಸವ- ಫಲಿಸದ ಸಂಧಾನ: ಲಘು ಲಾಠಿ ಪ್ರಹಾರ
ಸಂಭ್ರಮದ ನಾಲವಾರ ಕೋರಿಸಿದ್ಧೇಶ್ವರ ರಥೋತ್ಸವ
Team Udayavani, Feb 3, 2022, 9:16 AM IST
ವಾಡಿ: ಮಹಾಮಾರಿ ಸಾಂಕ್ರಾಮಿಕ ರೋಗ ಕೊರೊನಾ ಸೋಂಕಿನ ರೂಪಾಂತರಿ ವೈರಸ್ ಹೆಚ್ಚಾಗುತ್ತಿರುವ ಕಾರಣಕ್ಕೆ ಮಾರ್ಗಸೂಚಿಗಳನ್ವಯ ರದ್ದಾಗಿದ್ದ ಚಿತ್ತಾಪುರ ತಾಲೂಕಿನ ನಾಲವಾರ ಶ್ರೀಕೋರಿಸಿದ್ಧೇಶ್ವರ ರಥೋತ್ಸವ ಬುಧವಾರ ತಾಲೂಕು ಆಡಳಿತದ ಆದೇಶವನ್ನು ಧಿಕ್ಕರಿಸಿ ಸಾಗಿತು. ಪೊಲೀಸರ ಸರ್ಪಗಾವಲು ಬೇಧಿಸಿ ರಥ ಎಳೆದ ಭಕ್ತರು, ಜಯಘೋಷಗಳನ್ನು ಮೊಳಗಿಸಿ ಕಾನೂನಿನ ಬೇಲಿ ಜಿಗಿದರು.
ಜಾತ್ರೆಗೂ ಮುಂಚೆ ನಾಲವಾರ ಮಠದಲ್ಲಿ ಪೀಠಾಧಿಪತಿ ಡಾ.ಸಿದ್ಧ ತೋಟೇಂದ್ರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಶಾಂತಿ ಸಭೆ ನಡೆಸಿ ಜಾತ್ರೆ, ತನಾರತಿ, ರಥೋತ್ಸವ ಸಂಪೂರ್ಣ ರದ್ದು ಎಂದು ಘೋಷಿಸಿದ್ದ ಪೊಲೀಸರು ಹಾಗೂ ತಹಶೀಲ್ದಾರರ ಸಮ್ಮುಖದಲ್ಲೇ ಬುಧವಾರ ಲಕ್ಷಾಂತರ ಭಕ್ತರ ಸಾಕ್ಷಿಯಾಗಿ ಅದ್ಧೂರಿ ರಥೋತ್ಸವ ನಡೆಯಿತು.
ಸಾಂಪ್ರದಾಯಿಕ ಆಚರಣೆಗಾಗಿ ತಾಲೂಕು ಆಡಳಿತ ಕೇವಲ ಹತ್ತು ಅಡಿ ರಥ ಎಳೆಯಲು ಅವಕಾಶ ನೀಡಿತ್ತು. ಆದರೆ ಭಕ್ತರು ಮಾತು ಕೇಳಲಿಲ್ಲ. ತಹಶೀಲ್ದಾರ ಉಮಾಕಾಂತ ಹಳ್ಳೆ, ಸಿಪಿಐ ಪ್ರಕಾಶ ಯಾತನೂರ ಹಾಗೂ ಪಿಎಸ್ಐ ಮಹಾಂತೇಶ ಪಾಟೀಲ ಅವರು ರಥವನ್ನು ಏರಿ ಸ್ವಾಮೀಜಿಯ ಮನವೊಲಿಸುವ ಪ್ರಯತ್ನ ಮಾಡಿದರು. ರಥ ಎಳೆಯದಂತೆ ಮನವಿ ಮಾಡಿದರು.
ಅದಾಗ್ಯೂ ಪ್ರತಿವರ್ಷದಂತೆ ರಥ ನಿಗದಿತ ಸ್ಥಳಕ್ಕೆ ತಲುಪುವ ಮೂಲಕ ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಸಂಗ ನಡೆಯಿತು. ಸಾಗುತ್ತಿದ್ದ ತೇರನ್ನು ನೋಡುತ್ತ ಪೊಲೀಸರು ಮೂಕ ಪ್ರೇಕ್ಷರಂತೆ ನಿಂತರು. ಭಕ್ತರು ಬಾರೆ ಹಣ್ಣು ಎಸೆದು ಭಕ್ತಿಯ ಹರಕೆ ತೀರಿಸಿದರು.
ಲಾಠಿ ಪ್ರಹಾರ-ಕಾಲ್ತುಳಿತ: ರಥೋತ್ಸವ ವೇಳೆ ಮಠದ ಮುಖಂಡರು, ಪೂಜಾರಿಗಳೊಂದಿಗೆ ಪೊಲೀಸರು ವಾಗ್ವಾದ ನಡೆಸಿದ ಪ್ರಸಂಗ ನಡೆಯಿತು. ಅಧಿಕಾರಿಗಳ ಕಟ್ಟೆಚ್ಚರ ಧಿಕ್ಕರಿಸಿ ಭಕ್ತರು ರಥ ಎಳೆಯುತ್ತಿದ್ದಾಗ ಏಕಾಏಕಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಪರಿಣಾಮ ಯುವಕರು ಓಡಲು ಶುರುಮಾಡಿದ್ದರಿಂದ ಮಕ್ಕಳೊಂದಿಗೆ ಜಾತ್ರೆಗೆ ಬಂದಿದ್ದ ಅನೇಕ ಜನ ಮಹಿಳೆಯರು ಕಾಲ್ತುಳಿತಕ್ಕೊಳಗಾಗಿ ಗಾಯಗೊಂಡರು. ಎದೋಬಿದ್ದೋ ಓಡಿದ ಜನರು ಉಸಿರುಗಟ್ಟುವ ಪರಸ್ಥಿತಿ ಅನುಭವಿಸಿದರು.
ಇಷ್ಟು ಜನರು ಸೇರಲು ಬಿಟ್ಟು ಈಗ ಲಾಠಿ ಬೀಸುವುದು ಸರಿನಾ ಎಂದು ಭಕ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ನಿಯಮಗಳ ನಡುವೆಯೂ ತಾಲೂಕು ಆಡಳಿತದ ಆದೇಶಕ್ಕೆ ತಿಲಾಂಜಲಿಯಿಟ್ಟ ನಾಲವಾರ ಮಠದ ಜಾತ್ರಾ ಸಮಿತಿ, ಸಡಗರದ ಜಾತ್ರೆ ನಡೆಸಿಯೇ ತೀರುವ ಮೂಲಕ ಕಾನೂನುಗಳಿಗೆ ಸವಾಲು ಹಾಕಿದ್ದು ಸಾರ್ವಜನಿಕ ಚರ್ಚೆಗೆ ಕಾರಣವಾಯಿತು.
ಹತ್ತು ಮಂದಿ ಮುಖಂಡರ ವಿರುದ್ಧ ಪ್ರಕರಣ ದಾಖಲು: ರಥೋತ್ಸವ ರದ್ಧುಪಡಿಸಿ ಕೋವಿಡ್ ಮಾರ್ಗಸೂಚಿ ಪಾಲಿಸುವುದಾಗಿ ಶಾಂತಿ ಸಭೆಯಲ್ಲಿ ಭರವಸೆ ನೀಡಿದ್ದ ನಾಲವಾರ ಮಠದ ಜಾತ್ರಾ ಸಮಿತಿಯ ಹತ್ತು ಜನ ಮುಖಂಡರ ವಿರುದ್ಧ ವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಾರತಿ, ರಥೋತ್ಸವ ಹಾಗೂ ಜಾತ್ರೆಗೆ ಅವಕಾಶ ಇರುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದ್ದ ತಾಲೂಕು ಆಡಳಿತವೇ ನೆರೆದಿದ್ದ ಜನಸ್ತೋಮ ಕಂಡು ಬೆರಗಾಯಿತು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ತಹಶೀಲ್ದಾರರ ಆದೇಶದ ಮೇರೆಗೆ ಪೊಲೀಸರು ನಾಲವಾರ ಮಠದ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ