ನಡುಹಗಲೇ ಕಿಲ್ಲರ್‌ ವಾಹನಗಳ ಆರ್ಭಟ; ಬೆಂಗಳೂರು ಜನರ ಆಕ್ರೋಶ

ಹಗಲು ಹೊತ್ತಿನಲ್ಲಿ ಭಾರೀ ವಾಹನಗಳು ನಗರ ಪ್ರವೇಶ ಮಾಡುವಂತಿಲ್ಲ

Team Udayavani, Feb 3, 2022, 1:12 PM IST

ನಡುಹಗಲೇ ಕಿಲ್ಲರ್‌ ವಾಹನಗಳ ಆರ್ಭಟ; ಬೆಂಗಳೂರು ಜನರ ಆಕ್ರೋಶ

ಬೆಂಗಳೂರು: ಒಂದು ತಿಂಗಳು…ಒಂದು ನಗರ… 19 ಸಾವು…! ಇತ್ತೀಚಿನ ದಿನಗಳಲ್ಲಿ ಬೆಂಗ ಳೂರು ಅಪಘಾತಗಳ ರಾಜಧಾನಿಯಾಗುತ್ತಿದೆ. ಅದರಲ್ಲೂ ಭಾರೀ ವಾಹನಗಳ ಅಜಾಗರೂಕತೆ ಸಾಲು ಸಾಲು ಸಾವುಗಳಿಗೆ ಕಾರಣವಾಗುತ್ತಿದೆ. ನಗರದಲ್ಲಿ ಲಾರಿ, ಟ್ರಕ್‌ ಗಳಂಥ ಭಾರಿ ವಾಹನಗಳು ನಗರದ ಜನನಿಬಿಡ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಸಂಚರಿಸುತ್ತಿದ್ದು, ಸಾರ್ವಜನಿಕರ ಭೀತಿಗೆ ಕಾರಣವಾಗಿದೆ.

ನಡುಹಗಲು ಭಾರಿ ವಾಹನಗಳಿಗೆ ಪ್ರವೇಶ ನೀಡಿದ ಪೊಲೀಸರ ಜನರ ಆಕ್ರೋಶ ತಿರುಗಿದೆ. ಭಾರೀ ವಾಹನಗಳ ಚಾಲಕರು ಪ್ರತ್ಯಕ್ಷವಾಗಿ ಜನರ ಸಾವಿಗೆ ಕಾರಣರಾದರೆ, ಪೊಲೀಸರು ಪರೋಕ್ಷವಾಗಿ ಹೊಣೆಯಾಗುತ್ತಿದ್ದಾರೆ.

ನಿರ್ದಿಷ್ಟ ಸಮಯ  ಹೊರತುಪಡಿಸಿ, ಉಳಿದ ಸಮಯದಲ್ಲೂ ಭಾರೀ ವಾಹನಗಳನ್ನು ನಗರ ದೊಳಗೆ ಓಡಾಡಲು ಬಿಟ್ಟಿರುವುದೇ ಪೊಲೀಸರು ಮಾಡುತ್ತಿರುವ ದೊಡ್ಡ ತಪ್ಪು. ನಗರದಲ್ಲಿರುವ ನಿಯಮಗಳ ಪ್ರಕಾರ, ಹಗಲು ಹೊತ್ತಿನಲ್ಲಿ ಭಾರೀ ವಾಹನಗಳು ನಗರ ಪ್ರವೇಶ ಮಾಡುವಂತಿಲ್ಲ. ಆದರೂ, ಲಾಕ್‌  ಡೌನ್‌ ವೇಳೆಯಲ್ಲಿ ಮಾಡಲಾಗಿದ್ದ ನಿಯಮಗಳನ್ನೇ ಬಳಸಿ ಕೊಂಡಿರುವ ಭಾರೀ ವಾಹನಗಳು ನಗರ ಪ್ರವೇಶ ಮಾಡುತ್ತಿವೆ. ಹೀಗಾಗಿಯೇ ಅಪಘಾತಗಳ ಪ್ರಮಾಣವೂ ಹೆಚ್ಚಾಗುತ್ತಿದೆ. ಆದರೂ, ಇತ್ತೀಚಿನವರೆಗೂ ಇವರನ್ನೂ ಯಾರೂ ಪ್ರಶ್ನಿಸಿರಲಿಲ್ಲ.

ಆದರೆ, ಇತ್ತೀಚೆಗಷ್ಟೇ ರಿಯಾಲಿಟಿ ಶೋವೊಂದರ ಸ್ಪರ್ಧಿ ಆರು ವರ್ಷದ ಬಾಲಕಿ ಮತ್ತು ಪತ್ರಕ ರ್ತರೊಬ್ಬರು ಲಾರಿಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ ಬಳಿಕ, ಭಾರೀ ವಾಹನಗಳು ನಗರದೊಳಗೆ ಬರುತ್ತಿರುವುದು ಹೇಗೆ? ಇವರನ್ನು ಬಿಡುತ್ತಿರುವುದು ಯಾರು ಎಂಬ ಪ್ರಶ್ನೆಗಳು ಉದ್ಭವವಾಗುತ್ತಿವೆ. ಜನಸಾಮಾನ್ಯರೂ ಸಾಮಾಜಿಕ ಜಾಲತಾಣಗಳ ಮೂಲಕ ಸಂಚಾರಿ ಪೊಲೀಸರನ್ನು ಪ್ರಶ್ನಿಸುತ್ತಿದ್ದಾರೆ.

ಅಲ್ಲದೆ, ಹಗಲು ಹೊತ್ತಿನಲ್ಲಿಯೂ ಎಗ್ಗಿಲ್ಲದೇ ಭಾರೀ ವಾಹನಗಳನ್ನು ಸಂಚಾರಿ ಪೊಲೀಸರೇಕೆ ತಡೆದು ನಿಲ್ಲಿಸುತ್ತಿಲ್ಲ? ಇವರ ಮೇಲೆ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಪ್ಪಿತಸ್ಥರಿಗೆ ಶಿಕ್ಷೆ ಕಡಿಮೆ:
ನಿರ್ಲಕ್ಷ್ಯ ವಾಹನ ಚಾಲನೆಗಾಗಿ ಅಪಘಾತ ಎಸಗಿದ ಚಾಲಕರನ್ನು ಸಂಚಾರ ಪೊಲೀಸರು ಬಂಧಿಸುತ್ತಾರೆ. ಕಠಿಣ ಸೆಕ್ಷನ್‌ ಗಳ ಅನ್ವಯ ಕೇಸು ದಾಖಲಿಸದೇ ಇರುವುದರಿಂದ ಜಾಮೀನು ಪಡೆದು ಹೊರ ಬರು ತ್ತಾರೆ. ಸಾಕ್ಷ್ಯ ಸಂಗ್ರಹದಲ್ಲಿಯೂ ನಿರ್ಲಕ್ಷ್ಯ ವಹಿಸುವ ಆರೋಪಗಳಿವೆ.

*ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.