ಪಂಚಾಕ್ಷರಿ ಗವಾಯಿಗಳ ಹೆಸರಲ್ಲಿ ಮೌಲಿಕ ಪ್ರಶಸ್ತಿ ಘೋಷಿಸಲು ಆಗ್ರಹ

131 ವರ್ಷ ಕಳೆದರೂ ಇದುವರೆಗೂ ಶಿವಯೊಗಿಗಳ ಹೆಸರಿನಲ್ಲಿ ಯಾವುದೇ ಪ್ರಶಸ್ತಿ ಘೋಷಣೆಯಾಗಿಲ್ಲ

Team Udayavani, Feb 4, 2022, 5:36 PM IST

ಪಂಚಾಕ್ಷರಿ ಗವಾಯಿಗಳ ಹೆಸರಲ್ಲಿ ಮೌಲಿಕ ಪ್ರಶಸ್ತಿ ಘೋಷಿಸಲು ಆಗ್ರಹ

ಹಾನಗಲ್ಲ: ಅಂಧ, ಅನಾಥರಿಗೆ ಬೆಳಕು ನೀಡಿದ ಸಂಗೀತದ ದಿವ್ಯ ಚೈತನ್ಯ ಶಕ್ತಿ, ಕಾಡಶೆಟ್ಟಿಹಳ್ಳಿಯಲ್ಲಿ ಜನಿಸಿ ಗದಗನ್ನು ಕಾರ್ಯ ಕ್ಷೇತ್ರವಾಗಿ ಮಾಡಿಕೊಂಡು, ಜಗದ್ವಿಖ್ಯಾತರಾದ ಲಿಂ|ಡಾ|ಪಂ|ಪಂಚಾಕ್ಷರ ಶಿವಯೋಗಿಗಳವರ ಹೆಸರಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಮೌಲಿಕ ಪ್ರಶಸ್ತಿ ನೀಡುವಂತಾಗಬೇಕು ಎಂದು ಅಕ್ಕಿಆಲೂರು ವಿರಕ್ತಮಠದ ಶಿವಬಸವ ಮಹಾಸ್ವಾಮಿಗಳು ಒತ್ತಾಯಿಸಿದರು.

ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ಲಿಂ|ಡಾ|ಪಂ|ಪಂಚಾಕ್ಷರಿ ಶಿವಯೋಗಿಗಳವರ 131ನೇ ಜಯಂತ್ಯುತ್ಸವದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗಾನಯೋಗಿ ಶಿವಯೋಗಿ ಪಂ.ಪಂಚಾಕ್ಷರಿ ಗವಾಯಿಗಳವರ ಸಾಂಸ್ಕೃತಿಕ ಹಾಗೂ ಸಾಹಿತ್ಯ ಕಲಾ ಸಂಘ ಸಂಯುಕ್ತವಾಗಿ ಆಯೋಜಿಸಿದ್ದ ಸಂಗೀತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಕಾಡಶೆಟ್ಟಿಹಳ್ಳಿ ಎಂದಾಕ್ಷಣ ಪಂಚಾಕ್ಷರಿ ಗವಾಯಿಗಳವರ ಸಂಗೀತ ಸಾಧನೆ ಹಾಗೂ ಪುಟ್ಟರಾಜ ಕವಿ ಗವಾಯಿಗಳಂತಹ ಮೇಧಾವಿ ಸಂಗೀತಗಾರರ ನೆನಪಾಗುತ್ತದೆ. ಕುರುಡ, ಕುಂಟ, ವಿಕಲಚೇತನರು ಭಿಕ್ಷೆ ಬೇಡುತ್ತಿದ್ದ ಕಾಲ ಹೋಗಿ, ಭಕ್ತಿಯಿಂದ ಸಂಗೀತ ಅಭ್ಯಾಸ ಮಾಡಿ, ಆ ಮೂಲಕ ಬದುಕು ಅರಳಿಸಿಕೊಳ್ಳುವ ದಿವ್ಯ ಚೈತನ್ಯ ನೀಡಿದರು. “ಗುರುವಿನ ಗುರು ಮಹಾಗುರು’ ಎಂಬಂತೆ ಸಂಗೀತದ ಗುರುವಾಗಿ, ಆಧ್ಯಾತ್ಮದ ಶ್ರೇಷ್ಠ ಶಕ್ತಿಯಾಗಿ
ಹೊರಹೊಮ್ಮಿದ ಪಂಚಾಕ್ಷರಿ ಗವಾಯಿಗಳು ಜಗಮೆಚ್ಚಿದ ದಿವ್ಯ ಶಕ್ತಿ ಎಂದರು.

ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಪಂ. ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರಮಟ್ಟದ ಸಂಗೀತೋತ್ಸವ ನಡೆಯುವಂತಾಗಬೇಕು. ಆ ಮೂಲಕ ವಿಶ್ವವಿಖ್ಯಾತ ಸಂಗೀತ ಕಲಾವಿದರನ್ನು ಪ್ರತಿ ವರ್ಷ ಪ್ರಶಸ್ತಿ ಸಹಿತ ಗೌರವಿಸುವಂತಾಗಬೇಕು. ಆ ಮೂಲಕ ಸಂಗೀತ ಕ್ಷೇತ್ರವನ್ನು ಇನ್ನಷ್ಟು ಶಕ್ತಿಯುತವಾಗಿಸುವ ಮಹತ್ಕಾರ್ಯ ಸರಕಾರಗಳಿಂದ ನಡೆಯಬೇಕಾಗಿದೆ. ಹಾನಗಲ್ಲ ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ ಪ್ರತಿ ವರ್ಷ ನಡೆಯುತ್ತಿರುವ ಸಂಗೀತೋತ್ಸವಕ್ಕೆ ಇನ್ನಷ್ಟು ಮೆರಗು ಬರುವಂತೆ ಸರಕಾರದಿಂದ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ವೆಂಕಟೇಶ ಪೂಜಾರ, ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷ ಲಿಂ|ಡಾ|ಪಂ|ಪಂಚಾಕ್ಷರಿ ಶಿವಯೋಗಿಗಳ ಜಯಂತ್ಯುತ್ಸವವನ್ನು ಆಚರಿಸುತ್ತ ಬಂದಿದೆ. 131 ವರ್ಷ ಕಳೆದರೂ ಇದುವರೆಗೂ ಶಿವಯೊಗಿಗಳ ಹೆಸರಿನಲ್ಲಿ ಯಾವುದೇ ಪ್ರಶಸ್ತಿ ಘೋಷಣೆಯಾಗಿಲ್ಲ. ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದ ಕಾರ್ಯಕ್ರಮಗಳಾಗಲಿ, ಸರಕಾರದಿಂದ ಜಯಂತ್ಯುತ್ಸವವಾಗಲಿ ಆಚರಿಸುತ್ತಿಲ್ಲ. ಸರಕಾರ ಕೂಡಲೇ ಗಮನ ಹರಿಸಿ ಇಂತಹ ಮಹಾತ್ಮರ ಜಯಂತಿ ಆಚರಿಸುವಂತಾಗಬೇಕು ಹಾಗೂ ಅವರ ಹೆಸರಿನಲ್ಲಿ ಉನ್ನತ ಪ್ರಶಸ್ತಿ ಘೋಷಿಸಬೇಕು ಎಂದರು.

ಅಕ್ಕಿಆಲೂರು ಮುತ್ತಿನಕಂತಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಹೋತನಹಳ್ಳಿ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಕೂಡಲದ ಗುರು ಮಹೇಶ್ವರ ಸ್ವಾಮಿಗಳು ಭಾಗವಹಿಸಿದ್ದರು. ಕಲಾ ಸಂಘದ ಅಧ್ಯಕ್ಷ ದಾನಪ್ಪಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಾಂವಸಗಿ ಗ್ರಾಪಂ ಅಧ್ಯಕ್ಷ ಬಸವರಾಜ ಅಗಸನಹಳ್ಳಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸಂಗೀತ ಸೇವೆ: ಡಾ|ಮೃತ್ಯುಂಜಯ ಅಗಡಿ, ಡಾ|ವೆಂಕಟೇಶ ಪೂಜಾರ, ಶಿವಬಸಯ್ಯ ಚರಂತಿಮಠ, ಬಸಯ್ಯ ಹಂಚಿನಾಳ, ರಾಘವೇಂದ್ರ ಭಜಂತ್ರಿ, ಬಸವಣ್ಯಯ್ಯಶಾಸ್ತ್ರಿ ವೆಂಕಟಾಪೂರಮಠ, ಶಿವಯ್ಯ ಇಟಗಿಮಠ, ಪ್ರಕಾಶ ಆನವಟ್ಟಿ, ಡಾ|ಪರಶುರಾಮ ಕಟ್ಟಿಸಂಗಾವಿ ಸಂಗೀತ ಸೇವೆ ಸಲ್ಲಿಸಿದರು.

ಪ್ರಶಸ್ತಿ: ಇದೇ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಗಾನಯೋಗಿ ಲಿಂ.ಪಂಚಾಕ್ಷರಿ ಶಿವಯೋಗಿಗಳವರ ಕಲಾ ಸಂಘ ಕೊಡಮಾಡುವ ಕುಮಾರ ಪಂಚಾಕ್ಷರೇಶ್ವರ
ಪ್ರಶಸ್ತಿಯನ್ನು ಧಾರವಾಡದ ಅಂತಾರಾಷ್ಟ್ರೀಯ ಸಂಗೀತ ಕಲಾವಿದ ಡಾ|ಮೃತ್ಯುಂಜಯ ಅಗಡಿ ಅವರಿಗೆ ಪ್ರದಾನ ಮಾಡಿ, ಗೌರವಿಸಲಾಯಿತು.

 

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.