ನರೇಗಾ ಯೋಜನೆಯಿಂದ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ : ಸಚಿವ ಈಶ್ವರಪ್ಪ

ಪಂಚಾಯ್ತಿ ಕಾರ್ಯಾಲಯದ ಪಿಠೋಪಕರಣಕ್ಕಾಗಿ ರೂ. 5 ಲಕ್ಷ

Team Udayavani, Feb 4, 2022, 8:34 PM IST

ನರೇಗಾ ಯೋಜನೆಯಿಂದ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ : ಸಚಿವ ಈಶ್ವರಪ್ಪ

ರಬಕವಿ ಬನಹಟ್ಟಿ: ದೇಶದ ಜನರ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ನರೇಗಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದ್ದರಿಂದ ನರೇಗಾ ಯೋಜನೆಯಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯ್ತಿ ರಾಜ್ ಸಚಿವ ಕೆ.ಎಸ್‍.ಈಶ್ವರಪ್ಪ ತಿಳಿಸಿದರು.

ಅವರು ಶುಕ್ರವಾರ ತಾಲ್ಲೂಕಿನ ಜಗದಾಳ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಸೇವಾ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ರಾಜೀವ ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಇಂದು ಜಲಜೀವನ ಯೋಜನೆ ಅಡಿಯಲ್ಲಿ ಪ್ರತಿ ಗ್ರಾಮದ ಪ್ರತಿ ಮನೆಗೂ ನೀರು ಪೂರೈಕೆಯ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ರಾಜ್ಯದಲ್ಲಿಯೂ ಕೂಡಾ ಪ್ರತಿನಿತ್ಯ ಹತ್ತು ಸಾವಿರಕ್ಕಿಂತ ಹೆಚ್ಚು ಮನೆಗಳಿಗೆ ನಲ್ಲಿಗಳ ಸಂಪರ್ಕವನ್ನು ನೀಡಲಾಗುತ್ತಿದೆ.

ಗ್ರಾಮ ಪಂಚಾಯ್ತಿ ಕಾರ್ಯಾಲಯ ಒಂದು ದೇವಾಲಯ. ಆದ್ದರಿಂದ ಇಲ್ಲಿ ಕರ್ತವ್ಯ ನಿರ್ವಹಣೆ ಮಾಡುವವರು ಯಾವುದೆ ಲಂಚ ತೆಗೆದುಕೊಳ್ಳದೆ ಗ್ರಾಮದ ಜನರ ಸೇವೆಗಾಗಿ ಕರ್ತವ್ಯ ನಿರ್ವಹಿಸಬೇಕು. ಭಾರತ ಇನ್ನೀತರ ದೇಶಗಳಿಂದ ಭಿಕ್ಷೆ ಬೇಡುವ ರಾಷ್ಟ್ರವಾಗಿ ಉಳಿದಿಲ್ಲ. ಈಗ ಸಣ್ಣ ಪುಟ್ಟ ರಾಷ್ಟ್ರಗಳಿಗೆ ಸಾಲವನ್ನು ನೀಡುವ ರಾಷ್ಟ್ರವಾಗಿದೆ.

ಭಾರತೀಯರು ವಿಶ‍್ವಕ್ಕೆ ನೀಡಿದ ಯೋಗದಿಂದಾಗಿ ಭಾರತದ ಗೌರವ ಹೆಚ್ಚಾಗಿದೆ. ಪ್ರತಿಯೊಬ್ಬರು ಪರಸ್ಪರ ಸಹಕಾರದ ಮೂಲಕ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸಬೇಕು. ಪಂಚಾಯ್ತಿ ಕಾರ್ಯಾಲಯದಲ್ಲಿ ಪಿಠೋಪಕರಣಕ್ಕಾಗಿ ರೂ. 5 ಲಕ್ಷ ನೀಡುವುದಾಗಿ ಸಚಿವ ಕೆ.ಎಸ್‍.ಈಶ್ವರಪ್ಪ ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿ, ವ್ಯಕ್ತಿ ಮತ್ತು ಅಧಿಕಾರ ಯಾವುದು ಶಾಶ್ವತ ಅಲ್ಲ. ಚುನಾವಣೆ ಮುಗಿದ ಮೇಲೆ ಎಲ್ಲ ಸದಸ್ಯರು ಕೂಡಿಕೊಂಡು ಗ್ರಾಮದ ಅಭಿವೃದ್ಧಿಗಾಗಿ ಪ್ರಯತ್ನಿಸಬೇಕು. ಗ್ರಾಮದ ಅಭಿವೃದ್ಧಿಗಾಗಿ ಶೌಚಾಲಯ, ಇಂಗು ಗುಂಡಿ, ಜಾನುವಾರು ಶೆಡ್ ನಿರ್ಮಾಣ, ಚರಂಡಿ, ಸಿಸಿ ರಸ್ತೆ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ಆದ್ದರಿಂದ ಗ್ರಾಮ ಪಂಚಾಯ್ತಿ ಸದಸ್ಯರು ಒಟ್ಟಾಗಿ ಕೂಡಿಕೊಂಡು ಇವೆಲ್ಲ ಅನುದಾನಗಳನ್ನು ಬಳಸಿಕೊಳ್ಳಬೇಕು ಎಂದರು.

ಬಲಾದಿಯ ವೇದಮೂರ್ತಿ ಬಸಯ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸುರೇಶ ಅಸ್ಕಿ, ಉಪಾಧ್ಯಕ್ಷೆ ಕಮಲಾ ಜನವಾಡ, ತಹಶೀಲ್ದಾರ್ ಸಂಜಯ ಇಂಗಳೆ, ಅಮರೇಶ ನಾಯಕ, ವಿಕಾಸ ರಾಠೋಢ, ಜಿಲ್ಲಾ ಪಂಚಾಯ್ತಿ ವಿಶೇಷ ಅಧಿಕಾರಿ ಜಯರಾಮ ಸೇರಿದಂತೆ ಗ್ರಾಮ ಪಂಚಾಯ್ತಿ ಸದಸ್ಯರು ಇದ್ದರು.

ಪ್ರಿಯಾಂಕಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಗಡೆನ್ನರವ ನಿರೂಪಿಸಿದರು. ಮ.ಕೃ.ಮೇಗಾಡಿ ವಂದಿಸಿದರು.

ಕಾರ್ಯಕ್ರಮದಲ್ಲಿ ಜಿ.ಎಸ್‍.ನ್ಯಾಮಗೌಡ, ಶಂಕರ ಗೊಬ್ಬಾಣಿ, ಪುಂಡಲೀಕ ಪಾಲಭಾವಿ, ಬಾಬಾಗೌಡ ಪಾಟೀಲ, ಧರೆಪ್ಪ ಉಳ್ಳಾಗಡ್ಡಿ, ದುಂಡಯ್ಯ ಪೂಜಾರಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.