ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಇಒಗೆ ಮನವಿ
Team Udayavani, Feb 5, 2022, 4:16 PM IST
ಲಿಂಗಸುಗೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
ಶೈಕ್ಷಣಿಕ ಅದಾಲತ್ನಲ್ಲಿ ಬಾಕಿ ಉಳಿದ ಶಿಕ್ಷಕರ ಕಾರ್ಯ ಪೂರ್ಣಗೊಳಿಸಬೇಕು. ಶಿಕ್ಷಕರು ಕಾಲಮಿತಿಯ ಬಡ್ತಿಗಾಗಿ ಕೊಡುವ ಅರ್ಜಿ ಪರಿಗಣಿಸಿ ಉಪ ನಿರ್ದೇಶಕರ ಆದೇಶ ಸಿಆರ್ ಫಾರಂ ಇಲ್ಲದೆ ಮಂಜೂರು ಮಾಡಬೇಕು. ಶಿಶು ಪಾಲನೆ, ಗಳಿಕೆ, ವೈದ್ಯಕೀಯ ರಜೆ ಪಡೆಯಲು ಬರುವ ಶಿಕ್ಷಕರಿಗೆ ಬಿಇಒ ಇಲ್ಲದ ಸಂದರ್ಭದಲ್ಲಿ ಸ್ಥಾನಿಕ ಅಧಿಕಾರಿಗಳು ಮಂಜೂರಾತಿ ನೀಡಬೇಕು. ಶಿಕ್ಷಕರ ಬಾಕಿ ಇರುವ ಮೆಡಿಕಲ್ ಬಿಲ್ ಪಾವತಿಸಬೇಕು. ಕೋವಿಡ್ ಹಾಗೂ ಇತರೆ ಕಾರಣಗಳಿಂದ ಮರಣ ಹೊಂದಿರುವ ಶಿಕ್ಷಕರಿಗೆ ಇಲಾಖೆಯಿಂದ ದೊರೆಯಬೇಕಾದ ಸೌಲಭ್ಯಗಳು ಆ ಕುಟುಂಬಗಳಿಗೆ ಒದಗಿಸಬೇಕು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಈ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಸಂಗಯ್ಯ ಗಣಚಾರಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಭೀಮಣ್ಣ ನಾಯಕ, ಜಗದೀಶ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
MUST WATCH
ಹೊಸ ಸೇರ್ಪಡೆ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?