ಪಂಜಾಬ್ ನಲ್ಲಿ 26ವರ್ಷ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸಾಧನೆ ಏನು?ನಮಗೆ ಅವಕಾಶ ಕೊಡಿ
ಈ ವ್ಯಕ್ತಿಗಳು ತಮ್ಮ ಜಮೀನುಗಳನ್ನು ಕೇವಲ 20-25ಲಕ್ಷಕ್ಕೆ ಮಾರಾಟ ಮಾಡುತ್ತಿದ್ದಾರೆ.
Team Udayavani, Feb 5, 2022, 4:30 PM IST
ನವದೆಹಲಿ:ಒಂದು ವೇಳೆ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ ಸರಕಾರಿ ಉದ್ಯೋಗದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವುದಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತೆಯೇ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಜನರಿಗೆ ಉಚಿತ ಭರವಸೆಗಳನ್ನು ನೀಡುವುದನ್ನೂ ಕೂಡಾ ರಾಜಕೀಯ ಪಕ್ಷಗಳು ಮುಂದುವರಿಸಿವೆ ಎಂದು ವರದಿ ತಿಳಿಸಿದೆ.
ಶುಕ್ರವಾರ (ಫೆ.05) ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿರುವ ಕೇಜ್ರಿವಾಲ್, ಯುವಕರನ್ನು ಪಂಜಾಬ್ ನಿಂದ ಬಲವಂತವಾಗಿ ವಿದೇಶಕ್ಕೆ ಕಳುಹಿಸಲಾಗುತ್ತಿದೆ. ಈ ವ್ಯಕ್ತಿಗಳು ತಮ್ಮ ಜಮೀನುಗಳನ್ನು ಕೇವಲ 20-25ಲಕ್ಷಕ್ಕೆ ಮಾರಾಟ ಮಾಡುತ್ತಿದ್ದಾರೆ. ಒಂದು ವೇಳೆ ಇದು ಮುಂದುವರಿದರೆ ಪಂಜಾಬ್ ನಲ್ಲಿ ಏನಾಗಬಹುದು? ಆ ರೀತಿ ಆಗಲು ನಾವು (ಎಎಪಿ) ಬಿಡುವುದಿಲ್ಲ. ಒಂದು ವೇಳೆ ಆಮ್ ಆದ್ಮಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದರೆ ಸರ್ಕಾರಿ ಉದ್ಯೋಗದಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ತಿಳಿಸಿದ್ದಾರೆ.
ರಾಜ್ಯದ ಅಧಿಕಾರದ ಗದ್ದುಗೆ ಹಿಡಿದ ವಿರೋಧ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಜ್ರಿವಾಲ್, ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ 26 ವರ್ಷ ಆಡಳಿತ ನಡೆಸಿದೆ. ಶಿರೋಮಣಿ ಅಕಾಲಿ ದಳ 19 ವರ್ಷ ಪಂಜಾಬ್ ನಲ್ಲಿ ಅಧಿಕಾರ ನಡೆಸಿತ್ತು ಎಂದು ಹೇಳಿದರು.
ಒಂದು ವೇಳೆ ನೀವು(ಮತದಾರರು) ನಮಗೆ ಮತ ಚಲಾಯಿಸಿದರೆ ಕೈಗಾರಿಕಗಳು ಮತ್ತೆ ತಲೆಎತ್ತಲಿದೆ, ಹೊಸ ಕೈಗಾರಿಕೆಗಳಿಗೆ ಅವಕಾಶವಾಗಲಿದೆ, ಹೊಸ ಶಾಲೆ, ಹೊಸ ಆಸ್ಪತ್ರೆ ನಿರ್ಮಾಣಗೊಳ್ಳಲಿದೆ. ಇದನ್ನು ನಾವು ದೆಹಲಿಯಲ್ಲಿ ಮಾಡಿದ್ದೇವೆ ಎಂದು ಕೇಜ್ರಿವಾಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ