“ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಂಡು ಮಾತನಾಡಲಿ’


Team Udayavani, Feb 6, 2022, 6:55 AM IST

“ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಂಡು ಮಾತನಾಡಲಿ’

ಮಂಗಳೂರು: ಹಿಜಾಬ್‌ ಬಗ್ಗೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಇದರ ಬಗ್ಗೆ ಮಾತನಾಡುವ ಮೊದಲು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಮಾಜದಲ್ಲಿ ಸಾಮರಸ್ಯ ಕೆಡಿಸುವ ಎಷ್ಟು ನಿರ್ಧಾರಗಳನ್ನು ಮಾಡಿದ್ದರು ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಟಿಪ್ಪು ಜಯಂತಿ ಮೂಲಕ ಸಾಮರಸ್ಯವನ್ನು ಕೆಡಿಸುವ ಯತ್ನ ಮಾಡಿದರು. ಶಾದಿ ಭಾಗ್ಯದ ಹೆಸರಿನಲ್ಲಿ ಕೆಲವೇ ಸಮುದಾಯಕ್ಕೆ ಅವಕಾಶ ಮಾಡಿಕೊಟ್ಟವರು. ಈ ರೀತಿಯ ನಿರ್ಧಾರಗಳು ಸಮಾಜದ ಸಾಮರಸ್ಯಕ್ಕೆ ಹೇಗೆ ಧಕ್ಕೆ ತಂದಿವೆ ಎಂಬುದನ್ನು ಈಗ ಹಿಜಾಬ್‌ ಕುರಿತು ಮಾತನಾಡುವ ಅವರು ಅರ್ಥಮಾಡಿಕೊಳ್ಳಲಿ ಎಂದರು.

ತಾಲಿಬಾನೀಕರಣಕ್ಕೆ ಅವಕಾಶ ನೀಡೆವು
ಶಾಲೆಯ ನಿಯಮ ಹಾಗೂ ಅನುಶಾಸನ ಪಾಲಿಸಿಕೊಂಡು ಕಲಿಯಬೇಕಾದದ್ದು ಧರ್ಮ. ಅದರೊಂದಿಗೆ ಬೇರೆ ಧರ್ಮ ಬರುವುದು ಸರಿಯಲ್ಲ. ಶಾಲೆಯ ನಿಯಮದಡಿಯಲ್ಲಿಯೇ ಎಲ್ಲರೂ ಕಲಿಯಬೇಕು. ಯಾರಿಗೆ ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಸಾಧ್ಯ ಇಲ್ಲವೋ ಅವರು ಬೇರೆ ದಾರಿ ನೋಡಿಕೊಳ್ಳಬಹುದು. ಇಲ್ಲಿ ತಾಲಿಬಾನ್‌ ಮಾಡಲು ಅವಕಾಶ ನೀಡುವುದಿಲ್ಲ ಎಂದರು.

ದನ ಕಳ್ಳತನ, ದನ ಆಕ್ರಮ ಸಾಗಾಟದ ವಿರುದ್ಧ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ. ಮುಖ್ಯಮಂತ್ರಿಯವರು, ಗೃಹಸಚಿವರು ಹಾಗೂ ಉಸ್ತುವಾರಿ ಸಚಿವರ ಸಭೆ ನಡೆಸಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ನಳಿನ್‌ ತಿಳಿಸಿದರು.

ಇದನ್ನೂ ಓದಿ:ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸರಿಪಡಿಸಲು ಹಿಜಾಬ್‌ ಹುಟ್ಟಿಕೊಂಡಿದೆ: ರೆಡ್ಡಿ

ಸಂಪುಟ: ಸಿಎಂ ವಿವೇಚನೆ
ಸಚಿವ ಸಂಪುಟದ ಪುನಾರಚನೆ ವಿಚಾರ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಸಂದರ್ಭ ಬಂದಾಗ ರಾಷ್ಟ್ರೀಯ ನಾಯಕರ ಜತೆ ಮಾತನಾಡಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ನಳಿನ್‌ ಕುಮಾರ್‌ ಉತ್ತರಿಸಿದರು.

ಮಂತ್ರಿಮಂಡಲದಲ್ಲಿ ಇರಬೇಕು ಎಂದು ಅಪೇಕ್ಷೆ ಪಡುವುದು ತಪ್ಪಲ್ಲ. ಆದರೆ ಎಲ್ಲ ಶಾಸಕರಿಗೂ ಮಂತ್ರಿ ಸ್ಥಾನ ನೀಡಲು ಸಾಧ್ಯವಿಲ್ಲ. ಅದಕ್ಕೆ ನಿಯಮಗಳಿವೆ. ರಾಷ್ಟ್ರೀಯ ನಾಯಕರು ಹಾಗೂ ನಾವು ಚರ್ಚೆ ಮಾಡಿ ಯಾರಿಗೆ ಅವಕಾಶ ನೀಡಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇವೆ. ಹಾದಿಬೀದಿಯಲ್ಲಿ ಚರ್ಚೆ ಮಾಡುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

4.76 ಕೋಟಿ ರೂ. ವಂಚಿಸಿದ ಪ್ರಕರಣ; ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಸಾಧ್ಯತೆ ?

4.76 ಕೋಟಿ ರೂ. ವಂಚಿಸಿದ ಪ್ರಕರಣ; ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಸಾಧ್ಯತೆ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಎಂಡಿಎಂಎ ಡ್ರಗ್ಸ್ ಸಾಗಾಟ: ನಾಲ್ವರ ಸೆರೆ

Mangaluru ಎಂಡಿಎಂಎ ಡ್ರಗ್ಸ್ ಸಾಗಾಟ: ನಾಲ್ವರ ಸೆರೆ

Mulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿMulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿ

Mulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿ

ಕೃತಕ ನೆರೆ, ಸಂಭಾವ್ಯ ಅಪಾಯ ತಪ್ಪಿಸಲು ಪಾಲಿಕೆಯಿಂದ “ಇನ್ಸಿಡೆಂಟ್‌ ಕಮಾಂಡರ್‌’ !

ಕೃತಕ ನೆರೆ, ಸಂಭಾವ್ಯ ಅಪಾಯ ತಪ್ಪಿಸಲು ಪಾಲಿಕೆಯಿಂದ “ಇನ್ಸಿಡೆಂಟ್‌ ಕಮಾಂಡರ್‌’ !

Vamanjoor : ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನ ಬಂಧನ

Vamanjoor : ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನ ಬಂಧನ

ಸುರತ್ಕಲ್‌: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಸುರತ್ಕಲ್‌: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.