ಕೋವಿಡ್‌ ಸಾಮಗ್ರಿ ಖರೀದಿ ಹೆಸರಲ್ಲಿ ಅವ್ಯವಹಾರ


Team Udayavani, Feb 6, 2022, 12:00 PM IST

ಕೋವಿಡ್‌ ಸಾಮಗ್ರಿ ಖರೀದಿ ಹೆಸರಲ್ಲಿ ಅವ್ಯವಹಾರ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ನೀಡಿದ ಅನುದಾನದಲ್ಲೂ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಗಳು ಬಹಿರಂಗಗೊಂಡಿವೆ.

ಬೆಂಗಳೂರು ನಗರ ಜಿಪಂ ಮತ್ತು ರಾಮನಗರ ಜಿಪಂಗಳ ಕೆಲವು ಗ್ರಾಪಂಗಳಲ್ಲಿ ಸ್ವಂತ ನಿಧಿಯ (ವರ್ಗ-1 15ನೇ ಹಣಕಾಸು ಹಾಗೂ ಇತರೆ) ಖಾತೆಗಳಿಂದ ಸಂದೇಹಾಸ್ಪದವಾಗಿ ಹಣ ಬ್ಯಾಂಕ್‌ ಖಾತೆಯಿಂದ ತೆಗೆದಿರುವುದು ಸಾರ್ವಜನಿಕರಿಂದ ಸ್ವೀಕೃತವಾದ ದೂರುಗಳು ಕರ್ನಾಟಕ ಪಂಚಾಯತ್‌ ರಾಜ್‌ ಆಯುಕ್ತಾಲಯದ ಗಮನಕ್ಕೆ ಬಂದಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಪಂ ವ್ಯಾಪ್ತಿಯ ಕೆಲವು ಗ್ರಾಪಂಗಳಲ್ಲಿ ಕೊರೊನಾ ನಿಯಂತ್ರಣ ನೆಪವೊಡ್ಡಿ ಸ್ವಂತ ನಿಧಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಚೆಕ್‌ ಮುಖಾಂತರ ಅನೇಕ ಸಾಮಗ್ರಿ ಖರೀದಿಸಲಾಗಿದೆ. ಯಾವುದೇ ಕ್ರಿಯಾ ಯೋಜನೆಯ ಅನುಮೋದನೆ ಇಲ್ಲದೆ ಲಕ್ಷಾಂತರ ರೂ. ಸಂದೇಹಾಸ್ಪದವಾಗಿ ಬಳಕೆ ಮಾಡಲಾಗಿದೆ.

ಗ್ರಾಪಂ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳಲ್ಲಿ ಹಾಗೂ ಸಾಮಗ್ರಿ ಖರೀದಿಯಲ್ಲಿನ ಒಟ್ಟು ಮೊತ್ತ 50 ಸಾವಿರ ರೂ.ಗಿಂತಲೂ ಮೇಲ್ಪಟ್ಟ ಹಣ ಪಾವತಿ ಮಾಡಬೇಕಾದರೆ ಜಿಪಂ ಅನುಮೋದನೆ ಕಡ್ಡಾಯ ಎಂದು ಗ್ರಾಮೀಣಾಭಿವೃದ್ದಿ ಪಂಚಾಯ್ತಿ ರಾಜ್‌ ಇಲಾಖೆ ಆದೇಶವನ್ನೂ ಹೊರಡಿಸಿದೆ. ಗ್ರಾಪಂ ಮಟ್ಟದಲ್ಲಿ ಸಾರ್ವಜನಿಕರ ಹಣ ದುರ್ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹೀಗಾಗಿ, ಈಗ ಬೆಂಗಳೂರು ನಗರ ಜಿಪಂ ತನ್ನ ವ್ಯಾಪ್ತಿಯ ಬೆಂಗಳೂರು ಉತ್ತರ, ಪೂರ್ವ, ದಕ್ಷಿಣ,ಯಲಹಂಕ ಹಾಗೂ ಅನೇಕಲ್‌ ವ್ಯಾಪ್ತಿಯ 87 ಗ್ರಾಪಂನ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಪಂಚಾಯ್ತಿ ಇಲಾಖೆಯ ಸುತ್ತೂಲೆಯನ್ನು ರವಾನಿಸಿದೆ.

ಗ್ರಾಪಂ ವಿವಿಧ ಯೋಜನೆಗಳ ಮುಖಾಂತರ ಅನುಷ್ಠಾನಗೊಳಿಸುತ್ತಿ ರುವ ಕಾಮಗಾರಿಗಳಲ್ಲಿ ಹಾಗೂ ಸಾಮಗ್ರಿ ಖರೀದಿಯ ಬಿಲ್‌ 50 ಸಾವಿರ ರೂ. ಮೇಲ್ಪಟ್ಟರೆ ಆಗ ಹೆಚ್ಚಿನ ಮೊತ್ತವನ್ನು ಪಾವತಿಸುವ ಮುನ್ನ ಜಿಪಂ ಸಿಇಒ ಅನುಮೋದನೆ ಅಗತ್ಯ ಎಂದು ಪಂಚಾಯತ್‌ ರಾಜ್‌ ಇಲಾಖೆ ಈಗಾಗಲೇ ಸ್ಪಷ್ಟಪಡಿಸಿದೆ. ಸಂಗಪ್ಪ, ಬೆಂ. ನಗರ, ಜಿಪಂ ಸಿಇಒ

ಕ್ರಿಯಾ ಯೋಜನೆಯಿಲ್ಲದೆಲಕ್ಷಾಂತರ ರೂ. ಬಳಕೆ:  ಕೊರೊನಾ ನೆಪವೊಡ್ಡಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಪಂನ ಕೆಲವು ಗ್ರಾಪಂಗಳಲ್ಲಿ ಕ್ರಿಯಾ ಯೋಜನೆಯ ಅನುಮೋದನೆಯಿಲ್ಲದೆ ಲಕ್ಷಾಂತರರೂ.ಬಿಲ್‌ ಮಾಡಿ ಹಣ ದುರುಪಯೋಗ ಮಾಡಿಕೊಂಡಿರುವುದನ್ನು ಸಾರ್ವಜನಿಕರು ಪಂಚಾಯತ್‌ ರಾಜ್‌ ಇಲಾಖೆಗೆ ಸಾರ್ವಜನಿಕರು ತಮ್ಮ ದೂರಿನಲ್ಲಿ ಪ್ರಶ್ನಿಸಿದ್ದರು. ಕ್ರಿಯಾ ಯೋಜನೆಯಿಲ್ಲದೆ ಅನುದಾನ ಬಳಕೆ ಮಾಡಿದರೆ ಸಾರ್ವಜನಿಕ ಹಣ ವ್ಯರ್ಥವಾಗಲಿದೆ. ಈ ಬಗ್ಗೆ ಕರ್ನಾಟಕ ಪಂಚಾಯತ್‌ ರಾಜ್‌ ಆಯುಕ್ತಾಲಯ ಕ್ರಮಕೈಗೊಂಡುನಡೆದಿರುವ ಲೋಪವನ್ನು ಸರಿಪಡಿಸಬೇಕು. ಹಣದ ದುರ್ಬಳಕೆ ತಡೆಗಟ್ಟಬೇಕು ಎಂದು ಮನವಿ ಮಾಡಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ತಿಳಿಸಿದ್ದಾರೆ.

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.