ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಎಸಿಬಿ ಬಲೆಗೆ
Team Udayavani, Feb 6, 2022, 8:07 PM IST
ಹಾವೇರಿ : ಅತಿವೃಷ್ಠಿಯಿಂದ ಬಿದ್ದ ಮನೆಗೆ ಬಿಲ್ ಮಂಜೂರು ಮಾಡಿಕೊಡಲು 80 ಸಾವಿರ ರೂ., ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಾನಗಲ್ಲ ತಾಲೂಕಿನ ಸಮ್ಮಸಗಿ ಗ್ರಾ.ಪಂ ಪಿಡಿಒ ಹಾಗೂ ಮಧ್ಯವರ್ತಿಯನ್ನು ಎಸಿಬಿ ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ನೀಡಿರುವ ಘಟನೆ ನಡೆದಿದೆ.
ಸಮ್ಮಸಗಿ ಗ್ರಾ.ಪಂ ಪಿಡಿಒ ಕೃಷ್ಣಪ್ಪ ಆಲದಕಟ್ಟಿ, ಏಜೆಂಟ್ ಕುಬೇರಪ್ಪ ಗಾಡಿಹುಚ್ಚನವರ ಎಂಬುವರು 20 ಸಾವಿರ ರೂ., ಸ್ವೀಕರಿಸುತ್ತಿದ್ದಾಗ ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಹಾನಗಲ್ಲ ತಾಲೂಕಿನ ಶೃಂಗೇರಿ ಗ್ರಾಮದ ಪರಸಪ್ಪ ಫಕ್ಕೀರಪ್ಪ ಗೊರನವರ ಎಂಬುವರ ಮನೆ ಅತಿವೃಷ್ಠಿಯಿಂದಾಗಿ ಬಿದ್ದಿತ್ತು. ಅದರ ಬಿಲ್ ಮಂಜೂರಾತಿಗೆ ಪಿಡಿಒ ಏಜೆಂಟರ ಮೂಲಕ 80 ಸಾವಿರ ರೂ., ಬೇಡಿಕೆ ಇಟ್ಟಿದ್ದಾರೆ.
ಮೊದಲ ಕಂತಿನಲ್ಲಿ 30 ಸಾವಿರ ರೂ., ಲಂಚ ಸ್ವೀಕರಿಸಿದ್ದಾರೆ. ಈಗ ಉಳಿದ ಹಣಕ್ಕೆ ಬೇಡಿಕೆ ಇಟ್ಟಾಗ ರೋಸಿ ಹೋಗಿರುವ ಫಲಾನುಭವಿ ಪರಸಪ್ಪ ಎಸಿಬಿಗೆ ದೂರು ದಾಖಲಿಸಿದ್ದಾರೆ. ಈಗ ಮತ್ತೆ 20ಸಾವಿರ ರೂ., ಸ್ವೀಕರಿಸುತ್ತಿದ್ದಾಗ ಎಸಿಬಿ ಪೊಲೀಸರು ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.
ಇದನ್ನೂ ಓದಿ : ಭಾರತದ 1000ನೇ ಏಕದಿನ: ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್ಗಳ ಗೆಲುವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್