ಹಿಜಾಬ್‌ ಪ್ರಕರಣ: ವಿದ್ಯಾರ್ಥಿಗಳಿಗೆ ಸರಕಾರದ ಮಾರ್ಗಸೂಚಿ ಮನವರಿಕೆ ಮಾಡುವ ಪ್ರಯತ್ನ


Team Udayavani, Feb 8, 2022, 6:15 AM IST

ಹಿಜಾಬ್‌ ಪ್ರಕರಣ: ವಿದ್ಯಾರ್ಥಿಗಳಿಗೆ ಸರಕಾರದ ಮಾರ್ಗಸೂಚಿ ಮನವರಿಕೆ ಮಾಡುವ ಪ್ರಯತ್ನ

ಉಡುಪಿ: ಹಿಜಾಬ್‌ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಜಿಲ್ಲಾಡಳಿತದಿಂದ ವಿವರಣೆ ಕೋರಿದ್ದರ ನಡುವೆಯೇ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಕುರಿತ ಸರಕಾರದ ಮಾರ್ಗಸೂಚಿಯನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡುವ ಪ್ರಯತ್ನ ಸೋಮವಾರ ನಡೆದಿದೆ.

ಈ ಮಧ್ಯೆ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲು ಧರಿಸುವುದಾಗಿ ಹೇಳಿತು. ಮುನ್ಸೂಚನೆ ಅರಿತ ಕಾಲೇಜು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನಷ್ಟನ್ನೇ ಧರಿಸಬೇಕು ಎಂಬುದನ್ನು ವಿವರಿಸಿತು. ವಿದ್ಯಾರ್ಥಿನಿಯರಿಗೂ ಸರಕಾರದ ಮಾರ್ಗಸೂಚಿ ಬಗ್ಗೆ ಮನವರಿಕೆ ಮಾಡಿ ಕಾಲೇಜಿಗೆ ಮಧ್ಯಾಹ್ನ ಅನಂತರ ರಜೆ ನೀಡಲಾಯಿತು. ಮಂಗಳವಾರ ಪ್ರ್ಯಾಕ್ಟಿಕಲ್‌ ತರಗತಿಯಷ್ಟೇ ಇರಲಿದೆ ಎಂದು ಎಂಜಿಎಂ ಪ. ಪೂ. ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. ಮುಂಜಾಗ್ರತೆ ಹಿನ್ನೆಲೆಯಲ್ಲಿ ಮೀಸಲು ಪೊಲೀಸ್‌ ತುಕಡಿಯನ್ನು ಕಾಲೇಜಿನ ಸಮೀಪ ನಿಯೋಜಿಸಲಾಗಿತ್ತು.

ಸೋಮವಾರ ಸಹಬಾಳ್ವೆ ಸಂಘಟನೆ ವತಿಯಿಂದ ಶಾಂತಿ ಕದಡುವ ಪ್ರಯತ್ನ ಮಾಡುವ ಶಕ್ತಿಗಳ ವಿರುದ್ಧ ಕ್ರಮ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. ನಗರದ ಹುತಾತ್ಮ ಸ್ಮಾರಕದ ಬಳಿ ಸಿಎಫ್ಐ ನೇತೃತ್ವದಲ್ಲಿ ಹಲವು ಮುಸ್ಲಿಂ ಮಹಿಳೆಯರು ಸರಕಾರದ ಧೋರಣೆ ಖಂಡಿಸಿ ಪ್ರತಿಭಟಿಸಿದರು.

ಹಿಜಾಬ್‌ ವಿವಾದ ದೇಶಾದ್ಯಂತ ಚರ್ಚೆಯಾಗುತ್ತಿದ್ದು, ಉಡುಪಿ ಹೆಸರು ಅನಗತ್ಯ ಕಾರಣಕ್ಕೆ ಮುನ್ನೆಲೆಗೆ ತಂದಿದೆ. ರಾಷ್ಟ್ರೀಯ ಮಾಧ್ಯಮಗಳೂ ಈ ಸುದ್ದಿಯತ್ತಲೇ ಗಮನ ಕೇಂದ್ರೀಕರಿಸಿವೆ.

ಪ್ರಾಂಶುಪಾಲರ ಸ್ಪಷ್ಟನೆ
ಹಿಜಾಬ್‌ ವಿವಾದ ಹುಟ್ಟಿಕೊಂಡ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರುದ್ರೆಗೌಡ ಅವರು ಹೇಳುವಂತೆ, ಕಾಲೇಜಿನಲ್ಲಿರುವ 1 ಸಾವಿರ ವಿದ್ಯಾರ್ಥಿನಿಯರ ಪೈಕಿ ಪ್ರೌಢಶಾಲೆಯಲ್ಲಿ 25 ಮತ್ತು ಪಿಯುಸಿಯಲ್ಲಿ 75 ಮಂದಿ ಮುಸ್ಲಿಂ ಸಮುದಾಯದವರು ಕಲಿಯುತ್ತಿದ್ದಾರೆ. ಎರಡು ತಿಂಗಳ ಈಚೆಗೆ 6 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಲು ಆರಂಭಿಸಿದರು. ಕೂಡಲೇ ಪೋಷಕರನ್ನು ಕರೆದು ಕೆಲವು ಸಭೆ ನಡೆಸಿ ವಿವರಿಸಲಾಯಿತು. ಆ ಬಳಿಕ ನಾಲ್ವರು ವಿದ್ಯಾರ್ಥಿನಿಯರು ಮಾತ್ರ ಹಿಜಾಬ್‌ ಧರಿಸುತ್ತಿದ್ದಾರೆ ಎಂದಿದ್ದಾರೆ. ಇದಲ್ಲದೇ ಆರಂಭದಲ್ಲೇ ವಸ್ತ್ರಸಂಹಿತೆಯನ್ನು ಎಲ್ಲ ವಿದ್ಯಾರ್ಥಿಗಳೂ ಒಪ್ಪಿಕೊಂಡಿರುವ ಬಗ್ಗೆ ದಾಖಲೆಯನ್ನು ಕಾಲೇಜಿನ ಕಡೆಯಿಂದ ಬಿಡುಗಡೆ ಮಾಡಲಾಗಿತ್ತು.

 

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.