ಸಾಧನೆಗೆ ಸಂಶೋಧನಾ ಮನೋಭಾವ ಅಗತ್ಯ
Team Udayavani, Feb 8, 2022, 9:55 AM IST
ಕಲಬುರಗಿ: ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳುವಾಗದೇ ಸಂಶೋಧನಾ ಮನೋಭಾವ ಕೂಡ ಬೆಳೆಸಿಕೊಳ್ಳಬೇಕು. ವೃತ್ತಿ ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ ಸರ್ವತೋಮುಖ ಅಭಿವೃದ್ಧಿ ಮಹತ್ವದ್ದಾಗಿದೆ ಎಂದು ಕೆಬಿಎನ್ ವಿವಿಯ ಡೀನ್ ಡಾ| ನಿಶಾತ ಆರಿಫ್ ಹುಸೇನಿ ಹೇಳಿದರು.
ನಗರದ ಖಾಜಾ ಬಂದೇನವಾಜ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 2021ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಮೊದಲ ಬ್ಯಾಚ್ನ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಬೆಳೆಯಲೆಂದೆಯೇ ವಿಶ್ವವಿದ್ಯಾಲಯ ಹೊಸ ಪರೀಕ್ಷಾ ಪದ್ಧತಿ ಜಾರಿಗೊಳಿಸಿದೆ. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹೆಚ್ಚಾಗಬೇಕು. ಸ್ನಾತಕೋತ್ತರ ಪದವಿಗೆ ಅಷ್ಟೆ ಸೀಮಿತವಾಗಿರದೇ ಡಾಕ್ಟರೆಟ್ ಬಗ್ಗೆಯೂ ಚಿಂತಿಸಬೇಕು ಎಂದರು.
ಉರ್ದು ವಿಭಾಗದ ಮುಖ್ಯಸ್ಥ ಡಾ| ಹಮೀದ್ ಅಕ್ಬರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ಗೌರವ ನೀಡಬೇಕು. ಶಿಸ್ತನ್ನು ಅಳವಡಿಸಿಕೊಂಡಲ್ಲಿ ಯಶಸ್ಸಿನ ದಾರಿ ಸುಗಮವಾಗುವುದು. ವಿದ್ಯಾರ್ಥಿ ಜೀವನ ಸ್ವರ್ಣ ಜೀವನ. ಕಾಲೇಜಿನ ದಿನಗಳು ನೆನಪು ಜೀವನಾದ್ಯಂತ ಇರುತ್ತದೆ. ಹೊಸ ಚಿಂತನೆಗಳು ಅತ್ಯಗತ್ಯ ಎಂದರು.
ಬಿ.ಬಿ.ರಜಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಜೇಬಾ ಪರ್ವೀನ್ ಮಾತನಾಡಿ, ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ಹೊಂದುವ ಬಗ್ಗೆ ಆಲೋಚಿಸಬೇಕು. ಆಧುನಿಕ ಯೋಚನಾ ಲಹರಿ ಮೈಗೂಡಿಸಿಕೊಂಡಿದ್ದು, ಸ್ಪರ್ಧಾತ್ಮಕ ಜಗತ್ತಿಗೆ ಬೇಕಾದ ಎಲ್ಲ ತರಬೇತಿ ವಿದ್ಯಾರ್ಥಿಗಳು ಪಡೆಯಬೇಕು ಎಂದರು.
ಭೌತ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಈರಮ್ ಫಾತಿಮಾ ಪ್ರಾರ್ಥಿಸಿದರು. ಗಣಿತ ವಿಭಾಗದ ವಿದ್ಯಾರ್ಥಿನಿ ಐಮನ್ ಸುಲ್ತಾನಾ ಸ್ವಾಗತಿಸಿದರು. ಇಂಗ್ಲಿಷ್ ವಿಭಾಗದ ವಿದ್ಯಾರ್ಥಿನಿ ಗೌಸಿಯಾ ವಂದಿಸಿದರು. ಸಮೂಹ ಸಂವಹನ ಮತ್ತು ಮಾಧ್ಯಮ ವಿಭಾಗದ ವಿದ್ಯಾರ್ಥಿ ಜುಬೇರ ಅಹ್ಮದ್ ಮತ್ತು ಪ್ರಾಣಿಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಸಫೂರಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
MUST WATCH
ಹೊಸ ಸೇರ್ಪಡೆ
Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ