ಇಬ್ರಾಹಿಂ ಸುತಾರ-ಲತಾ ಮಂಗೇಶ್ಕರ್‌ಗೆ ನುಡಿನಮನ

ದಾರ್ಶನಿಕರ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸಿದ ಹೆಗ್ಗಳಿಕೆ ಅವರದ್ದಾಗಿತ್ತು

Team Udayavani, Feb 8, 2022, 6:26 PM IST

ಇಬ್ರಾಹಿಂ ಸುತಾರ-ಲತಾ ಮಂಗೇಶ್ಕರ್‌ಗೆ ನುಡಿನಮನ

ಗದಗ: ಗಾನಕೋಗಿಲೆಯಾಗಿ ಲತಾ ಮಂಗೇಶ್ಕರ್‌ ಸಂಗೀತ ಲೋಕದಲ್ಲೇ ತಮ್ಮ ಬದುಕು ಸವೆಸಿದರು. ತಮ್ಮ ಅಸಾಧಾರಣ ಕಂಠ ಮಾಧುರ್ಯದಿಂದ ಸಂಗೀತ ಪ್ರಿಯರ ಮನ ಗೆದ್ದಿದ್ದರು. ಅವರ ಅಗಲಿಕೆಯಿಂದ ನಾಡಿಗೆ ತುಂಬಲಾಗದ ನಷ್ಟವಾಗಿದೆ ಎಂದು ಲೇಖಕಿ ಕವಿತಾ ದಂಡಿನ ಹೇಳಿದರು.

ಕರ್ನಾಟಕ ಲೇಖಕಿಯರ ಸಂಘದಿಂದ ನಗರದಲ್ಲಿ ಆಯೋಜಿಸಿದ್ದ ಆಧ್ಯಾತ್ಮ ಲೋಕದ ದಿಗ್ಗಜ ಇಬ್ರಾಹಿಂ ಸುತಾರ ಹಾಗೂ ಸಂಗೀತ ಕ್ಷೇತ್ರದ ದೃವತಾರೆ ಲತಾ ಮಂಗೇಶ್ಕರ್‌ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿ ನಮನ ಸಲ್ಲಿಸಿದರು.

36 ಭಾಷೆಗಳಲ್ಲಿ ತಮ್ಮ ಗಾನ ಸುಧೆಯಿಂದ ಕೇಳುಗರನ್ನು ಮಂತ್ರಮುಗ್ಧಗೊಳಿಸಿ ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿದ್ದಾರೆ. ಸುಮಾರು ಏಳುವರೆ ದಶಕಗಳ ಕಾಲ ಸಂಗೀತ ಕ್ಷೇತ್ರದ ಅನಭಿಷಕ್ತ ದೊರೆಯಂತೆ ಆಳಿದ ಲತಾ ಮಂಗೇಶ್ಕರ್‌ ಅವರಿಗೆ ಭಾರತ ಸರಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವುದು ಅವಿಸ್ಮರಣೀಯ. ಖ್ಯಾತ ಪ್ರವಚನಕಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್‌ ಸುತಾರ ಅವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಮೋಘ.ಸಮಾಜದಲ್ಲಿ ಏಕತೆಯ ನಾದದ ತಂತಿ ಮೀಟಿದ ಭಾವೈಕ್ಯ ಭಕ್ತಿಯ ಸಂಗಮ ಅವರಾಗಿದ್ದರು.

ಶರಣರ, ಸೂಫಿ ಸಂತರ, ದಾರ್ಶನಿಕರ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸಿದ ಹೆಗ್ಗಳಿಕೆ ಅವರದ್ದಾಗಿತ್ತು. ಇವರಿಬ್ಬರ ಅಗಲುವಿಕೆ ಸಾಹಿತ್ಯ-ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ವಿವಿಧ ಮಹಿಳಾ ಮಂಡಳಗಳ ಪದಾಧಿಕಾರಿಗಳಾದ ಗೀತಾ ಹೆಬಸೂರ, ಶ್ರೀದೇವಿ ಬೆಟದೂರ, ಸುಧಾ ರೊದ್ದಂ, ವೇದಾ ಕಾಲವಾಡ, ಸುಜಾತಾ ಶೆಟ್ಟರ, ಶಕುಂತಲಾ ಬೇಲೇರಿ, ಲತಾ ಮುತ್ತಿನಪೆಂಡಿಮಠ ಮುಂತಾದವರು ಸಾಧಕರ ಬದುಕಿನ ವಿವಿಧ ಹಂತಗಳ ಸಾಧನೆಯ ಮೆಟ್ಟಿಲುಗಳನ್ನು ಮೆಲುಕು ಹಾಕಿದರು.

ನುಡಿನಮನದಲ್ಲಿ ಸುವರ್ಣ ವಸ್ತ್ರದ, ಉಮಾ ಗುರಿಕಾರ, ಅಶ್ವಿ‌ನಿ ಹೇರೂರ, ಪೂರ್ಣಿಮಾ ಹಿರೇಗೌಡರ, ರತ್ನಾ ಬೇಲೂರ, ಶಾಂತಾ ದುಂದೂರ, ಮಹೇಶ್ವರಿ ನಿಲೂಗಲ್ಲ, ಗೀತಾ ಕರಿಬಿಷ್ಠಿ, ಅನ್ನಪೂರ್ಣ ಪಲ್ಲೇದ, ಸೌಮ್ಯ ಗೌಡ್ರ, ಶಶಿಕಲಾ ಲಕ್ಕನಗೌಡ್ರ, ಪಲ್ಲವಿ ಕುಂಬಾರ, ರೇಣುಕಾ ತಂಟ್ರಿ, ಶಾರದಾ ಗಡಾದ, ಬಸಮ್ಮ ಆನಂದಿ, ಸಂಗಮ್ಮ ಹಿರೇಮಠ, ಮಹಾನಂದ ಜಗಲಿ, ಲಲಿತಾ ಸಂಗನಾಳ, ಸೃಷ್ಟಿ ಲಕ್ಕನಗೌಡ್ರ, ಅನ್ನಪೂರ್ಣ ಗಡಾದ, ಮಮತಾ ಜಗಳೂರ, ಅನುಶ್ರೀ ಕುಂದಾಪುರ, ನೇಮಿತಾ ವಜ್ರಬಂಡಿ, ಅನುರಾಧಾ ಕುಲಕರ್ಣಿ ಇದ್ದರು. ಸುಮಾ ಪಾಟೀಲ ಸ್ವಾಗತಿಸಿದರು. ಸುಧಾ ಬಂಡಾ ನಿರೂಪಿಸಿದರು. ವಿಜಯಲಕ್ಷ್ಮೀ
ಹೊಳ್ಳಿಯವರ ಪರಿಚಯಿಸಿದರು. ಗೀತಾ ದೇಸಾಯಿ ವಂದಿಸಿದರು.

ಟಾಪ್ ನ್ಯೂಸ್

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

3-mundaragi

Mundargi: ದುರಸ್ತಿ ಸಂದರ್ಭ ವಿದ್ಯುತ್‌ ಶಾಕ್‌ ; ಕೂಲಿಕಾರ ಸಾವು

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.