ಡಿ.ಕೆ.ಶಿವಕುಮಾರ್ ವಿರುದ್ಧ ಡಿಜಿಪಿ, ಐಜಿಪಿಗೆ ಬಿಜೆಪಿ ದೂರು
Team Udayavani, Feb 9, 2022, 6:12 PM IST
ಬೆಂಗಳೂರು: ಜನರ ನಡುವೆ ದ್ವೇಷ ಉಂಟು ಮಾಡುವ, ಸಮಾಜದಲ್ಲಿ ಶಾಂತಿ ಕದಡುವಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಬಿಜೆಪಿ ಕಾನೂನು ಪ್ರಕೋಷ್ಠದ ವತಿಯಿಂದ ಕರ್ನಾಟಕ ಡಿಜಿಪಿ ಮತ್ತು ಐಜಿಪಿ ರವರಿಗೆ ಬುಧವಾರ ದೂರು ಸಲ್ಲಿಸಲಾಗಿದ್ದು, ಶಿವಕುಮಾರ್ ರವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಂಡು ಇನ್ನು ಮುಂದೆ ಅವರು ಈ ರೀತಿ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡದಂತೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದೆ.
ಹಿಂಸೆ, ದ್ವೇಷ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಮಾದರಿಯ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಕಾನೂನು ಪ್ರಕೋಷ್ಠ ಆಕ್ಷೇಪ ವ್ಯಕ್ತಪಡಿಸಿದೆ.
ಇದನ್ನೂ ಓದಿ : ರಾಷ್ಟ್ರಧ್ವಜ ಇಳಿಸಿಲ್ಲ,ಗೊಂದಲ ಮೂಡಿಸಬೇಡಿ: ಸಚಿವ ಬಿ.ಸಿ.ನಾಗೇಶ್
ದೂರು ನೀಡುವ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕೋಶಾಧ್ಯಕ್ಷರಾದ ಸುಬ್ಬನರಸಿಂಹ, ಬೆಂಗಳೂರು ದಕ್ಷಿಣ ಜಿಲ್ಲೆ ಕಾನೂನು ಪ್ರಕೋಷ್ಠದ ಸಂಚಾಲಕರಾದ ಯಶವಂತ್ ಎಂ ಮತ್ತು ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರಾದ ವಿನೋದ್ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ