ಕರಾಟೆಯಿಂದ ಆತ್ಮಬಲ; ಸಂಗಮೇಶ ದುಂದೂರ
ದೈಹಿಕ ಸಾಮರ್ಥ್ಯವಲ್ಲದೇ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಅವಕಾಶ ಕಲ್ಪಿಸುವ ಕಲೆಯಾಗಿದೆ
Team Udayavani, Feb 9, 2022, 6:10 PM IST
ಗದಗ: ವಿದ್ಯಾರ್ಥಿನಿಯರಿಗೆ ಆತ್ಮವಿಶ್ವಾಸ ಮೂಡಿಸಲು ಹಾಗೂ ಸ್ವಯಂ ರಕ್ಷಣೆಗಾಗಿ ಆತ್ಮರಕ್ಷಣಾ ಕಲೆ ಕರಾಟೆ ತರಬೇತಿ ನೀಡುವುದು ಓಬವ್ವ ಆತ್ಮ ರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ ಕಾರ್ಯಕ್ರಮದ ಉದ್ದೇಶ ಎಂದು ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ ತಿಳಿಸಿದರು.
ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ಆಶ್ರಯದಲ್ಲಿ ಮಂಗಳವಾರ ನಗರದ ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಓಬವ್ವ ಆತ್ಮ ರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ತರಬೇತಿ ವಿದ್ಯಾರ್ಥಿನಿಯರ ಆತ್ಮವಿಶ್ವಾಸವನ್ನು ಉನ್ನತ ಮಟ್ಟಕ್ಕೆ ಒಯ್ಯುತ್ತದೆ. ಸಮಾಜದಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ಯಾವುದರಲ್ಲೂ ಕಡಿಮೆಯಿಲ್ಲವೆಂದು ತೋರಿಸಿದ್ದಾರೆ. ದೈಹಿಕ ಸಾಮರ್ಥ್ಯವಲ್ಲದೇ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಅವಕಾಶ ಕಲ್ಪಿಸುವ ಕಲೆಯಾಗಿದೆ ಎಂದರು.
ನಗರಸಭೆ ಅಧ್ಯಕ್ಷ ಉಷಾ ದಾಸರ ಮಾತನಾಡಿ, ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಹಾಗೂ ಆತ್ಮವಿಶ್ವಾಸ ಮೂಡಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ಜಿಲ್ಲಾ ಮಟ್ಟದಲ್ಲೂ ಓಬವ್ವ ಆತ್ಮ ರಕ್ಷಣಾ ಕೌಶಲ್ಯಗಳ ತರಬೇತಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಆತ್ಮವಿಶ್ವಾಸ ಮೂಡಿಸಲು ಹಾಗೂ ಆತ್ಮರಕ್ಷಣೆ ಉದ್ದೇಶದಿಂದ ಈ ಯೋಜನೆ ಜಾರಿ ಮಾಡಲಾಗಿದೆ. ವೀರ ವನಿತೆ ಓಬ್ಬವ್ವ ಯಾವುದೇ ಆಯುಧವಿಲ್ಲದೇ ಶತ್ರುಗಳನ್ನು ಸೋಲಿಸಿ, ಕೋಟೆ ರಕ್ಷಣೆ ಮಾಡಿದ್ದು ಎಲ್ಲ ಹೆಣ್ಣು ಮಕ್ಕಳಿಗೆ ಆದರ್ಶವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಗೊಜನೂರು ಹಾಗೂ ಒಡೆಯರ ಮಲ್ಲಾಪುರ ಮೊರಾರ್ಜಿ ವಸತಿ ನಿಲಯದ ವಿದ್ಯಾರ್ಥಿಗಳಿಂದ ತರಬೇತಿಯ ಕುರಿತು ಪ್ರಾತ್ಯಕ್ಷಿಕೆ ಜರುಗಿತು. ಮಂಜು ಭಜಂತ್ರಿ, ರಾಜೇಶ್ವರಿ ಭಜಂತ್ರಿ ಅವರು ಲಾಠಿ ಚಲಾಯಿಸುವ ಕುರಿತು ಪ್ರದರ್ಶನ ನೀಡಿದರು. ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಪಂ ಸಿಇಒ ಭರತ್ ಎಸ್., ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅ ಧಿಕಾರಿ ಮೆಹಬೂಬ ತುಂಬರಗಟ್ಟಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಕಾವ್ಯಾ ಸೊರಟೂರ
ಹಾಗೂ ಸಂಗಡಿಗರು ಪ್ರಾರ್ಥಿಸಿ, ವೆಂಕಟೇಶ್ ಅಲ್ಕೋಡ್ ನಾಡಗೀತೆ ಹಾಡಿದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ರವಿ ಗುಂಜೀಕರ್ ಸ್ವಾಗತಿಸಿ, ಬಸವರಾಜ ಬಳ್ಳಾರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು
Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ
Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ
Mundargi: ದುರಸ್ತಿ ಸಂದರ್ಭ ವಿದ್ಯುತ್ ಶಾಕ್ ; ಕೂಲಿಕಾರ ಸಾವು
ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ
MUST WATCH
ಹೊಸ ಸೇರ್ಪಡೆ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
Sandalwood: ರಿಷಿ ಖುಷಿ!: ಅಕೌಂಟ್ಗೆ ಮತ್ತೊಂದು ಚಿತ್ರ ತ್ತೊ
Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ