ಉದ್ಯೋಗ ನಷ್ಟ, ಸಾಲಬಾಧೆಗೆ 25 ಸಾವಿರ ಮಂದಿ ಸಾವು!
ರಾಜ್ಯಸಭೆಗೆ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ರಾಯ್ ಮಾಹಿತಿ
Team Udayavani, Feb 10, 2022, 7:45 AM IST
ನವದೆಹಲಿ: ದೇಶದಲ್ಲಿ 2018 ಮತ್ತು 2020ರಲ್ಲಿ ಸಾಲದ ಹೊರೆ ಅಥವಾ ಉದ್ಯೋಗ ನಷ್ಟ ಹೊಂದಿದ ಕಾರಣಕ್ಕೆ 25 ಸಾವಿರ ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೀಗೆಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಯಲ್ಲಿ ಗೃಹ ಖಾತೆ ಸಹಾಯ ಸಚಿವ ನಿತ್ಯಾನಂದ ರಾಯ್ ಲಿಖಿತ ಉತ್ತರ ನೀಡಿದ್ದಾರೆ.
9,140 ಮಂದಿ ಮತ್ತು 16,091 ಮಂದಿ ಎರಡು ವರ್ಷಗಳ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಮಂಡಳಿ (ಎನ್ಸಿಆರ್ಬಿ) ನೀಡಿದ ಮಾಹಿತಿ ಆಧಾರದಲ್ಲಿ ಈ ಮಾಹಿತಿ ನೀಡಲಾಗಿದೆ ಎಂದು ಸಚಿವರು ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.
ಎನ್ಸಿಆರ್ಬಿ ಪ್ರಕಾರ 2020ರಲ್ಲಿ 3,548 ಮಂದಿ ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2018ರಲ್ಲಿ 2,741, 2019ರಲ್ಲಿ 1,851 ಮಂದಿ ಕೆಲಸವಿಲ್ಲ ಎಂಬ ಕಾರಣಕ್ಕಾಗಿ ಸಾವಿಗೆ ಶರಣಾಗಿದ್ದಾರೆ.
ಇದನ್ನೂ ಓದಿ:ನಾಳೆ ಯುಪಿ ಮೊದಲ ಹಂತದ ವೋಟಿಂಗ್ : 9 ಸಚಿವರ ಭವಿಷ್ಯ ನಿರ್ಧಾರ
ಸಾಲದ ಬಾಧೆಯಿಂದಾಗಿ ಸಾವಿಗೆ ಶರಣಾದವರ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಚಿವರು 2018ರಲ್ಲಿ 4,970, 2019ರಲ್ಲಿ 5,908, 2020ರಲ್ಲಿ 600ರಷ್ಟು ಕಡಿಮೆಯಾಗಿ, 5,213 ಆಗಿತ್ತು ಎಂದು ಹೇಳಿದ್ದಾರೆ ನಿತ್ಯಾನಂದ ರಾಯ್.
ನೊಂದಿರುವವರಿಗೆ ಸಾಂತ್ವನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಯೋಜನೆಯ ಅನ್ವಯ ಜಿಲ್ಲಾ ಮಾನಸಿಕ ಆರೋಗ್ಯ ಯೋಜನೆ ಜಾರಿ ಮಾಡಲಾಗುತ್ತಿದೆ. 692 ಜಿಲ್ಲೆಗಳಲ್ಲಿ ಅದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ