ಶಿಕ್ಷಣವೇ ಆದ್ಯತೆಯಾಗಲಿ; ಹಿಜಾಬ್‌ ವಿವಾದ ಹಿನ್ನೆಲೆಯಲ್ಲಿ ಧಾರ್ಮಿಕ ಮುಖಂಡರ ಸಲಹೆ


Team Udayavani, Feb 10, 2022, 7:00 AM IST

ಶಿಕ್ಷಣವೇ ಆದ್ಯತೆಯಾಗಲಿ; ಹಿಜಾಬ್‌ ವಿವಾದ ಹಿನ್ನೆಲೆಯಲ್ಲಿ ಧಾರ್ಮಿಕ ಮುಖಂಡರ ಸಲಹೆ

ಮೊದಲೇ ಕೊರೊನಾ ನಿರ್ಬಂಧ ನಡುವೆ ತತ್ತರಿಸುತ್ತಿರುವ ರಾಜ್ಯದ ಶಿಕ್ಷಣ ವ್ಯವಸ್ಥೆ ಇನ್ನೊಂದು ಆಘಾತವನ್ನು ಎದುರಿಸುತ್ತಿದೆ. ಶೈಕ್ಷಣಿಕ ವರ್ಷ ಕೊನೇ ಹಂತದಲ್ಲಿದ್ದು, ಎಲ್ಲರೂ ಅಂತಿಮ ಪರೀಕ್ಷೆಗೆ ಸಜ್ಜಾಗುತ್ತಿರುವಾಗಲೇ ಹಿಜಾಬ್‌-ಕೇಸರಿ ಶಾಲು ವಿವಾದ ಎದ್ದು ನಿಂತಿದೆ. ಈ ಹೊತ್ತಿನಲ್ಲಿ ವಿದ್ಯಾರ್ಥಿಗಳು ಓದಿನ ಕಡೆಗೆ ಗಮನ ಕೊಡಬೇಕು ಎಂದು ನಾಡಿನ ಸರ್ವಧರ್ಮಗಳ ಮುಖಂಡರು ಕರೆ ನೀಡಿದ್ದಾರೆ.

ಶಾಲೆಗಳಿಗೇಕೆ ಧರ್ಮ?
ಶಾಲೆಗಳಲ್ಲಿ ಧರ್ಮ ಇರಬಾರದು. ಎಲ್ಲರೂ ಸಮಾ ನತೆಯಿಂದ ಇರಬೇಕು. ಶಿಕ್ಷಣ ಅತೀ ಮುಖ್ಯ. ಎಲ್ಲದ್ದ ಕ್ಕಿಂತಲೂ ಈ ಬಗ್ಗೆ ಹೆಚ್ಚು ಗಮನ ಕೊಡಿ. ಕ್ಷುಲ್ಲಕ ವಿಷಯವನ್ನು ಇಷ್ಟು ದೊಡ್ಡದು ಮಾಡಬಾರದು. ಈಗ ಈ ವಿಷಯ ನ್ಯಾಯಾಲಯದಲ್ಲಿ ಇದೆ. ನ್ಯಾಯಾ ಲಯದ ತೀರ್ಪಿಗೆ ಎಲ್ಲರೂ ಬದ್ಧರಾಗಿ ಇರಬೇಕು.
– ಶ್ರೀ ಸಿದ್ಧಲಿಂಗ ಸ್ವಾಮೀಜಿ, ತುಮ ಕೂರು ಸಿದ್ಧಗಂಗಾ ಮಠ

ಸಂಯಮ ಇರಲಿ
ವಿದ್ಯಾರ್ಥಿಗಳು ಸಂಯಮ ಕಳೆದುಕೊಳ್ಳಬಾರದು. ನಾಡಿನಲ್ಲಿ ಇಂಥ ಬೆಳವಣಿಗೆ ಒಳ್ಳೆಯದಲ್ಲ. ನ್ಯಾಯಾಲಯ ಏನು ಹೇಳುತ್ತದೆಯೋ ಆ ರೀತಿ ತೀರ್ಮಾನ ಮಾಡಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಗಲಾಟೆ, ಗದ್ದಲಕ್ಕೆ ಅವಕಾಶ ಮಾಡಿ ಕೊಡಬಾರದು. ಶಿಕ್ಷಣಕ್ಕೆ ಆದ್ಯತೆ ಕೊಡಿ.
-ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ, ಉಡುಪಿ ಪೇಜಾವರ ಮಠ

ಎಲ್ಲರ ಭಾವನೆಗಳಿಗೂ ಗೌರವ ನೀಡಬೇಕು
ವಿದ್ಯಾರ್ಥಿಗಳಿಗೆ ಶಿಕ್ಷಣ ಬಹುಮುಖ್ಯ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ಪ್ರಸ್ತುತ ಸನ್ನಿವೇಶದಲ್ಲಿ ಶಾಂತಿ-ಸೌಹಾರ್ದಕ್ಕೆ ಎಲ್ಲರೂ ಪ್ರಯತ್ನಿಸಬೇಕು. ಶಾಲೆಗಳಲ್ಲಿ ಸಮವಸ್ತ್ರಕ್ಕೆ ಆದ್ಯತೆ ನೀಡಬೇಕು. ಜತೆಗೆ ಎಲ್ಲರ ಭಾವನೆಗಳನ್ನೂ ಗೌರವಿಸಬೇಕು. ಕಾಗಿನೆಲೆ ಯಲ್ಲಿ ನಾವೂ ಶಾಲೆ ನಡೆಸುತ್ತಿದ್ದೇವೆ. ಶೇ. 90ರಷ್ಟು ಮುಸ್ಲಿಂ ಸಮುದಾಯದವರಿದ್ದಾರೆ. ಅಲ್ಲಿ ಬುರ್ಖಾ, ಹಿಜಾಬ್‌ ಧರಿಸಿ ಶಾಲೆ ಕಾಂಪೌಂಡ್‌ವರೆಗೂ ಬಂದು ಬಳಿಕ ಅವರಿಗಾಗಿಯೇ ನೀಡಲಾದ ಪ್ರತ್ಯೇಕ ಕೊಠಡಿಯಲ್ಲಿ ಬದಲಾಯಿಸಿ ಪ್ರಾರ್ಥನೆ ಹಾಗೂ ತರಗತಿಯಲ್ಲಿ ಸಮವಸ್ತ್ರದಲ್ಲೇ ಇರುತ್ತಾರೆ. ಇಂಥ ಅವಕಾಶ ಕಲ್ಪಿಸುವುದು ಸೂಕ್ತ.
 -ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಕನಕಗುರುಪೀಠ

ತೀವ್ರ ವೇದನೆ ಇದೆ
ಹಿಜಾಬ್‌ ಕುರಿತು ಎದ್ದಿರುವ ಅಪಸ್ವರ ಹಾಗೂ ಅವು ಗಳಿಂದ ಉಂಟಾದ ಪ್ರಕ್ಷುಬ್ಧತೆಯ ಬಗ್ಗೆ ತೀವ್ರ ವೇದನೆ ಯಿದೆ. ಶೈಕ್ಷಣಿಕ ಸಂಸ್ಥೆಗಳ ಶಾಂತಿ ಯುತ ವಾತಾವರಣಕ್ಕೆ ಧಕ್ಕೆ ಉಂಟಾ ಗುತ್ತಿರುವುದು ಅತ್ಯಂತ ಕಳವಳಕಾರಿ. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಯೋಚಿಸಬೇಕು. ಕಾನೂನು ಮತ್ತು ಸುವ್ಯವಸ್ಥೆ, ಕೋಮು ಸೌಹಾರ್ದ, ಶಾಂತಿ – ಸಾಮರಸ್ಯವನ್ನು ಕಾಪಾಡುವುದು ನಾಗರಿಕ ಸಮಾಜದ ಜವಾಬ್ದಾರಿ. ವಿಶೇಷವಾಗಿ ವಿದ್ಯಾರ್ಥಿ ಸಮುದಾಯ ಸಂಯಮವನ್ನು ಕಾಯ್ದುಕೊಳ್ಳಬೇಕು.
-ಡಾ| ಮೊಹಮ್ಮದ್‌ ಸಾದ್‌ ಬೆಲಗಾಮಿ,
ರಾಜ್ಯಾಧ್ಯಕ್ಷರು, ಜಮಾತೆ ಇಸ್ಲಾಮಿ ಹಿಂದ್‌-ಕರ್ನಾಟಕ

ಓದಿ ನತ್ತ ಗಮನ ನೀಡಿ
ಪರೀಕ್ಷೆಗಳು ಹತ್ತಿರವಾಗುತ್ತಿರುವಾಗ ಚೆನ್ನಾಗಿ ಓದಿಕೊಳ್ಳ ಬೇಕಾಗಿದ್ದ ವಿದ್ಯಾರ್ಥಿಗಳು ವಿವಾದದ ಸುಳಿಯಲ್ಲಿ ಸಿಲುಕಿರುವುದು ಬೇಸರದ ವಿಷಯ. ಒಂದು ಸಾಧಾರಣ ವಿಷಯವನ್ನು ವಿವಾದವನ್ನಾಗಿಸಿ, ಅದರಲ್ಲಿ ವಿದ್ಯಾರ್ಥಿ ಗಳನ್ನು ಸಿಲುಕಿಸಿರುವುದು ಅವರ ಭವಿಷ್ಯದ ಕುರಿತು ಯೋಚಿಸುವಂತೆ ಮಾಡಿದೆ. ವಿದ್ಯಾರ್ಥಿಗಳು ತಮ್ಮ ತಾಳ್ಮೆಯನ್ನು ಕಳೆದುಕೊಳ್ಳಬಾರದು. ಮತ್ತೆ ಎಲ್ಲರೂ ಸಹ ಅದೇ ತರಗತಿಗಳಿಗೆ ಹೋಗಿ, ಒಬ್ಬರನ್ನೊಬ್ಬರು ನೋಡಬೇಕಿರುವುದರಿಂದ ಈ ಮನಃಸ್ಥಿತಿಯನ್ನು ಬದಲಿಸಿಕೊಳ್ಳಿ. ಕೋರ್ಟ್‌ ತೀರ್ಪು ಏನೇ ಬಂದರೂ ಶಾಂತಿ, ಸಮಾಧಾನದಿಂದ ವರ್ತಿಸಿ, ಚೆನ್ನಾಗಿ ಓದಿ,
-ಡಾ| ಪೀಟರ್‌ ಮಚಾದೋ, ಮಹಾಧರ್ಮಾಧ್ಯಕ್ಷ

ಟಾಪ್ ನ್ಯೂಸ್

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.