ನೀವು ತಪ್ಪು ಮಾಡಿದರೆ ಉ.ಪ್ರದೇಶವು ಕಾಶ್ಮೀರ-ಬಂಗಾಳ ಆಗಬಹುದು: ಮತದಾರರಿಗೆ ಯೋಗಿ ಮನವಿ
Team Udayavani, Feb 10, 2022, 11:02 AM IST
ಲಕ್ನೋ: ‘ಮತದಾನ ಮಾಡುವ ವೇಳೆ ನೀವು ತಪ್ಪು ಮಾಡಿದರೆ ಉತ್ತರ ಪ್ರದೇಶವು ಕಾಶ್ಮೀರ, ಬಂಗಾಳ ಮತ್ತು ಕೇರಳದಂತೆ ಆಗಬಹುದು” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯೋಗಿ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ಉತ್ತರ ಪ್ರದೇಶ ಬಿಜೆಪಿಯು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಯೋಗಿ ಆದಿತ್ಯನಾಥ್ ಅವರು ಬಿಜೆಪಿಗೆ ಮತ ಹಾಕಿದರೆ “ಭಯಮುಕ್ತ ಜೀವನ ಗ್ಯಾರಂಟಿ” ಎಂದು ಹೇಳಿದ್ದಾರೆ.
“ನನ್ನ ಹೃದಯದಿಂದ ಈ ಮಾತುಗಳನ್ನು ಹೇಳುತ್ತಿದ್ದೇನೆ, ಕಳೆದ ಐದು ವರ್ಷಗಳಲ್ಲಿ ಹಲವು ಉತ್ತಮ ಕೆಲಸಗಳಾಗಿದೆ. ಒಂದು ವೇಳೆ ನೀವು ಬಾರಿ ತಪ್ಪಿದರೆ, ಈ ಎಲ್ಲಾ ಕೆಲಸಗಳು ಹಾಳಾಗಬಹುದು. ಹೀಗಾದಲ್ಲಿ ಉತ್ತರ ಪ್ರದೇಶವು ಕಾಶ್ಮೀರ, ಕೇರಳ, ಬಂಗಾಳ ನಂತೆ ಆಗಬಹುದು” ಎಂದು ಯೋಗಿ ಹೇಳಿದರು.
ಇದನ್ನೂ ಓದಿ:ಹಿಜಾಬ್ ವಿವಾದ: ಭಾರತೀಯ ಚಾರ್ಜ್ ಡಿ’ಅಫೇರ್ಗಳಿಗೆ ಸಮನ್ಸ್ ನೀಡಿದ ಪಾಕಿಸ್ಥಾನ!
“ನಿಮ್ಮ ಮತಗಳು ನನ್ನ ಐದು ವರ್ಷದ ಕೆಲಸಕ್ಕೆ ಆಶೀರ್ವಾದ ಇದ್ದಂತೆ, ನಿಮ್ಮ ಮತಗಳು ನಿಮ್ಮ ಐದು ವರ್ಷಗಳ ಭಯಮುಕ್ತ ಜೀವನಕ್ಕೆ ಗ್ಯಾರಂಟಿ” ಎಂದರು.
मतदान करें, अवश्य करें !
आपका एक वोट उत्तर प्रदेश का भविष्य तय करेगा। नहीं तो उत्तर प्रदेश को कश्मीर, केरल और बंगाल बनते देर नहीं लगेगी: मुख्यमंत्री श्री @myogiadityanath pic.twitter.com/03VUlXOY35
— BJP Uttar Pradesh (@BJP4UP) February 9, 2022
ಉತ್ತರ ಪ್ರದೇಶದ ಪಶ್ಚಿಮ ಭಾಗದ 58 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ