ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ ; ಪ್ರತಿಭಟನೆ, ಮುಷ್ಕರ ನಡೆಸದಂತೆ ಷರತ್ತು
Team Udayavani, Feb 11, 2022, 6:20 AM IST
ಬೆಂಗಳೂರು: ವೇತನ ಪರಿಷ್ಕರಣೆ ಹಾಗೂ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಮುಷ್ಕರ ನಡೆಸಿ ವಜಾಗೊಂಡಿದ್ದ ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರಿಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಮರು ನೇಮಕ ಆದೇಶ ನೀಡಿದ್ದಾರೆ.
ಬುಧವಾರ ತಮ್ಮ ಸರಕಾರಿ ನಿವಾಸ ದಲ್ಲಿ 100 ಮಂದಿ ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರಿಗೆ ಮರು ನೇಮಕಾತಿ ಆದೇಶ ನೀಡಿದರು.
ನೌಕರರು ಮುಷ್ಕರ ನಡೆಸಬಾರದು ಎನ್ನುವುದಿಲ್ಲ. ಆದರೆ, ಮುಷ್ಕರ ನಡೆಸುವ ಮೊದಲು ಸಂಬಂಧ ಪಟ್ಟ ಸಚಿವರು, ಸಿಎಂ ಜತೆ ಚರ್ಚಿಸಬೇಕು. ಈಗಾಗಲೇ ಅಮಾನತುಗೊಂಡಿರುವ 1,500 ಮಂದಿಯನ್ನು ಮರು ಕರೆಸಿಕೊಳ್ಳಲಾಗಿದೆ.
1,353 ಜನರು ವಜಾಗೊಂಡಿದ್ದು, ಅವರ ಮರು ನೇಮಕಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಆದರೆ, ಮಾನವೀಯತೆಯ ದೃಷ್ಟಿಯಿಂದ ಮರು ನೇಮಕ ಆದೇಶ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ 100 ಮಂದಿಯನ್ನು ನೇಮಿಸಿ ಕೊಳ್ಳಲಾಗುತ್ತಿದೆ. ಉಳಿದವರನ್ನು ಹಂತ ಹಂತವಾಗಿ ಮರು ನೇಮಕ ಮಾಡಲಾಗುತ್ತಿದೆ. ಈ ತಿಂಗಳ ಒಳಗೆ 700 ಮಂದಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದರು.
ಇದನ್ನೂ ಓದಿ:ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ಕೊನೆ ಅವಕಾಶ
ಇನ್ನು ಪ್ರತಿಭಟನೆ, ಮುಷ್ಕರ ಮಾಡಿದರೆ ನಿಮ್ಮನ್ನು ರಕ್ಷಿಸುವುದು ಕಷ್ಟ. ಸರಕಾರದ ಬಗ್ಗೆ ನಿಮಗೆ ಗೌರವ ಇರಬೇಕು. ಮುಂದೆ ಪ್ರತಿ ತಿಂಗಳು ಸಂಬಳ ದೊರೆಯುವಂತೆ ನೋಡಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ