ಹಿಜಾಬ್- ಕೇಸರಿ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ದ: ಬಸವರಾಜ ಹೊರಟ್ಟಿ
Team Udayavani, Feb 11, 2022, 2:30 PM IST
ಹುಬ್ಬಳ್ಳಿ: ಹಿಜಾಬ್- ಕೇಸರಿ ವಿವಾದ ರಾಜಕೀಯಮಯವಾಗಿದ್ದು, ಸಮಸ್ಯೆ ಬಗೆಹರಿಸಲು ಬೇಕಾದರೆ ನಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಈ ಸಮಸ್ಯೆ ಬಗೆಹರಿಸುವಲ್ಲಿ ಎಡವಿದೆ. ತನ್ನ ಜವಾಬ್ದಾರಿಯಿಂದ ವಿಮುಖವಾಗಿದೆ. ಪ್ರಕರಣದ ಬಗ್ಗೆ ಗಂಭೀರತೆ ಇಲ್ಲ. ಶಿಕ್ಷಣ ಸಚಿವರು ಆರಾಮವಾಗಿದ್ದರೆ ಹೇಗೆ? ಶಾಲಾ-ಕಾಲೇಜ್ ಗೆ ರಜೆ ಕೊಟ್ಟದ್ದು ಸರಿಯಲ್ಲ ಎಂದರು.
ಇದನ್ನೂ ಓದಿ:ಸಿದ್ದರಾಮಯ್ಯ ರಾಜಕೀಯ ಸ್ಕೋರ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ: ಶ್ರೀರಾಮುಲು
ರಾಮನ ಭಕ್ತರೇ ಇರಲಿ, ಹನುಮನ ಭಕ್ತರೇ ಇರಲಿ. ಮಕ್ಕಳ ಜೊತೆ ರಾಜಕೀಯ ಮಾಡಬಾರದು. ಕೆಲ ಸಂಘಟನೆಗಳು ರಾಜಕೀಯ ನಾಯಕರ ಸಂಬಂಧಿಗಳು ಇದ್ದಹಾಗೆ. ಕುಮ್ಮಕ್ಕು ಕೊಟ್ಟು ಈ ರೀತಿ ಮಾಡಲಾಗುತ್ತಿದೆ. ಸಮಾಜದಲ್ಲಿ ಜವಾಬ್ದಾರಿ ಇರುವವರು ನಮ್ಮ ಊರು, ನಮ್ಮ ಜಿಲ್ಲೆ, ರಾಜ್ಯದ ಮಕ್ಕಳು ಎನ್ನುವುದನ್ನು ಮರೆತು, ಹೊಲಸು ರಾಜಕೀಯ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಒಂದೇ ಕೊಲೆ ಮಾಡುವುದು ಎರಡೂ ಒಂದೇ. ನ್ಯಾಯಾಲಯದಿಂದ ಯಾವುದೇ ತೀರ್ಮಾನ ಆದರೂ ಮಕ್ಕಳಲ್ಲಿ ಈ ವಿಷ ಹಾಗೇ ಇರುತ್ತೆ. ನಾನೇ ಉಸ್ತುವಾರಿ ತೆಗೆದುಕೊಂಡು ಸಮಸ್ಯೆ ಬಗೆಹರಿಸು ಅಂದರೆ ಮಾಡುತ್ತೇನೆ. ಪೋಷಕರು, ಕಾಲೇಜು ಆಡಳಿತ ಮಂಡಳಿ, ಶಿಕ್ಷಣ ಸಚಿವರ ಜೊತೆ ಸಭೆ ಮಾಡುತ್ತೇನೆ. ಈ ಬಗ್ಗೆ ಸಿಎಂ ಅಂಥವರು ನನಗೆ ಹೇಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!
Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು
Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್