ನಮ್ಮದು ಅಮೃತ ಕಾಲ; ನಿಮ್ಮದು ರಾಹು ಕಾಲ

 ಕಾಂಗ್ರೆಸ್‌ಗೆ ರಾಜ್ಯಸಭೆಯಲ್ಲಿ ಸಚಿವೆ ನಿರ್ಮಲಾ ತಿರುಗೇಟು ; ಬಜೆಟ್‌ ಅಧಿವೇಶನದ ಮೊದಲಾರ್ಧ ಮುಕ್ತಾಯ

Team Udayavani, Feb 12, 2022, 6:45 AM IST

ನಮ್ಮದು ಅಮೃತ ಕಾಲ; ನಿಮ್ಮದು ರಾಹು ಕಾಲ

ಹೊಸದಿಲ್ಲಿ: ದೇಶದ ಅರ್ಥವ್ಯವಸ್ಥೆ ಅತೀ ದೊಡ್ಡ ಹಿನ್ನಡೆ ಕಂಡಿದ್ದರೂ, ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಶೇ.6.2ರಲ್ಲಿಯೇ ನಿಯಂತ್ರಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಸಂಸತ್‌ನಲ್ಲಿ ಬಜೆಟ್‌ ಮೇಲಿನ ಚರ್ಚೆಗೆ ಶುಕ್ರವಾರ ಉತ್ತರಿಸಿದ ಅವರು, 2022-23ನೇ ಸಾಲಿನ ಬಜೆಟ್‌ ದೇಶದ ಅರ್ಥ ವ್ಯವಸ್ಥೆ ಹೊಂದಿರುವ ಸ್ಥಿರತೆಯನ್ನು ಪ್ರತಿ ಬಿಂಬಿಸುತ್ತದೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಿದೆ ಎಂದಿದ್ದಾರೆ.

ಬಜೆಟ್‌ನಲ್ಲಿ ಬಡವರನ್ನು ಹೊರಗಿಡಲಾಗಿದೆ ಎಂಬ ಮಾಜಿ ಸಚಿವ ಪಿ.ಚಿದಂಬರಂ ಮತ್ತು ರಾಹುಲ್‌ ಗಾಂಧಿ ಹೇಳಿಕೆ ವಿರುದ್ಧ ಮಾತಿನ ಬಾಣಗಳನ್ನೆಸೆದ ನಿರ್ಮಲಾ, “ಬಡತನ ಎಂದರೆ ಆಹಾರ, ಹಣ ಅಥವಾ ಇನ್ನಿತರ ಯಾವುದೇ ಸೊತ್ತಿನ ಕೊರತೆ ಅಲ್ಲ. ಅದೊಂದು ಮನಃಸ್ಥಿತಿ ಅಷ್ಟೆ ಎಂದು ನಿಮ್ಮ ಪಕ್ಷದ ಮಾಜಿ ಅಧ್ಯಕ್ಷರು ಈ ಹಿಂದೆಯೇ ಹೇಳಿದ್ದರು. ಆತ್ಮವಿಶ್ವಾಸ ಇದ್ದರೆ ಬಡತನದ ಪರಿಸ್ಥಿತಿಯಿಂದ ಹೊರಬರಬಹುದು ಎಂದಿದ್ದರು. ಹೀಗಾಗಿ ನಾನು ಬಡತನ ಎಂಬ ಮನಃಸ್ಥಿತಿ ಬಗ್ಗೆ ಗಮನಹರಿಸಬೇಕೋ’ ಎಂದು ಪ್ರಶ್ನೆ ಮಾಡಿದರು.

ಕೊರೊನಾದಿಂದಾಗಿ ದೇಶದ ಅರ್ಥವ್ಯವಸ್ಥೆಗೆ 9.57 ಲಕ್ಷ ಕೋಟಿ ರೂ. ನಷ್ಟವಾಗಿದೆ. 2008-2009ನೇ ಸಾಲಿನ ಆರ್ಥಿಕ ಹಿಂಜರಿತ ವೇಳೆ ದೇಶಕ್ಕೆ 2.12 ಲಕ್ಷ ಕೋಟಿ ರೂ. ನಷ್ಟವಾಗಿತ್ತು ಎಂದಿದ್ದಾರೆ. ಮಾಜಿ ಸಚಿವ ಕಪಿಲ್‌ ಸಿಬಲ್‌, “ದೇಶಕ್ಕೆ ಅಮೃತ ಕಾಲ ಅಲ್ಲ ರಾಹು ಕಾಲ ಬಂದಿದೆ’ ಎಂಬ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ನಿರ್ಮಲಾ, “ನಮ್ಮದು ಅಮೃತ ಕಾಲ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಸ್ವಾತಂತ್ರ್ಯ ಸಿಕ್ಕಿ 100 ವರ್ಷ ಪೂರ್ತಿಯಾಗುವವರೆಗೆ ದೂರದೃಷ್ಟಿ ಹೊಂದಿರಬೇಕು ಎನ್ನುವುದು ನಮ್ಮ ವಾದ. 65 ವರ್ಷಗಳ ಕಾಲ ದೇಶ ಒಂದೇ ಕುಟುಂಬಕ್ಕೆ ನಿಷ್ಠವಾಗಿ ನಿರ್ದಿಷ್ಟ ಗುರಿಯಿಲ್ಲದೆ ಆಡಳಿತ ನಡೆಸಿದ್ದ ಕಾಲವೇ ರಾಹು ಕಾಲ’ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ:ಪಿಎಲ್‌ಐ ಯೋಜನೆಗೆ 20 ವಾಹನ ತಯಾರಿಕಾ ಕಂಪನಿಗಳು ಆಯ್ಕೆ

ಅದೇ ರೀತಿ, ಬಜೆಟ್‌ ಅಧಿವೇಶನದ ಮೊದಲಾರ್ಧದ ಕೊನೆಯ ದಿನವಾದ ಶುಕ್ರವಾರ ಲೋಕಸಭೆಯಲ್ಲೂ ಮಾತನಾಡಿದ ಸಚಿವೆ ನಿರ್ಮಲಾ, “ಕಾಂಗ್ರೆಸ್‌ನ ಯುಗ ಅಂಧಕಾಲ, ಬಿಜೆಪಿಯದ್ದು ಅಮೃತಕಾಲ’ ಎಂದಿದ್ದಾರೆ.

ವಿಪಕ್ಷಗಳ ಸಭಾತ್ಯಾಗ
ಉತ್ತರಪ್ರದೇಶದಲ್ಲಿ ಬಿಜೆಪಿಗೆ ಮತ ಹಾಕದಿದ್ದರೆ, ರಾಜ್ಯವು ಕೇರಳ, ಪಶ್ಚಿಮ ಬಂಗಾಲ ಅಥವಾ ಜಮ್ಮು ಕಾಶ್ಮೀರದಂತಾಗುತ್ತದೆ ಎಂಬ ಸಿಎಂ ಯೋಗಿ ಆದಿತ್ಯನಾಥ್‌ ಹೇಳಿಕೆ ಖಂಡಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸಿವೆ. ಜತೆಗೆ ಕಾಂಗ್ರೆಸ್‌, ಟಿಎಂಸಿ, ಎನ್‌ಸಿ, ಡಿಎಂಕೆ, ಎಸ್‌ಪಿ, ಕೇರಳ ಕಾಂಗ್ರೆಸ್‌ ಸಭಾತ್ಯಾಗವನ್ನೂ ಮಾಡಿವೆ. ಆಟಿಕೆ ಕೈಗಾರಿಕೆಯನ್ನು ಉತ್ಪಾದನೆ ಆಧರಿತ ಪ್ರೋತ್ಸಾಹಧನ ಯೋಜನೆಗೆ ಸೇರ್ಪಡೆ ಮಾಡುವ ಪ್ರಸ್ತಾವ‌ ಸದ್ಯಕ್ಕೆ ಸರಕಾರದ ಮುಂದಿಲ್ಲ ಎಂದು ವಾಣಿಜ್ಯ ಖಾತೆ ಸಹಾಯಕ ಸಚಿವ ಸೋಮ್‌ ಪ್ರಕಾಶ್‌ ಸಂಸತ್‌ಗೆ ಮಾಹಿತಿ ನೀಡಿದ್ದಾರೆ.

ಕ್ರಿಪ್ಟೋ ಕಾನೂನುಬದ್ಧವಲ್ಲ
ಕ್ರಿಪ್ಟೋ ಕರೆನ್ಸಿಗೆ ವಹಿವಾಟಿನಿಂದ ಬರುವ ಲಾಭಕ್ಕೆ ಶೇ.30 ತೆರಿಗೆ ವಿಧಿಸಲಾಗಿದೆ ನಿಜ. ಹಾಗೆಂದ ಮಾತ್ರಕ್ಕೆ ದೇಶದಲ್ಲಿ ಅದನ್ನು ಕಾನೂನುಬದ್ಧಗೊಳಿಸಲಾಗಿಲ್ಲ ಎಂದು ವಿತ್ತ ಸಚಿವರು ತಿಳಿಸಿದ್ದಾರೆ. ದೇಶದಲ್ಲಿ ಕ್ರಿಪ್ಟೋ ಕರೆನ್ಸಿಯ ವಹಿವಾಟಿಗೆ ಮಾನ್ಯತೆ ನೀಡುವ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಈ ಬಗ್ಗೆ ಇನ್ನೂ ಸಮಾಲೋಚನೆ ನಡೆಯುತ್ತಿದೆ. ಅದು ಮುಕ್ತಾಯವಾದ ಅನಂತರವಷ್ಟೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು. ನಿರ್ಮಲಾ ಮಾತು ಮುಕ್ತಾಯವಾಗುತ್ತಿದ್ದಂತೆಯೇ ರಾಜ್ಯಸಭೆ ಕಲಾಪವನ್ನು ಮಾ.14ರ ವರೆಗೆ ಮುಂದೂಡಲಾಯಿತು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.