ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ: ವಿದೇಶಗಳಿಗೆ ಭಾರತದ ವಿದೇಶಾಂಗ ಇಲಾಖೆ ಸೂಚನೆ
Team Udayavani, Feb 13, 2022, 7:10 AM IST
ನವದೆಹಲಿ: ಹಿಜಾಬ್ ವಿವಾದವು ಭಾರತದ ಆಂತರಿಕ ವಿಚಾರವಾಗಿದ್ದು, ಬೇರೆ ರಾಷ್ಟ್ರಗಳು ಪ್ರೇರಿತ ಪ್ರತಿಕ್ರಿಯೆಗಳನ್ನು ಕೊಡುವುದು ಬೇಕಿಲ್ಲ. ಅದನ್ನು ನಾವು ಸ್ವಾಗತಿಸುವುದೂ ಇಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ. ಇಲ್ಲಿನ ಹಿಜಾಬ್ ವಿವಾದದ ವಿಚಾರವಾಗಿ ಪಾಕಿಸ್ತಾನ, ಅಮೆರಿಕದಂತಹ ರಾಷ್ಟ್ರಗಳು ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ಸಚಿವಾಲಯವು ಇಂಥ ಖಡಕ್ ಎಚ್ಚರಿಕೆ ನೀಡಿದೆ.
“ಕರ್ನಾಟಕದ ಶಾಲೆಯ ಸಮವಸ್ತ್ರದ ವಿಚಾರ ಹೈಕೋರ್ಟ್ನಲ್ಲಿದೆ. ನಮ್ಮ ಸಾಂವಿಧಾನಿಕ ಚೌಕಟ್ಟಿನ ಒಳಗಿರುವ ಸಮಸ್ಯೆಯನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ಭಾರತದ ಬಗ್ಗೆ ತಿಳಿದುಕೊಂಡವರು ಈ ವಾಸ್ತವದ ಬಗ್ಗೆಯೂ ಸರಿಯಾಗಿ ತಿಳಿದಿರುತ್ತಾರೆ ಎಂದು ಭಾವಿಸುತ್ತೇವೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಹೇಳಿದ್ದಾರೆ.
ಸುಪ್ರೀಂಗೆ ಪಿಐಎಲ್:
ಹಿಜಾಬ್ ವಿವಾದದ ಬೆನ್ನಲ್ಲೇ ದೇಶಾದ್ಯಂತ ಸಮಾನ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಸೂಚಿಸಬೇಕೆಂದು ಕೋರಿ ಶನಿವಾರ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮೌಲ್ಯಗಳನ್ನು ಹೆಚ್ಚಿಸಿ, ದೇಶದ ಏಕತೆ ಕಾಪಾಡಲು ತಜ್ಞರ ಸಮಿತಿ ಅಥವಾ ನ್ಯಾಯಾಂಗ ಸಮಿತಿ ರಚಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ. ನಿಖೀಲ್ ಉಪಾಧ್ಯಾಯ ಎಂಬವರು ಈ ಪಿಐಎಲ್ ಸಲ್ಲಿಸಿದ್ದಾರೆ.
ಪ್ರತಿ ಸಂಘಟನೆ ತಮ್ಮದೇ ಆದ ಡ್ರೆಸ್ ಕೋಡ್ ಅನುಷ್ಠಾನ ಮಾಡಿಕೊಳ್ಳಬಹುದು. ಆದರೆ ಸರ್ಕಾರಿ ವ್ಯವಸ್ಥೆಯಲ್ಲಿ ಸಂವಿಧಾನ ನಡೆಯುತ್ತದೆಯೇ ಹೊರತು ಶರಿಯಾ ನಿಯಮವಲ್ಲ. – ಯೋಗಿ ಆದಿತ್ಯನಾಥ, ಉ.ಪ್ರದೇಶ ಸಿಎಂ
ಭಾರತದ ಹೆಣ್ಣು ಮಕ್ಕಳ ಘನತೆಯೊಂದಿಗೆ ಆಟವಾಡಲು ಹೊರಟರೆ, ಹೆಣ್ಣು ಮಕ್ಕಳೆಲ್ಲರೂ ಝಾನ್ಸಿ ರಾಣಿ, ರಜಿಯಾ ಸುಲ್ತಾನರಾಗಿ ಬದಲಾಗಿ, ಹಿಜಾಬ್ಗ ಕೈ ಹಾಕುವ ಕೈಯನ್ನು ಕತ್ತರಿಸುತ್ತಾರೆ. ಹಿಜಾಬ್ ಭಾರತ ಸಂಸ್ಕೃತಿಯ ಅವಿಭಾಜ್ಯ ಅಂಗ. –ರುಬೀನಾ ಖಾನಂ, ಎಸ್ಪಿ ನಾಯಕಿ
ಬುರ್ಖಾವು ಕರಾಳ ಯುಗದ ಚಾಸ್ಟಿಟಿ ಬೆಲ್ಟ್(ಲೈಂಗಿಕ ಕ್ರಿಯೆ ನಡೆಸದಂತೆ ತಡೆಯಲು ಇರುವ ಸಾಧನ) ಇದ್ದಂತೆ. ಎಲ್ಲ ಘರ್ಷಣೆ ಅಂತ್ಯಗೊಳಿಸುವುದಕ್ಕೆ ಸಮವಸ್ತ್ರ ಅವಶ್ಯಕ. ಧರ್ಮದ ಹಕ್ಕು ಶಿಕ್ಷಣದ ಹಕ್ಕಿಗಿಂತ ದೊಡ್ಡದಲ್ಲ. –ತಸ್ಲೀಮಾ ನಸ್ರೀನ್, ಬಾಂಗ್ಲಾದೇಶದ ಲೇಖಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
ಯೋಜನೆಗಳಿಗೆ ನೋಂದಣಿ ಸ್ಥಗಿತಕ್ಕೆ ಪಕ್ಷಗಳಿಗೆ ಚುನಾವಣ ಆಯೋಗ ಸೂಚನೆ
MUST WATCH
ಹೊಸ ಸೇರ್ಪಡೆ
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ