ಫುಟ್ಪಾತ್ ಕಾಮಗಾರಿಗೆ ಚಾಲನೆ
Team Udayavani, Feb 14, 2022, 11:53 AM IST
ಶಹಾಬಾದ: ನಗರದ ಹಳೆ ಶಹಾಬಾದನ ಆಟೋ ನಿಲ್ದಾಣದಿಂದ ಶಂಕರಲಿಂಗ ಗುಡಿ ವರೆಗಿನ ಎರಡು ಬದಿಯಲ್ಲಿ ಫುಟ್ ಪಾತ್ ನಿರ್ಮಾಣ ಕಾಮಗಾರಿಗೆ ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಪೂಜೆ ಸಲ್ಲಿಸಿದರು.
ನಗರಸಭೆ ಪೌರಾಯುಕ್ತ ಡಾ| ಕೆ.ಗುರಲಿಂಗಪ್ಪ ಮಾತನಾಡಿ, ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ವಿಶೇಷ ಅನುದಾನದಲ್ಲಿ ಸುಮಾರು 60 ಲಕ್ಷ ರೂ. ಅನುದಾನದಲ್ಲಿ ಫುಟ್ಪಾತ್ ನಿರ್ಮಾಣ ಕಾಮಗಾರಿಯನ್ನು ಶಾಸಕರು ಈ ಹಿಂದೆಯೇ ವಿದ್ಯುಕ್ತವಾಗಿ ಉದ್ಘಾಟಿಸಿದ್ದಾರೆ. ಅದಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗಿದೆ ಎಂದರು.
ಈಗಾಗಲೇ ಹಳೆಶಹಾಬಾದನಲ್ಲಿ ನಗರೋತ್ಥಾನ ಮೂರನೇ ಹಂತದಲ್ಲಿ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ. ಅದರ ಪಕ್ಕದ ಎರಡು ಬದಿಯಲ್ಲಿ ಪುಟ್ಪಾತ್ ನಿರ್ಮಾಣದಿಂದ ಅಂದ ಹೆಚ್ಚಲಿದೆ. ಗುತ್ತಿಗೆದಾರ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಅಲ್ಲದೇ ಹಳೆಶಹಾಬಾದನ ಮುಖಂಡರು ಹಾಗೂ ನಾಗರಿಕರು ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರನಿಂದ ತೆಗೆದುಕೊಳ್ಳಬೇಕು. ಕಾಮಗಾರಿ ಕಳಪೆ ಕಂಡು ಬಂದಲ್ಲಿ ನಗರಸಭೆ ಅಧಿಕಾರಿಗಳಿಗೆ ದೂರು ಸಲ್ಲಿಸಿ ಎಂದು ಹೇಳಿದರು.
ನಗರಸಭೆ ಸದಸ್ಯರಾದ ಮಲ್ಲಿಕಾರ್ಜುನ ವಾಲಿ, ಇನಾಯತಖಾನ ಜಮಾದಾರ, ಶ್ವೇತಾ ನಾಟೇಕಾರ, ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ಎಇಇ ಶರಣು ಪೂಜಾರಿ, ಎಇ ಶಾಂತರೆಡ್ಡಿ ದಂಡಗುಲಕರ್, ಶಿವಕುಮಾರ ನಾಟೇಕಾರ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ಮಿರಾಜ ಸಾಹೇಬ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ
Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್!: 7 ಮಂದಿ ಸೆರೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Ramanagara: ತಂದೆಯಿಂದಲೇ ಮಗನ ಕೊಲೆ.!
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು