ದಾರಿ ಮಧ್ಯೆ ಇಂಧನ ಖಾಲಿ : ಬೆಂಗಾವಲು ವಾಹನದಲ್ಲಿ ಸಂಚರಿಸಿದ ಉನ್ನತ ಶಿಕ್ಷಣ ಸಚಿವ
Team Udayavani, Feb 14, 2022, 3:13 PM IST
ಕಲಬುರಗಿ : ಎರಡು ದಿನಗಳ ಕಾಲ ಕಲಬುರಗಿ – ಯಾದಗಿರಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿಮಾನ ನಿಲ್ದಾಣಕ್ಕೆ ಬರುವಾಗ ದಾರಿ ನಡುವೆ ವಾಹನದಲ್ಲಿ ಇಂಧನ ಖಾಲಿಯಾಗಿದ್ದರಿಂದ ಪೊಲೀಸ್ ಬೆಂಗಾವಲು ವಾಹನದಲ್ಲಿ ಸಂಚರಿಸಿ ವಿಮಾನ ಹತ್ತಿರುವ ಘಟನೆ ನಡೆದಿದೆ.
ಯಾದಗಿರಿಯಿಂದ ಶಹಾಪುರ-ಜೇವರ್ಗಿ ರಸ್ತೆ ಮಾರ್ಗವಾಗಿ ಕಲಬುರಗಿ ಆಗಮಿಸುತ್ತಿದ್ದಾಗ ಜೇವರ್ಗಿ ದಾಟಿ ಕಲಬುರಗಿಗೆ ಬರುವಾಗ ಸಚಿವರು ಸಂಚರಿಸುತ್ತಿದ್ದ ಕಾರಿನ ಇಂಧನ ಖಾಲಿಯಾಯಿತು. ಇದರ ಬೆನ್ನಲ್ಲೇ ಇವರ ಜತೆ ಮತ್ತೂಂದು ಕಾರಿನಲ್ಲಿ ಸಂಚರಿಸುತ್ತಿದ್ದ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರ ಕಾರು ಸಹ ಇಂಧನ ಖಾಲಿಯಾಗಿ ನಿಂತಿತು. ಹೀಗಾಗಿ ಸಚಿವರು ಅನಿವಾರ್ಯವಾಗಿ ಪೊಲೀಸ್ ಬೆಂಗಾವಲು ವಾಹನದಲ್ಲಿ ಹತ್ತಿ ವಿಮಾನ ನಿಲ್ದಾಣಕ್ಕೆ ಬಂದು ತಲುಪಿದರು. ಎರಡೂ ಕಾರಿನ ಇಂಧನ ಖಾಲಿಯಾಗಿದ್ದರಿಂದ ಪೊಲೀಸ್ ಬೆಂಗಾವಲಿನಲ್ಲಿ ಬಂದ ಕಾರಣ ಸಚಿವರು 20 ನಿಮಿಷ ತಡವಾಗಿ ತಲುಪಿದರು.
ಈ ನಡುವೆ ಕಲಬುರಗಿ ಸಂಸದ ಡಾ.ಉಮೇಶ ಜಾಧವ ವಿಮಾನಯಾನ ನಿರ್ವಾಹಕರೊಂದಿಗೆ ಚರ್ಚಿಸಿ ವಿಮಾನದಲ್ಲಿ ಸಚಿವರನ್ನು ಕರೆದು ಕೊಂಡು ಹೋಗುವಂತೆ ನೋಡಿಕೊಂಡರು. ವಿಮಾನ 20 ನಿಮಿಷ ಕಾಲ ವಿಳಂಬವಾಗಿರುವುದನ್ನು ವಿಮಾನ ನಿಲ್ದಾಣದ ಮೂಲಗಳು ಖಚಿತಪಡಿಸಿವೆ.
ಇದನ್ನೂ ಓದಿ : ಹಿಜಾಬ್ ವಿವಾದ: ಹೈಕೋರ್ಟ್ ನಲ್ಲಿ ವಿಚಾರಣೆ; ಆರ್ಟಿಕಲ್ 25 ಪ್ರಸ್ತಾವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ