ಬೈಲಾ ತಿದುಪಡಿ : ಸಭೆಗೆ ಮಠಾಧೀಶರಿಗೆ ಆಹ್ವಾನ


Team Udayavani, Feb 14, 2022, 4:12 PM IST

ಬೈಲಾ ತಿದುಪಡಿ : ಸಭೆಗೆ ಮಠಾಧೀಶರಿಗೆ ಆಹಾನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಶೀಘ್ರದಲ್ಲೆ ಸಮಾಲೋಚನೆ ಸಭೆ ನಡೆಯಲಿದ್ದು ಆಯ್ದ ಮಠಾಧೀಶರುಗಳಿಗೆ ಸಭೆಯಲ್ಲಿ ಭಾಗವಹಿಸಲು
ಕನ್ನಡ ಸಾಹಿತ್ಯ ಪರಿಷತ್ತು ಆಹ್ವಾನ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಫೆ.17 ರಂದು ಬೆಳಗ್ಗೆ 11ಗಂಟೆಗೆ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಸಮಾಲೋಚನೆ ಸಭೆ ನಡೆಯಲಿದ್ದು ಬೆಂಗಳೂರಿನ ನಿಡುಮಾಮಿಡಿ ಮಠದ ಚನ್ನಮಲ್ಲ ವೀರಭದ್ರ ಸ್ವಾಮೀಜಿ,
ಬೇಲಿಮಠದ ಸ್ವಾಮೀಜಿ ಹಾಗೂ ಸೊಲ್ಲಾಪುರದ ಅಕ್ಕಲಕೋಟೆಯ ವಿರಕ್ತ ಮಠದ ಸ್ವಾಮೀಜಿ ಸೇರಿದಂತೆ ಇನ್ನೂ ಕೆಲವು ಮಠಾಧೀಶರುಗಳಿಗೆ ಕಸಾಪ ವತಿಯಿಂದ ಆಹ್ವಾನ ನೀಡಲಾಗಿದೆ.
ಕನ್ನಡದ ಬಗ್ಗೆ ಎಲ್ಲಾ ಮಠಗಳಿಗೂ ಆಸಕ್ತಿ ಇದೆ. ಆದರೆ, ಎಲ್ಲ ಮಠಾಧೀಶರಿಗೆ ಆ ವೇಳೆ ಬರಲು ಸಾಧ್ಯವಾಗದು. ಆ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಸಮಾಲೋಚನೆ ಸಭೆಯಲ್ಲಿ ಭಾಗವಹಿಸಲು ಆಯ್ದ ಕೆಲವು ಮಠಾಧೀಶರಿಗೆ ಆಹ್ವಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ನಾಡಿನ ಮತ್ತಷ್ಟು ಮಠಾಧೀಶರಿಗೆ ಆಹ್ವಾನ ನೀಡಲಾಗುವುದು ಎಂದು ಕನ್ನಡ ಸಾಹಿತ್ಯ
ಪರಿಷತ್ತಿನ ಮೂಲಗಳು ತಿಳಿಸಿವೆ.

ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾ ತಿದ್ದುಪಡಿ ಸಂಬಂಧಿಸಿದ ಈ ಸಮಾಲೋಚನಾ ಸಭೆಗೆ ಮಠಾಧೀಶರಲ್ಲದೆ ನಾಡಿನ ಹಿರಿಯ ಸಾಹಿತಿಗಳಿಗೆ, ಕನ್ನಡಪರ ಚಿಂತಕರುಗಳಿಗೆ ಮತ್ತು
ಹೋರಾಟಗಾರರಿಗೂ ಆಹ್ವಾನ ನೀಡಲಾಗಿದೆ. ಆ ಸಭೆಯಲ್ಲಿ ಈಗಾಗಲೇ ಬೈಲಾ ತಿದ್ದುಪಡಿ ಸಂಬಂಧ ಹಿರಿಯ ಕಾನೂನು ತಜ್ಞರು ನೀಡಿರುವ ಸಲಹೆಗಳ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲಿ
ಮಠಾಧೀಶರು, ಸಾಹಿತಿಗಳು, ಕನ್ನಡ ಪರ ಚಿಂತಕರು ತಮ್ಮ ಸಲಹೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯಾವ ವಿಷಯಗಳ ಬಗ್ಗೆ ಚರ್ಚೆ?: ಇದು ಪರಿಷತ್ತಿನ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಸಮಾಲೋಚನೆ ಸಭೆ ಅಷ್ಟೇ. ಇಲ್ಲೆ ಎಲ್ಲ ನಿರ್ಣಯ ಆಗುವುದಿಲ್ಲ ಪರಿಷತ್ತಿನ ಬೈಲಾಗಳ
ಬೇಕು-ಬೇಡಗಳ ಬಗ್ಗೆ ಚರ್ಚೆ ನಡೆಯಲಿದೆ. ಆ ನಂತರ ಹಂತ-ಹಂತವಾಗಿ ಪರಿಷತ್ತಿನ ಬೈಲಾ ತಿದ್ದುಪಡಿ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ
ಮಾಹಿತಿ ನೀಡಿದ್ದಾರೆ. ಆ್ಯಪ್‌ ಮೂಲಕ ಸದಸ್ಯತ್ವ ನೋಂದಣಿ, ಸದಸ್ಯತ್ವ ಶುಲ್ಕ 500 ರಿಂದ 250 ರೂ.ಗೆ ಇಳಿಕೆ ಮಾಡುವುದು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಲು ಓದಿನ ಮಿತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

ಕಾಗಿನೆಲೆಯಲ್ಲಿ ಪರಿಷತ್ತಿನ ವಿಶೇಷ ಸರ್ವ ಸದಸ್ಯರ ಸಭೆ ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಠಾಧೀಶರು, ಸಾಹಿತಿಗಳು, ಕನ್ನಡಪರ ಹೋರಾಟ ಗಾರರ ಸಮಾಲೋಚನೆ ಸಭೆ ನಡೆದ ಬಳಿಕ ಪರಿಷತ್ತಿನ ಕಾರ್ಯಕಾರಿಣಿ ನಡೆಯಲಿದೆ. ಆ ನಂತರ ಕಾಗಿನೆಲೆಯಲ್ಲಿ ಪರಿಷತ್ತಿನ ವಿಶೇಷ ಸರ್ವ ಸದಸ್ಯರ ಸಭೆ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾಗಿನೆಲೆಯಲ್ಲಿ ನಡೆಯಲಿರುವ ವಿಶೇಷ ಸರ್ವಸದಸ್ಯರ ಸಭೆಯ ಬಗ್ಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ . ಶೀಘ್ರದಲ್ಲೆ ಈ ಬಗ್ಗೆ ವೇಳಾಪಟ್ಟಿ ನಿಗದಿಯಾಗಲಿದೆ. ಅಲ್ಲಿ ಹಾವೇರಿಯಲ್ಲಿ ನಡೆಯಬೇಕಾಗಿರುವ 86ನೇ ಅಖೀಲ ರತ ಕನ್ನಡ ಸಾಹಿತ್ಯ ಸಮ್ಮೇಳದ ಬಗ್ಗೆಯೂ ಸಮಾಲೋಚನೆ ನಡೆಯಲಿದೆ ಎಂದು ಹೇಳಿದ್ದಾರೆ.

– ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.