ಸದನದಲ್ಲಿ ಸಿದ್ದರಾಮಯ್ಯ ಸರಕಾರದ ಹಗರಣಗಳನ್ನು ಪ್ರಸ್ತಾಪಿಸುವೆ : ಎಚ್ ಡಿಕೆ


Team Udayavani, Feb 14, 2022, 6:25 PM IST

ಸದನದಲ್ಲಿ ಸಿದ್ದರಾಮಯ್ಯ ಸರಕಾರದ ಹಗರಣಗಳ ಕುರಿತು ಪ್ರಸ್ತಾಪಿಸುವೆ : ಹೆಚ್ ಡಿಕೆ

ಬೆಂಗಳೂರು : ಈ ಬಾರಿ ಸದನದಲ್ಲಿ ಅಭಿವೃದ್ಧಿ ವಿಷಯಗಳು ಸೇರಿದಂತೆ ಕೆಲ ಪ್ರಮುಖ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದೇನೆ. ಮುಖ್ಯವಾಗಿ ತಮ್ಮದು ಕ್ಲೀನ್ ಸರಕಾರ ಎಂದು ಬಡಾಯಿ ಕೊಚ್ಚಿಕೊಳ್ಳುವ ಸಿದ್ದರಾಮಯ್ಯ ಸರಕಾರದಲ್ಲಿ ನಡೆದಿರುವ ಕೆಲ ಭ್ರಷ್ಟ ಹಗರಣಗಳ ಬಗ್ಗೆ ಮಾತನಾಡುವೆ ಎಂದು
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಿರುವ ಬಿಜೆಪಿ ಸರಕಾರದ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿದೆ ಸರಿ. ಆದರೆ, ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರದಲ್ಲಿ ಏನೆಲ್ಲಾ ನಡೆಯಿತು ಎನ್ನುವುದು ಕೂಡ ಜನರಿಗೆ ಗೊತ್ತಾಗಬೇಕಲ್ಲವೇ? ಎಂದರು ಕುಮಾರಸ್ವಾಮಿ ಹೇಳಿದ್ದಾರೆ.

ಕೋವಿಡ್’ನಿಂದ, ಕೋವಿಡ್’ಗಾಗಿ, ಕೋವಿಡ್’ಗೋಸ್ಕರವೇ ಮಾಡಿರುವ ಭಾಷಣ :

ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮಾಡಿದ ಭಾಷಣವು ಕೋವಿಡ್ ನಿಂದ, ಕೋವಿಡ್ ಗಾಗಿ, ಕೋವಿಡ್ ಗೋಸ್ಕರವೇ ಮಾಡಿರುವ ಭಾಷಣವಾಗಿದೆ

ರಾಜ್ಯದ ಅಭಿವೃದ್ಧಿ ಮುನ್ನೋಟದಂತೆ ಇರಬೇಕಾಗಿದ್ದ ರಾಜ್ಯಪಾಲರ ಭಾಷಣವು ನೀರಸ ಮತ್ತು ನಿರಾಶಾದಾಯಕವಾಗಿತ್ತು ಎಂದರು.

ಸರ್ಕಾರದ ಹಿಂದಿನ ಹಾಗೂ ಮುಂದೆ ಮಾಡಬಹುದಾದ ಅಭಿವೃದ್ಧಿಯ ಬಗ್ಗೆ ಭಾಷಣದಲ್ಲಿ ಏನೇನು ಹೇಳಿಲ್ಲ. ಸ್ಪಷ್ಟತೆ, ನಿರ್ಧಿಷ್ಟ ದಿಕ್ಸೂಚಿ ಇಲ್ಲದ ಭಾಷಣ ಇದು. ರಾಜ್ಯಪಾಲರ ಭಾಷಣದ ಮೂಲಕವೇ ಮುಂದಿನ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಳ್ಳಬೇಡಿ ಎಂದು ಸರಕಾರವೇ ನೇರವಾಗಿ ಜನರಿಗೆ ಹೇಳಿದಂತಿದೆ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ಅತ್ಯಂತ ಅಮೂಲ್ಯವಾದ ರಾಜ್ಯಪಾಲರ ಭಾಷಣದಲ್ಲಿ ಹಳೆಯ ಕೋವಿಡ್ ಅಂಶಗಳನ್ನಷ್ಟೆ ಓದಿಸಲಾಗಿದೆ. ಇದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ : ಹೊಸ ಕಟ್ಟಡದಲ್ಲಿ ಮಾದರಿಯಾಗಿ ರೂಪುಗೊಳ್ಳುತ್ತಿದೆ ಸಖಿ

ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಗೆ ನೀತಿ :

ಮಹದಾಯಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವೂ ಕರ್ನಾಟಕದಲ್ಲಿ ಒಂದು ಮಾತು, ಗೋವಾದಲ್ಲಿ ಇನ್ನೊಂದು ಮಾತು ಹೇಳುತ್ತಿದೆ. ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯಕ್ಕೆ ಮಹದಾಯಿ ನೀರು ಕೊಡುವುದಿಲ್ಲ ಎಂದು ಹೇಳುತ್ತಿದೆ. ರಾಹುಲ್ ಗಾಂಧಿ ಅವರೇ ಬಿಡುಗಡೆ ಮಾಡಿದ ಆ ಪಕ್ಷದ ಪ್ರಣಾಳಿಕೆಯಲ್ಲಿ ಹಾಗೆ ಬರೆಯಲಾಗಿದೆ. ಹಾಗಾದರೆ, ಗೋವಾದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ಹೋಗಿದ್ದ ಆ ಪಕ್ಷದ ರಾಜ್ಯ ನಾಯಕರು ಈ ಬಗ್ಗೆ ಏನು ಹೇಳುತ್ತಾರೆ? ಎಂದು ಮಾಜಿ ಮುಖ್ಯಮಂತ್ರಿಗಳು ಕುಟುಕಿದರು.

ಹಿಜಾಬ್ ನಿಂದ ರಾಜಕೀಯ ಲಾಭ :

ಮಕ್ಕಳ ಮನಸಿನಲ್ಲೂ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಮಾಡಿಕೊಳ್ಳಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ದೂರಿದರು.

ಹಿಜಾಬ್ ಮತ್ತು ಕೇಸರಿ ಶಾಲು ವಿವಾದಗಳ ಹಿಂದಿರುವ ಸಂಘಟನೆಗಳ ಬಗ್ಗೆ ನಾನು ಹೇಳುವುದು ಇಷ್ಟೇ. ರಾಜ್ಯದ ಸಾಮರಸ್ಯವನ್ನು ಹಾಳು ಮಾಡಬೇಡಿ. ಇದು ಶಾಂತಿಯುತ ರಾಜ್ಯ. ಹಾಗೆಯೇ ಮಕ್ಕಳ ಪೋಷಕರಿಗೂ ಹೇಳುತ್ತೇನೆ, ಯಾವುದೇ ಕಾರಣಕ್ಕೂ ಮಕ್ಕಳು ಸ್ವಾರ್ಥ ಸಂಘಟನೆಗಳಿಂದ ಪ್ರೇರೇಪಿತರಾಗದಂತೆ ತಡೆಯಿರಿ. ಇಂಥ ವಾತಾವರಣ ನಿರ್ಮಾಣ ಆಗಲು ಬಿಟ್ಟಿದ್ದೇ ಸರಕಾರದ ವೈಫಲ್ಯ. ಉಡುಪಿಯಲ್ಲಿ ಆದ ಘಟನೆಯನ್ನು ಅಲ್ಲೇ ತಡೆದಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.