ಗೋಡಂಬಿ ಬರಡು ಭೂಮಿಯ ಬಂಗಾರದ ಬೆಳೆ


Team Udayavani, Feb 15, 2022, 2:43 PM IST

18crop

ಬೀದರ: ಬರಡು ಭೂಮಿಗೆ ಬಂಗಾರ ಬೆಳೆಯಾದ ಗೋಡಂಬಿಯನ್ನು ಬೆಳೆದು ಆರ್ಥಿಕವಾಗಿ ಸದೃಢರಾಗುವಂತೆ ತೋಟಗಾರಿಕೆ ಮಹಾವಿದ್ಯಾಲಯದ ಡೀನ್‌ ಡಾ| ಎಸ್‌.ವಿ ಪಾಟೀಲ ಅವರು ರೈತ ಬಾಂಧವರಿಗೆ ಕರೆ ನೀಡಿದರು.

ತೋಟಗಾರಿಕೆ ಮಹಾವಿದ್ಯಾಲಯ ಮತ್ತು ಗೋಡಂಬಿ ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ ಕೊಚ್ಚಿನ್‌ ಆಶ್ರಯದಲ್ಲಿ ಇತ್ತೀಚೆಗೆ ಮಹಾವಿದ್ಯಾಲಯದಲ್ಲಿ ನಡೆದ ಗೋಡಂಬಿ ಬೆಳೆಯ ಅವಕಾಶಗಳು ಮತ್ತು ಆಧುನಿಕ ಬೇಸಾಯ ತಾಂತ್ರಿಕತೆಗಳ ಕುರಿತು ಜಿಲ್ಲಾಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಗೋಡಂಬಿ ಬೆಳೆಯನ್ನು 18ನೇ ಶತಮಾನದಲ್ಲಿ ಪೋರ್ಚುಗೀಸರು ಭಾರತಕ್ಕೆ ಪರಿಚಯಿಸಿದರು. ಸಮುದ್ರದ ತೀರದಲ್ಲಿ ಫಲವತ್ತಾದ ಮಣ್ಣನ್ನು ಸವಳಿಕೆಯಾಗದಂತೆ ತಡೆಯಲು ಗೋಡಂಬಿ ಬೆಳೆಯನ್ನು ಬೆಳೆಯಲು ಪ್ರಾರಂಭಿಸಿ, ನಂತರದ ದಿನಗಳಲ್ಲಿ ವಿಜ್ಞಾನಿಗಳ ಸಂಶೋಧನೆ ಪರಿಶ್ರಮದಿಂದ ಗೋಡಂಬಿಯನ್ನು 500ರಿಂದ 3500 ಮಿ.ಮೀ ವರೆಗೆ ಮಳೆಯಾಗುವ ಪ್ರದೇಶದಲ್ಲಿ ಈ ಬೆಳೆಯನ್ನು ಬೆಳೆಯಬಹುದೆಂದು ಪರಿಚಯಿಸಿದರು.

ರೈತರು ತಮ್ಮ ಬಂಜರು ಭೂಮಿಯಲ್ಲಿ ಈ ಬೆಳೆಯನ್ನು ಬೆಳೆದು ತಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಳ್ಳಬೇಕೆಂದು ತಿಳಿಸಿದರು. ಉಪ ಅರಣ್ಯ ಸಂರಕ್ಷಣಾ ಧಿಕಾರಿ (ಸಾಮಾಜಿಕ ಅರಣ್ಯ) ಎ.ಬಿ ಪಾಟೀಲ ಮಾತನಾಡಿ, ಪ್ರತಿಯೊಬ್ಬ ರೈತರು ತಮ್ಮ ಬಂಜರು ಭೂಮಿಯಲ್ಲಿ ಗೋಡಂಬಿ ಬೆಳೆಯನ್ನು ಬೆಳೆದು ತಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಳ್ಳಬೇಕು. ಕೃಷಿ ಜೊತೆಗೆ ಕೃಷಿ ಅರಣ್ಯ ಪದ್ಧತಿ ಅಳವಡಿಸಿದರೆ ಇವತ್ತಿನ ದಿನಗಳಲ್ಲಿ ಹವಾಮಾನ ವೈಪರಿತ್ಯದಿಂದ ವಾರ್ಷಿಕ ಬೆಳೆಗಳು ಹಾನಿಯಾಗುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಅಲ್ಲದೇ, ರೈತರು ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ 10 ಗಿಡಗಳಾದರು ಬದುವಿನ ಮೇಲೆ ನೆಟ್ಟು ಬೆಳಿಸಿದರೆ ಅದರಿಂದ ಮಣ್ಣು ಮತ್ತು ನೀರು ಸಂರಕ್ಷಣೆ, ಪರಿಸರ ರಕ್ಷಣೆ, ರೈತರ ಆದಾಯ ದ್ವಿಗುಣಗೊಳಿಸಲು ಕೂಡಾ ಉಪಯೋಗವಾಗುತ್ತದೆ ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿದ್ದ ಡಾ| ಎಸ್‌.ವಿ ಪಾಟೀಲ ಅವರು ಗೋಡಂಬಿ ಬೆಳೆಯ ಪ್ರಾಮುಖ್ಯತೆ, ಡಾ| ಮೊಹಮ್ಮದ ಫಾರೂಕ್‌ ಅವರು ಮೈದಾನ ಪ್ರದೇಶಕ್ಕೆ ಸೂಕ್ತವಾದ ಗೋಡಂಬಿ ತಳಿಗಳ ಬಗ್ಗೆ, ಡಾ| ಆನಂದ ಪಾಟೀಲ ಗೋಡಂಬಿ ಬೆಳೆಯ ಸುಧಾರಿತ ಸಸ್ಯಾಭಿವೃದ್ಧಿ ವಿಧಾನಗಳ ಕುರಿತು, ಡಾ| ಶ್ರೀನಿವಾಸ್‌ ಎನ್‌, ಅವರು ಗೋಡಂಬಿ ಬೆಳೆಯ ಸುಧಾರಿತ ಸಸ್ಯಾಭಿವೃದ್ಧಿ ವಿಧಾನಗಳು, ಡಾ| ರಾಜಕುಮಾರ ಎಂ., ಗೋಡಂಬಿ ಬೆಳೆಯಲ್ಲಿ ಸಮಗ್ರ ಕೀಟ ನಿರ್ವಹಣೆ ಬಗ್ಗೆ ಉಪನ್ಯಾಸ ನೀಡಿದರು.

ಪ್ರಗತಿಪರ ರೈತ ನಾರಾಯಣರಾವ ಚಿಟ್ಟಾ ಅವರು ಗೋಡಂಬಿ ಬೆಳೆಯ ಲಾಭ ಹಾಗೂ ಅನುಭವ ಹಂಚಿಕೊಂಡರು. ನಂತರ, ರೈತರು ತೋಟಗಾರಿಕೆ ಮಹಾವಿದ್ಯಾಲಯ, ಬೀದರನಲ್ಲಿರುವ ಗೋಡಂಬಿ ಬೀಜದ ಸಂಸ್ಕರಣ ಘಟಕ ಹಾಗೂ ಗೋಡಂಬಿ ತಳಿಗಳ ಕ್ಷೇತ್ರಕ್ಕೆ ಭೇಟಿ ನೀಡಿದ ರೈತರು, ಹೆಚ್ಚಿನ ಮಾಹಿತಿ ಪಡೆದರು. ಡಾ| ಶ್ರೀನಿವಾಸ ಎನ್‌., ನಿರೂಪಿಸಿದರು. ಡಾ| ಆನಂದ ಪಾಟೀಲ ಸ್ವಾಗತಿಸಿದರು. ಡಾ| ರಾಜಕುಮಾರ ಎಂ. ವಂದಿಸಿದರು. ಜಿಲ್ಲೆಯ 100ಕ್ಕೂ ಹೆಚ್ಚು ರೈತರು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.