ಜಿಲ್ಲಾದ್ಯಂತ ಪ್ರೌಢಶಾಲೆ ತರಗತಿ ಆರಂಭ
Team Udayavani, Feb 15, 2022, 4:36 PM IST
ಚಿಕ್ಕಮಗಳೂರು: ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಭುಗಿಲೆದ್ದಿದ್ದ ಸ್ಕಾರ್ಫ್ ಹಾಗೂಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಇತ್ತೀಚೆಗೆ ಪ್ರೌಢಶಾಲೆ ಹಾಗೂಕಾಲೇಜುಗಳಿಗೆ ರಜೆ ಘೋಷಿಸಿದ್ದು, ವಿವಾದಸಂಬಂಧ ಹೈಕೋರ್ಟ್ ನೀಡಿರುವ ಮಧ್ಯಂತರಆದೇಶದ ಹಿನ್ನೆಲೆಯಲ್ಲಿ ಸೋಮವಾರದಿಂದತರಗತಿಗಳ ಆರಂಭಕ್ಕೆ ನೀಡಿರುವ ಆದೇಶದಂತೆಜಿಲ್ಲಾದ್ಯಂತ 9 ಮತ್ತು 10ನೇ ತರಗತಿಗಳುಕಾರ್ಯಾರಂಭ ಮಾಡಿವೆ.
ಸೋಮವಾರ ಬೆಳಗ್ಗೆ ಎಂದಿನಂತೆ ಕಾಫಿ ನಾಡಿನಾದ್ಯಂತ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ9, 10ನೇ ತರಗತಿಗಳು ಆರಂಭಗೊಂಡಿದ್ದು,ಎಲ್ಲೂ ಅಹಿತಕರ ಘಟನೆಗಳು ವರದಿಯಾಗಿಲ್ಲ.ಸೋಮವಾರ ಬೆಳಗ್ಗೆ ಚಿಕ್ಕಮಗಳೂರುನಗರದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿವಿದ್ಯಾರ್ಥಿಗಳು ಎಂದಿನಂತೆ ಆಗಮಿಸಿದ್ದು, ಈವೇಳೆ ಸ್ಕಾರ್ಫ್ ಧರಿಸಿದ್ದ ಕೆಲ ವಿದ್ಯಾರ್ಥಿನಿಯರುಶಾಲೆಯ ಆವರಣದಲ್ಲಿ ಸ್ಕಾರ್ಫ್ ತೆಗೆದುಬ್ಯಾಗಿನೊಳಗಿಟ್ಟುಕೊಂಡು ತರಗತಿಗಳಿಗೆ ತೆರಳುತ್ತಿದ್ದದೃಶ್ಯಗಳು ಕಂಡು ಬಂದವು.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪ್ರತೀಖಾಸಗಿ, ಸರ್ಕಾರ ಶಾಲೆಗಳಲ್ಲಿ ಮುಂಜಾಗ್ರತಾಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆನಿಯೋಜಿಸಿದ್ದು, ಬೆಳಗ್ಗೆ ಎಲ್ಲ ಶಾಲೆಗಳ ಎದುರುಪೊಲೀಸರು ನಿಂತಿದ್ದ ದೃಶ್ಯ ಸಾಮಾನ್ಯವಾಗಿತ್ತು.112 ವಾಹನ ಸೇರಿದಂತೆ ಪೊಲೀಸ್ ಇಲಾಖೆವಾಹನಗಳು ನಗರದಾದ್ಯಂತ ಗಸ್ತು ಹಾಕುತ್ತಾಪ್ರತೀ ಶಾಲೆಗಳ ಮೇಲೆ ನಿಗಾ ಇರಿಸಿದ್ದರು. ನಗರದಕೆಲ ಶಾಲೆಗಳಿಗೆ ಖುದ್ದು ಜಿಲ್ಲಾ ಧಿಕಾರಿ ಕೆ.ಎನ್.ರಮೇಶ್ ಹಾಗೂ ಎಸ್ಪಿ ಎಂ.ಎಚ್. ಅಕ್ಷಯ್ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಈ ವೇಳೆವಿದ್ಯಾರ್ಥಿಗಳಿಗೆ ಕಿವಿಮಾತನ್ನೂ ಹೇಳಿದರು.ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿಸರ್ಕಾರಿ ಶಾಲೆಗೆ ಸಮವಸ್ತ್ರ ಹೊರತುಪಡಿಸಿಸ್ಕಾರ್ಫ್ ಸೇರಿದಂತೆ ಇನ್ಯಾವುದೇ ಧಾರ್ಮಿಕಗುರುತುಗಳೊಂದಿಗೆ ವಿದ್ಯಾರ್ಥಿಗಳು ಬರುವಂತಿಲ್ಲಎಂದು ಆದೇಶಿಸಿದ್ದು, ಅದರಂತೆ ಶಾಲೆಗಳಆಡಳಿತ ಮಂಡಳಿ ಹಾಗೂ ಶಿಕ್ಷಕರು ಸೋಮವಾರಬೆಳಗ್ಗೆ ಪ್ರತೀ ವಿದ್ಯಾರ್ಥಿಗಳನ್ನು ಪರಿಶೀಲಿಸಿ ತರಗತಿಒಳಗೆ ಬಿಡುತ್ತಿದ್ದ ದೃಶ್ಯಗಳು ಕಂಡು ಬಂದಿದ್ದು,ವಿದ್ಯಾರ್ಥಿಗಳೂ ಕೂಡ ಸರ್ಕಾರದ ಆದೇಶದಂತೆಸಮವಸ್ತ್ರದೊಂದಿಗೆ ಶಾಲೆಗೆ ಮರಳಿದ್ದರು.
ಮುಸ್ಲಿಂಸಮುದಾಯದ ವಿದ್ಯಾರ್ಥಿನಿಯರೂ ಸ್ಕಾರ್ಫ್ಅನ್ನು ತೆಗೆದು ತರಗತಿಗಳಿಗೆ ಹಾಜರಾಗಿದ್ದರು.ಒಟ್ಟಾರೆ ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತಭುಗಿಲೆದ್ದಿದ್ದ ಕೇಸರಿ ಶಾಲು, ಸ್ಕಾಫ್ ವಿವಾದಸೋಮವಾರ ಕಾμನಾಡಿನಲ್ಲಿ ತಣ್ಣಗಾಗಿದ್ದು,ಯಾವುದೇ ಅಹಿತಕರ ಘಟನೆಗಳು ಮರುಕಳಿಸಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ