20 ಸಾವಿರ ಶಾಲೆಗಳಲ್ಲಿ ಎನ್‌ಇಪಿ ಜಾರಿಗೆ ಸಿದ್ಧತೆ

ಅಧಿವೇಶನದ ಬಳಿಕ ಶಾಲೆಗಳ ಆಯ್ಕೆ ಪ್ರಕ್ರಿಯೆ ಆರಂಭ ಸಾಧ್ಯತೆ

Team Udayavani, Feb 16, 2022, 7:23 AM IST

20 ಸಾವಿರ ಶಾಲೆಗಳಲ್ಲಿ ಎನ್‌ಇಪಿ ಜಾರಿಗೆ ಸಿದ್ಧತೆ

ಉಡುಪಿ: ಮುಂದಿನ ಶೈಕ್ಷಣಿಕ ಸಾಲಿನಿಂದ ರಾಜ್ಯದ 20 ಸಾವಿರ ಸರಕಾರಿ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನವಾಗಲಿದ್ದು, ಶಾಲೆಗಳ ಆಯ್ಕೆ ಪ್ರಕ್ರಿಯೆಯು ವಿಧಾನಮಂಡಲ ಅಧಿವೇಶನದ ಬಳಿಕ ಆರಂಭವಾಗುವ ಸಾಧ್ಯತೆಯಿದೆ. ಪದವಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಿಂದಲೇ ಎನ್‌ಇಪಿ ಅನುಷ್ಠಾನ ಮಾಡಲಾಗಿದೆ.

ಶಾಲಾ ಹಂತದಲ್ಲಿ ಎನ್‌ಇಪಿ ಅನು ಷ್ಠಾನಕ್ಕೆ ಸಂಬಂಧ ನಿವೃತ್ತ ಐಎಎಸ್‌ ಅಧಿಕಾರಿ ಡಾ| ಮದನ್‌ಗೊàಪಾಲ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಇದರ ಶಿಫಾರಸಿನಂತೆ ಅನುಷ್ಠಾನ ಪ್ರಕ್ರಿಯೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಸುಮಾರು 42 ಸಾವಿರಕ್ಕೂ ಅಧಿಕ ಸರಕಾರಿ ಶಾಲೆಗಳಿವೆ. ಇತ್ತೀಚೆಗೆ ಆರಂಭವಾಗಿರುವ ಕರ್ನಾಟಕ ಪಬ್ಲಿಕ್‌ ಶಾಲೆಗಳ ಸಹಿತ ಕೆಲವೇ ಸರಕಾರಿ ಶಾಲೆಗಳಲ್ಲಿ ಮಾತ್ರ ಪೂರ್ವ ಪ್ರಾಥಮಿಕ ತರಗತಿಗಳಿವೆ. ಎನ್‌ಇಪಿ ಪೂರ್ವ ಪ್ರಾಥಮಿಕ ಹಂತದಿಂದಲೇ ಅನುಷ್ಠಾನ ಮಾಡಬೇಕಿರುವುದರಿಂದ ಶಿಕ್ಷಕರಿಗೆ ತರಬೇತಿ ಅತಿ ಅಗತ್ಯವಾಗಿದೆ.

ಪಠ್ಯಕ್ರಮ ಸಿದ್ಧತೆ
ಎನ್‌ಇಪಿ ಅನುಷ್ಠಾನದ ಹಿನ್ನೆಲೆಯಲ್ಲಿ ಹೊಸ ಪಠ್ಯಕ್ರಮ ಸಿದ್ಧಪಡಿಸಲಾಗುತ್ತಿದೆ. ಪಠ್ಯಕ್ರಮಗಳನ್ನು ಎನ್‌ಇಪಿ ಜಾರಿಗೆ ಬರುವ ಶಾಲೆಗಳಿಗೆ ಕಳುಹಿಸಿಕೊಡಲಾಗುತ್ತದೆ. ಸದ್ಯ 1ರಿಂದ 3ನೇ ತರಗತಿ ಮಕ್ಕಳಿಗೆ ನಲಿ-ಕಲಿ ಪಠ್ಯಕ್ರಮ ಇದೆ. ಹೊಸ ಪಠ್ಯಕ್ರಮದಲ್ಲೂ ನಲಿ-ಕಲಿ ಪಠ್ಯದ ಕೆಲವು ಭಾಗವನ್ನು ಉಳಿಸಿಕೊಂಡು ಇನ್ನಷ್ಟು ರಚನಾತ್ಮಕವಾಗಿ ಪಠ್ಯಕ್ರಮ ಸಿದ್ಧಪಡಲಾಗುತ್ತದೆ. ಯಾವೆಲ್ಲ ತರಗತಿಗೆ ಎನ್‌ಇಪಿ ಅನುಷ್ಠಾನ ಆಗಲಿದೆಯೋ ಅವೆಲ್ಲ ತರಗತಿಯ ಪಠ್ಯಕ್ರಮ ಬದಲಾವಣೆಯಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಖಾಸಗಿ ಶಾಲೆಗೆ ಒತ್ತಡವಿಲ್ಲ
ಎನ್‌ಇಪಿ ಜಾರಿಗೆ ತರುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳಿಗೆ ಸರಕಾರದಿಂದ ಯಾವುದೇ ಒತ್ತಡ ಹೇರುವುದಿಲ್ಲ. ಸರಕಾರಿ ಶಾಲೆಗಳಲ್ಲಿ ಅನುಷ್ಠಾನಕ್ಕೆ ಆದ್ಯತೆ ನೀಡುತ್ತಿದ್ದೇವೆ. ಯಾವುದೇ ಖಾಸಗಿ ಅಥವಾ ಅನುದಾನಿತ ಶಾಲಾಡಳಿತ ಮಂಡಳಿ ಎನ್‌ಇಪಿ ಅನುಷ್ಠಾನಕ್ಕೆ ಮುಂದೆ ಬಂದಲ್ಲಿ, ಸಿದ್ಧಪಡಿಸಿರುವ ಪಠ್ಯಕ್ರಮವನ್ನು ನೀಡಲಿದ್ದೇವೆ. ನಿಯ
ಮಾನುಸಾರ ಆ ಶಾಲಾಡಳಿತ ಮಂಡಳಿಗಳು ಅದನ್ನು ಅನುಷ್ಠಾನ ಮಾಡಬೇಕಾಗುತ್ತದೆ ಎಂದು ಶಿಕ್ಷಣ ಇಲಾಖೆ ಉನ್ನತ ಮೂಲಗಳು ತಿಳಿಸಿವೆ.

ತರಬೇತಿ ಅಗತ್ಯ
ಎನ್‌ಇಪಿ ಅನುಷ್ಠಾನಕ್ಕೆ ಸರಕಾರ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರೂ ಶಿಕ್ಷಕರಿಗೆ ಇನ್ನೂ ತರಬೇತಿ ನೀಡಿಲ್ಲ. ಕೇಂದ್ರ ಸರಕಾರದ ಮಹತ್ವದ ನಿರ್ಧಾರಗಳಲ್ಲಿ ಎನ್‌ಇಪಿ ಅನುಷ್ಠಾನವೂ ಒಂದು. ಪದವಿ ಕಾಲೇಜುಗಳಲ್ಲಿ ಅನುಷ್ಠಾನ ಮಾಡಿದ್ದರೂ ಹಲವು ತಾಂತ್ರಿಕ ಸಮಸ್ಯೆಗಳು ಈಗಲೂ ಜೀವಂತ ವಾಗಿವೆ. ಪ್ರಾಥಮಿಕ ಹಂತದಲ್ಲಿ ಅನುಷ್ಠಾನ ಮಾಡುವಾಗ ಯಾವುದೇ ತಾಂತ್ರಿಕ ಸಮಸ್ಯೆ ಎದುರಾಗದಂತೆ ಎಚ್ಚರ ವಹಿ ಸುವುದು ಅಗತ್ಯ. ಈ ನಿಟ್ಟಿನಲ್ಲಿ ಶಿಕ್ಷಕರಿಗೆ ನಿರಂತರ ತರಬೇತಿ ಅಗತ್ಯ. ಜತೆಗೆ ಪೂರ್ವ ಪ್ರಾಥಮಿಕ ತರಗತಿಗೆ ಈಗ ಶಿಕ್ಷಕರಿಲ್ಲ. ಅದಕ್ಕೂ ವ್ಯವಸ್ಥೆ ಮಾಡಿಕೊಳ್ಳಬೇಕು ಎಂಬ ಆಗ್ರಹ ಶಿಕ್ಷಕರ ವಲಯದಿಂದ ಕೇಳಿ ಬರುತ್ತಿದೆ.

ಇಲಾಖೆಯಿಂದ ಶಾಲೆಯ ಆಯ್ಕೆ ಸಂಬಂಧ ಯಾವುದೇ ಸೂಚನೆ ಇನ್ನೂ ಬಂದಿಲ್ಲ. ಶಿಕ್ಷಕರಿಗೆ ಈಗಾಗಲೇ ಒಂದು ಹಂತದ ತರಬೇತಿಯನ್ನು ನೀಡಲಾಗಿದೆ. ವಿಧಾನಮಂಡಲ ಅಧಿವೇಶನ ಮುಗಿದ ಅನಂತರ ಈ ಬಗ್ಗೆ ಮಾರ್ಗಸೂಚಿ ಬರುವ ಸಾಧ್ಯತೆಯಿದೆ. ಎನ್‌ಇಪಿ ಅನುಷ್ಠಾನಕ್ಕೆ ಸಂಬಂಧಿಸಿ ಪ್ರಾಥಮಿಕ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ.
-ಸುಧಾಕರ್‌ ಕೆ., ಗೋವಿಂದ ಮಡಿವಾಳ
ಡಿಡಿಪಿಐ, ದಕ್ಷಿಣ ಕನ್ನಡ ಮತ್ತು ಉಡುಪಿ

ಮೊದಲ ಹಂತದಲ್ಲಿ 20 ಸಾವಿರ ಸರಕಾರಿ ಶಾಲೆಗಳಲ್ಲಿ ಎನ್‌ಇಪಿ ಅನುಷ್ಠಾನ ಮಾಡಿದ್ದೇವೆ. ಇದಕ್ಕೆ ಪೂರಕವಾಗಿ ಪಠ್ಯಕ್ರಮಗಳನ್ನು ತಯಾರಿಸು ತ್ತಿದ್ದೇವೆ. ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ತಜ್ಞರ ಸಮಿತಿಯ ಸಲಹೆ ಅನುಸಾರ ಎನ್‌ಇಪಿ ಜಾರಿಗೆ ತರಲಿದ್ದೇವೆ.
-ಬಿ.ಸಿ. ನಾಗೇಶ್‌, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.