ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಕೊಡಿ


Team Udayavani, Feb 16, 2022, 2:33 PM IST

ballari news

ಬಳ್ಳಾರಿ: ತೆರವುಗೊಳಿಸಿರುವ ಬೀದಿಬದಿಅಂಗಡಿಗಳನ್ನು ಪುನಃ ನಡೆಸಲು ಅವಕಾಶ ಕಲ್ಪಿಸುವಂತೆಆಗ್ರಹಿಸಿ ರಾಜ್ಯ ಡಾ| ಬಾಬು ಜಗಜೀವನ್‌ರಾಮ್‌ಯುವಜನ ಜಾಗೃತಿ ವೇದಿಕೆ ನೇತೃತ್ವದಲ್ಲಿ ಬೀದಿಬದಿವ್ಯಾಪಾರಿಗಳು ಡಿಸಿ ಕಚೇರಿ ಎದುರು ಮಂಗಳವಾರಪ್ರತಿಭಟನೆ ನಡೆಸಿದರು.

ನಗರದ ತಹಶೀಲ್ದಾರ್‌ ಕಚೇರಿ, ಜಿಲ್ಲಾಧಿಕಾರಿ,ಅಂಚೆ ಕಚೇರಿ ಕಾಂಪೌಂಡ್‌ಗೆ ಹೊಂದಿಕೊಂಡು, ಟೀ,ಬಿರ್ಯಾನಿ ಬಂಡಿ, ಹಣ್ಣಿನ ಬಂಡಿ, ಬಟ್ಟೆಗಳ ಮಾರಾಟಸೇರಿ ಇನ್ನಿತರೆ ಅಂಗಡಿಗಳು ಇದ್ದವು. ಬೀದಿ ಬದಿಯಲ್ಲಿಹಲವು ವರ್ಷಗಳಿಂದ ಇರುವ ಈ ಅಂಗಡಿಗಳಿಂದಲೇವ್ಯಾಪಾರಿಗಳು ಬದುಕು ಸಾಗಿಸುತ್ತಿದ್ದಾರೆ.ಕುಟುಂಬದ ಜೀವನೋಪಾಯಕ್ಕೂ ಈ ಅಂಗಡಿಯೇಆಸರೆಯಾಗಿದೆ.

ಆದರೆ, ರಸ್ತೆಯಲ್ಲಿ ಸಂಚಾರಕ್ಕೆಅಡ್ಡಿಯಾಗಲಿದೆ ಎಂದು ಜಿಲ್ಲಾಧಿಕಾರಿಗಳ ಸೂಚನೆಮೇರೆಗೆ ಪಾಲಿಕೆ ಸಿಬ್ಬಂದಿ ಈ ಎಲ್ಲ ಅಂಗಡಿಗಳನ್ನುತೆರವುಗೊಳಿಸಿದ್ದಾರೆ. ವ್ಯಾಪಾರ ಮಾಡದಂತೆ ನಿರ್ಬಂಧಹೇರಿದ್ದಾರೆ. ಇದರಿಂದ ವ್ಯಾಪಾರಿಗಳು ಅತಂತ್ರಪರಿಸ್ಥಿತಿ ಎದುರಿಸುವಂತಾಗಿದ್ದು, ಜಿಲ್ಲಾದಿಕಾರಿಗಳುಮಾನವೀಯ ದೃಷ್ಟಿಯಿಂದಲಾದರೂ, ಬೀದಿಬದಿಅಂಗಡಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡಬೇಕುಎಂದು ವೇದಿಕೆ ರಾಜ್ಯಾಧ್ಯಕ್ಷ ಶ್ರೀನಿವಾಸ್‌ ಕರ್ಚೇಡುಆಗ್ರಹಿಸಿದ್ದಾರೆ.

ತಹಶೀಲ್ದಾರ್‌ ಕಚೇರಿ, ಡಿಸಿ, ಅಂಚೆ ಕಚೇರಿಬಳಿಯ ರಸ್ತೆ ಬದಿಯಲ್ಲಿನ ಈ ಟೀ, ಬಿರ್ಯಾನಿಬಂಡಿಗಳ ವ್ಯಾಪಾರಿಗಳಿಗೆ ಬಳ್ಳಾರಿ ಮಹಾನಗರಪಾಲಿಕೆ ಪರವಾನಿಗೆ ನೀಡಿದೆ. ಪಾಲಿಕೆಯ ಈಪರವಾನಗಿ ಆಧಾರದ ಮೇಲೆ ಸಾಲಸೋಲಮಾಡಿ ಅಂಗಡಿಗಳನ್ನು ನಡೆಸುತ್ತಿದ್ದೇವೆ. ಕಳೆದೆರಡುವರ್ಷಗಳಿಂದ ಕಾಡುತ್ತಿರುವ ಕೋವಿಡ್‌ ಸೋಂಕು,ಲಾಕ್‌ಡೌನ್‌ನಿಂದ ವ್ಯಾಪಾರವಿಲ್ಲದೇ ಕಂಗೆಟ್ಟಿದ್ದಬೀದಿಬದಿ ವ್ಯಾಪಾರಿಗಳು, ಇದೀಗ ಒಂದಷ್ಟುಚೇತರಿಸಿಕೊಳ್ಳುವಷ್ಟರಲ್ಲೇ ಜಿಲ್ಲಾಡಳಿತ ಅಂಗಡಿಗಳನ್ನುತೆರವುಗೊಳಿಸುವ ಮೂಲಕ ಗಾಯದ ಮೇಲೆಬರೆ ಎಳೆದಿದೆ.

ಅಂಗಡಿ ತೆರವಿನಿಂದ ಜೀವನನಿರ್ವಹಣೆ ಕಷ್ಟವಾಗಲಿದ್ದು, ಮಕ್ಕಳ ವಿದ್ಯಾಭ್ಯಾಸ,ಪಾಲನೆ, ಪೋಷಣೆಯೂ ಕಷ್ಟವಾಗಲಿದೆ. ಹಾಗಾಗಿಮಾನವೀಯ ದೃಷ್ಟಿಯಿಂದ ಇವರಿಗೆ ಅಂಗಡಿಗಳನ್ನುನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಎಂದುಅವರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ವ್ಯಾಪಾರಿಗಳಾದ ಮಹ್ಮದ್‌ರಿಯಾಜ್‌, ಎರ್ರಿಸ್ವಾಮಿ, ಓಬಳಪತಿ, ಮನ್ಸೂರ್‌,ಖಾಜಾ, ಸಲ್ಮಾ, ಅಯ್ಯನಗೌಡ, ಸುಭಾಶ್‌ಹನುಮಂತ, ಅಲಿ, ಉಸ್ಮಾನ್‌ ಹಲವರು ಇದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.