ಪ್ರತ್ಯೇಕ ಪಾಲಿಕೆಗಾಗಿ 22ರಿಂದ ಹೋರಾಟಕ್ಕೆ ನಿರ್ಧಾರ

ಧಾರವಾಡಕ್ಕೆ ಮಹತ್ವ ನೀಡದೇ ಹುಬ್ಬಳ್ಳಿಗೆ ಆದ್ಯತೆ ನೀಡುತ್ತಿರುವುದು ಬೇಸರದ ಸಂಗತಿ.

Team Udayavani, Feb 16, 2022, 5:53 PM IST

ಪ್ರತ್ಯೇಕ ಪಾಲಿಕೆಗಾಗಿ 22ರಿಂದ ಹೋರಾಟಕ್ಕೆ ನಿರ್ಧಾರ

ಧಾರವಾಡ: ನಗರಕ್ಕೆ ಪ್ರತ್ಯೇಕ ಪಾಲಿಕೆಯ ಹೋರಾಟದ ಮೊದಲ ಹಂತವಾಗಿ ಫೆ. 22ರಂದು ಬೆಳಗ್ಗೆ 10 ಗಂಟೆಗೆ ಡಿಸಿ ಕಚೇರಿ ಎದುರು ಮೌನ ಹಾಗೂ ಸಾಂಕೇತಿಕ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ.

ಕವಿಸಂನಲ್ಲಿ ಮಂಗಳವಾರ ಸಂಜೆ ವಿವಿಧ ಸಂಘ-ಸಂಸ್ಥೆಗಳು, ಹಿರಿಯ ನಾಗರಿಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹೋರಾಟದ ರೂಪುರೇಷೆ ಕುರಿತು ಸಮಗ್ರವಾಗಿ ಚರ್ಚಿಸಿ ಫೆ.22ರಿಂದ ಹೋರಾಟ ಆರಂಭಿಸಲು ನಿರ್ಧರಿಸಲಾಯಿತು.

ಸ್ಮಾರ್ಟ್‌ಸಿಟಿ ಬರೀ ಹುಬ್ಬಳ್ಳಿಗೆ ಮಾತ್ರ ಸೀಮಿತವಾಗಿದೆ. ಧಾರವಾಡ ದಿನದಿಂದ ದಿನಕ್ಕೆ ಹಿಂದುಳಿಯುತ್ತಿದೆ. ಜಿಲ್ಲಾ ಕೇಂದ್ರ ಧಾರವಾಡ ಇದ್ದರೂ ಸಹ ಪಾಲಿಕೆ ವಿಷಯದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ರಾಜಕಾರಣಿಗಳು ಸಹ ಧಾರವಾಡಕ್ಕೆ ಮಹತ್ವ ನೀಡದೇ ಹುಬ್ಬಳ್ಳಿಗೆ ಆದ್ಯತೆ ನೀಡುತ್ತಿರುವುದು ಬೇಸರದ ಸಂಗತಿ. ಈ ಕಾರಣದಿಂದಲೇ ಪ್ರತ್ಯೇಕ ಪಾಲಿಕೆ ಬೇಕು ಎಂದು ಸಭೆಯಲ್ಲಿದ್ದವರು ಒತ್ತಾಯಿಸಿದರು.

ಸಭೆಯ ಕುರಿತು ನಿರ್ಣಯಗಳನ್ನು ಮಂಡಿಸಿದ ನ್ಯಾಯವಾದಿ ಬಸವ ಪ್ರಭು ಹೊಸಕೇರಿ, ಪ್ರತ್ಯೇಕ ಪಾಲಿಕೆ ಚಿಂತನೆ-ಹೋರಾಟವು ಹುಬ್ಬಳ್ಳಿ ಅಥವಾ ಅದರ ಅಭಿವೃದ್ಧಿ ವಿರುದ್ಧವಲ್ಲ. ಪ್ರತ್ಯೇಕ ಪಾಲಿಕೆ ಕುರಿತಂತೆ ಕಾನೂನಾತ್ಮಕವಾಗಿ ಚಿಂತನೆ ಮಾಡುವುದು, ಮೊದಲ ಹೋರಾಟವಾಗಿ ಫೆ. 22ರಂದು ಮಂಗಳವಾರ ಡಿಸಿ ಕಚೇರಿ ಎದುರು ಎರಡು ಗಂಟೆ ಮೌನ ಪ್ರತಿಭಟನೆ ಜೊತೆಗೆ ಪ್ರತಿ ಶನಿವಾರ ನಿರ್ದಿಷ್ಟ ಸಮಯಕ್ಕೆ ಹೋರಾಟಗಾರರು ಸೇರಿ ಮುಂದಿನ
ರೂಪುರೇಷೆ ಹಾಕುವುದು. ಸಾರ್ವಜನಿಕರು, ಹೋರಾಟಗಾರರನ್ನು ಒಗ್ಗೂಡಿಸಲು ಆಯಾ ವಾರ್ಡ್‌ಗಳಲ್ಲಿ ಗುಂಪುಗಳ ರಚನೆ, ಹೋರಾಟಕ್ಕೆ ದಿಕ್ಕು ತೋರಿಸಲು ವಾಟ್ಸ್ ಆ್ಯಪ್‌ ಗ್ರುಪ್‌ ಸೇರಿದಂತೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳುವುದು ಹಾಗೂ ಹಂತ ಹಂತವಾಗಿ ಮಾಡಬೇಕಾದ ಕಾರ್ಯಗಳ ಬಗ್ಗೆ ಸಭೆ ಮಾಡುವುದನ್ನು ಸ್ಪಷ್ಟಪಡಿಸಿದರು. ಎಸ್‌.ವಿ. ಕುಲಕರ್ಣಿ, ಎಸ್‌.ಬಿ. ದ್ವಾರಪಾಲಕ, ಶಂಕರ ಹಲಗತ್ತಿ, ಮನೋಜ ಪಾಟೀಲ, ಕೆ.ಎಚ್‌. ನಾಯಕ, ವೀರಣ್ಣ ಒಡ್ಡೀನ ಮಾತನಾಡಿದರು.

ಹೋರಾಟಕ್ಕೆ ಸಲಹೆಗಳು: ಕರಬಾಕಿ ಕಟ್ಟದೇ ಧರಣಿ ಮಾಡೋಣ ಎಂದು ಮಲ್ಲಿಕಾರ್ಜುನ ಚಿಕ್ಕಮಠ, ಹೈಕೋರ್ಟ್‌ ಮಾದರಿಯಲ್ಲಿ ಈ ಹೋರಾಟ ನಡೆಯಲಿ ಎಂದು ರಾಜ್ಯ ವಕೀಲರ ಪರಿಷತ್‌ ಸದಸ್ಯ ವಿ.ಡಿ. ಕಾಮರಡ್ಡಿ, ಧಾರವಾಡದ ಪಾಲಿಕೆ ಕಚೇರಿಗೆ ಬೀಗ ಹಾಕೋಣ ಎಂದು ಚನ್ನಬಸ್ಸು ಮಾಳಗಿ, ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕೋಣ ಎಂದು ಮಹಾದೇವ ದೊಡಮನಿ, ಆಡಳಿತದ ದೃಷ್ಟಿಯಿಂದ ಧಾರವಾಡ, ಹಾವೇರಿ, ಗದಗ ಜಿಲ್ಲೆ ಪ್ರತ್ಯೇಕ ಮಾಡಿದಂತೆ ಹುಬ್ಬಳ್ಳಿಯಿಂದ ಧಾರವಾಡ ಸಹ ಪ್ರತ್ಯೇಕ ಮಾಡಲು ಸರ್ಕಾರಕ್ಕೆ ಅವಕಾಶವಿದೆ ಎಂದು ಲಿಂಗರಾಜ ಸರದೇಸಾಯಿ ತಮ್ಮ ಅಭಿಪ್ರಾಯ ಪ್ರತಿಪಾದಿಸಿದರು.

ಕೆಎಂಸಿ ಕಾಯ್ದೆ ಪ್ರಕಾರ 4 ಲಕ್ಷ ಜನಸಂಖ್ಯೆ ಹೊಂದಿದ ನಗರಕ್ಕೆ ಮಹಾನಗರ ಪಾಲಿಕೆಯ ಅರ್ಹತೆ ಇದೆ. ಅದನ್ನು ಧಾರವಾಡ ಹೊಂದಿದೆ. ಸದ್ಯ 29 ಪಾಲಿಕೆ ಸದಸ್ಯರಿದ್ದಾರೆ. ಪ್ರತ್ಯೇಕ ಪಾಲಿಕೆಯಾದರೆ ಇನ್ನಷ್ಟು ಸದಸ್ಯರ ಸಂಖ್ಯೆ ಹೆಚ್ಚಾಗಲಿದೆ. ಪ್ರತ್ಯೇಕ ಬಜೆಟ್‌ ಮಂಡಿಸಲು ಅವಕಾಶ ದೊರೆಯಲಿದ್ದು, ಧಾರವಾಡದ ಅಭಿವೃದ್ಧಿ ಸಾಧ್ಯವಾಗಲಿದೆ.
ವೆಂಕಟೇಶ ಮಾಚಕನೂರ,
ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ಸದಸ್ಯ

ಹುಬ್ಬಳ್ಳಿಯಲ್ಲಿ ಅಧಿಕಾರ, ರಾಜಕೀಯ ಎಲ್ಲವೂ ಕೇಂದ್ರೀಕೃತವಾಗಿದ್ದು ಅವರಿಂದ ಧಾರವಾಡ ಬಿಡಿಸಿಕೊಳ್ಳುವುದು ತುಸು ಕಷ್ಟ. ಆದ್ದರಿಂದ ಪ್ರತ್ಯೇಕ ಪಾಲಿಕೆ ಹೋರಾಟ ಜನಪರ ಚಳವಳಿಯಾಗಬೇಕು. ಈ ಹೋರಾಟಕ್ಕೆ ಧಾರವಾಡದ ಎಲ್ಲ ವಾರ್ಡ್ ಗಳ ಸದಸ್ಯರು, ಜನರ ಬೆಂಬಲ ಸಿಗಬೇಕು.
ಎಂ.ಬಿ. ಕಟ್ಟಿ, ಹೋರಾಟಗಾರ

931 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳೆಲ್ಲವೂ ಹುಬ್ಬಳ್ಳಿಯಲ್ಲಿಯೇ ನಡೆಯುತ್ತಿವೆ. ಶೇ.78 ಅನುದಾನ ಹುಬ್ಬಳ್ಳಿಗೆ ಸೀಮಿತವಾಗಿದ್ದು ಬೇಸರದ ಸಂಗತಿ. ಭೌತಿಕ ಚಳವಳಿ ಜೊತೆಗೆ ಸಾಮಾಜಿಕ ಮಾಧ್ಯಮಗಳ ಮೂಲಕವೂ ಹಕ್ಕು ಪ್ರತಿಪಾದಿಸಬೇಕಿದೆ.
ರವಿ ಮಾಳಿಗೇರ, ಕವಿವಿ ಸಿಂಡಿಕೇಟ್‌ ಸದಸ್ಯ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.