ದ.ಕ.: 44 ದಿನಗಳಲ್ಲಿ 125 ಮಂದಿ ಸಾವು; ಕೋವಿಡ್‌ ಇಳಿಮುಖಗೊಂಡರೂ ಸಾವಿನ ಪ್ರಮಾಣ ಏರಿಕೆ


Team Udayavani, Feb 17, 2022, 6:40 AM IST

ದ.ಕ.: 44 ದಿನಗಳಲ್ಲಿ 125 ಮಂದಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೈನಿಕ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದರೂ ಸಾವಿನ ಪ್ರಮಾಣ ನಿಯಂತ್ರಣಕ್ಕೆ ಬರುತ್ತಿಲ್ಲ. ಕೊರೊನಾ 3ನೇ ಅಲೆಯಲ್ಲಿ ಒಂದೂವರೆ ತಿಂಗಳಿನಲ್ಲಿ ಇಲ್ಲಿ 125 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ 41 ಮಂದಿ ಹೊರ ಜಿಲ್ಲೆಯವರು.

ದ.ಕ. ಜಿಲ್ಲೆಯಲ್ಲಿ ಸಾವ ನ್ನಪ್ಪಿದ ಹೊರ ಜಿಲ್ಲೆಯವರಲ್ಲಿ ಉಡುಪಿ ಜಿಲ್ಲೆಯ 11 ಮಂದಿ, ಬೆಂಗಳೂರು, ಬಳ್ಳಾರಿ, ದಾವಣಗೆರೆ, ಹಾಸನ, ಹಾವೇರಿ ಜಿಲ್ಲೆಯ ತಲಾ ಒಬ್ಬರು, ಕೊಡಗಿನ ಇಬ್ಬರು, ಚಿತ್ರ ದುರ್ಗ, ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಯ ತಲಾ ನಾಲ್ವರು, ಚಿಕ್ಕಮಗಳೂರಿನ ಐವರು, ಶಿವಮೊಗ್ಗ ಜಿಲ್ಲೆಯ 6 ಮಂದಿ ಸೇರಿ ದ್ದಾರೆ. ಉಳಿದಂತೆ ಮಂಗಳೂರಿನ 50, ಬಂಟ್ವಾಳ ತಾಲೂಕಿನ 17, ಪುತ್ತೂರಿನ 9, ಬೆಳ್ತಂಗಡಿಯ 6, ಸುಳ್ಯದ ಇಬ್ಬರಿದ್ದಾರೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಡಿ ಕೋವಿಡ್‌ ಹೆಲ್ತ್‌ ಬೆಡ್‌ ಮ್ಯಾನೇಜ್‌ಮೆಂಟ್‌ ಸಿಸ್ಟಮ್‌ನ ಪ್ರಾಯೋಗಿಕ ಯೋಜನೆಗೆ ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಯನ್ನು ಸರಕಾರ ಆಯ್ಕೆ ಮಾಡಿದೆ. ದ.ಕ. ಜಿಲ್ಲೆಯಲ್ಲಿ ಸದ್ಯ ಪಾಸಿಟಿವ್‌ ಪ್ರಕರಣ, ಗುಣಮುಖ, ಸಾವು ಎಲ್ಲವೂ ರಿಯಲ್‌ ಟೈಂನಲ್ಲಿ ಅಂತರ್ಜಾಲದಲ್ಲಿ ಅಪ್‌ಡೇಟ್‌ ಆಗುತ್ತಿದೆ. ಅದರ ಆಧಾರದಲ್ಲಿಯೇ ಪ್ರತೀ ದಿನ ರಾಜ್ಯ ಸರಕಾರ ಕೋವಿಡ್‌ ಹೆಲ್ತ್‌ ಬುಲೆಟೆನ್‌ ಬಿಡುಗಡೆಯಾಗುತ್ತದೆ. ಹೊರ ಜಿಲ್ಲೆಯ ಮಂದಿ ದ.ಕ. ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದರೆ ಅದು ಜಿಲ್ಲೆಯ ಸಾವಿನ ಅಂಕಿಅಂಶಕ್ಕೆ ಸೇರುತ್ತದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳುವಂತೆ ಸದ್ಯ ಜಿಲ್ಲೆಯಲ್ಲಿ ಕೋವಿಡ್‌ನಿಂದ ದಾಖಲಾಗಿ ಸಾವನ್ನಪ್ಪುತ್ತಿರುವವರಲ್ಲಿ ಶೇ. 90ರಷ್ಟು ಮಂದಿ ಅನ್ಯ ಕಾಯಿಲೆಯಿಂದ ಬಳಲುತ್ತಿರುವವರು. ಇತರ ಕಾಯಿಲೆಯ ಪರಿಣಾಮ ಆಸ್ಪತ್ರೆಗೆ ದಾಖಲಾಗುವ ಸಂದರ್ಭ ಅವರಿಗೆ ತಪಾಸಣೆ ನಡೆಸಿದಾಗ ಕೋವಿಡ್‌ ದೃಢಪಡುತ್ತದೆ. ಅನ್ಯ ಕಾಯಿಲೆಯ ಪರಿಣಾಮ ಸಾವನ್ನಪ್ಪಿದರೂ ಕೋವಿಡ್‌ ಸಾವು ಎಂದೇ ದಾಖಲಾಗುತ್ತದೆ.

ಮರಣ ಪ್ರಮಾಣ ದರ ಏರಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಣ ಪ್ರಮಾಣ ದರದಲ್ಲಿ ಆಗಸ್ಟ್‌ ಬಳಿಕ ಏರಿಳಿತ ಕಂಡುಬರುತ್ತಿದೆ. ಆಗಸ್ಟ್‌ ನಲ್ಲಿ ಶೇ. 1.53, ಸಪ್ಟೆಂಬರ್‌ನಲ್ಲಿ ಶೇ. 2.01ಕ್ಕೆ ಏರಿಕೆಯಾಗಿತ್ತು. ಅಕ್ಟೋಬರ್‌ನಲ್ಲಿ ಶೇ. 2.30, ನವೆಂಬರ್‌ನಲ್ಲಿ ಶೇ. 2.23, ಡಿಸೆಂಬರ್‌ನಲ್ಲಿ ಶೇ. 1.40 ಇತ್ತು. ಈ ವರ್ಷದ ಜನವರಿಯಲ್ಲಿ ಶೇ. 0.35ರಷ್ಟಕ್ಕೆ ಇಳಿಮುಖಗೊಂಡಿತು. ಆದರೆ ಫೆಬ್ರವರಿಯಲ್ಲಿ ಶೇ. 2.81ರಷ್ಟು ದಾಖಲಾಗಿದ್ದು, ಐದು ತಿಂಗಳಲ್ಲಿ ಅತೀ ಹೆಚ್ಚು ಮರಣ ದರ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದ್ದು, ಸಾವಿನ ಸಂಖ್ಯೆ ಏರುತ್ತಿದೆ. ಸದ್ಯ ಸಾವನ್ನಪ್ಪುವ ಶೇ. 90ರಷ್ಟು ಮಂದಿ ಅನ್ಯ ಕಾಯಿಲೆಯಿಂದ ಬಳಲುತ್ತಿರುವವರು. ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಲ್ಲಿ ದಾಖಲಾದ 125 ಮಂದಿಯಲ್ಲಿ 41 ಮಂದಿ ಹೊರ ಜಿಲ್ಲೆಯವರು. ಜನರು ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಲಸಿಕೆ ಪಡೆಯದವರು ಬೇಗನೆ ಪಡೆದುಕೊಳ್ಳಬೇಕು
– ಡಾ| ಕಿಶೋರ್‌ ಕುಮಾರ್‌,
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.