ಆಲಂಕಾರು: ಸಾರ್ವಜನಿಕ ಶೌಚಾಲಯ ಕಾಮಗಾರಿ ಸ್ಥಗಿತ


Team Udayavani, Feb 17, 2022, 5:15 AM IST

ಆಲಂಕಾರು: ಸಾರ್ವಜನಿಕ ಶೌಚಾಲಯ ಕಾಮಗಾರಿ ಸ್ಥಗಿತ

ಆಲಂಕಾರು: ಮರು ನಿರ್ಮಾಣದ ಉದ್ದೇಶದಿಂದ ತೆರವು ಗೊಳಿಸಿದ್ದ ಸಾರ್ವಜನಿಕ ಶೌಚಾಲಯದ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಆಲಂಕಾರು ಪೇಟೆಯ ಬಸ್‌ ತಂಗು ದಾಣದ ಬಳಿಯಿದ್ದ ತನ್ನ ಅಧೀನದ ಶೌಚಾಲಯವನ್ನು ಗ್ರಾಮ ಪಂಚಾ ಯತ್‌ ಒಂದು ತಿಂಗಳ ಮೊದಲು ತೆರವುಗೊಳಿಸಿತ್ತು. ಇದೀಗ ಶೌಚಾಲಯ ನಿರ್ಮಾಣದ ವಿಚಾರದಲ್ಲಿ ಮೀನಮೇಷ ಎಣಿಸುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಆರಂಭದಲ್ಲೇ ಕಳಪೆ
ಕಾಮಗಾರಿ
ಸುಮಾರು ಹತ್ತು ವರ್ಷಗಳ ಹಿಂದೆ ಈ ಶೌಚಾಲಯವನ್ನು ನಿರ್ಮಿಸಲಾಗಿತ್ತು. ನಿರ್ಮಾಣದ ಕಾಮಗಾರಿಯು ಕಳಪೆ ಯಾಗಿದೆ ಎಂದು ಆರೋಪಿಸಿ ಆರಂಭ ದಲ್ಲೇ ಸಾರ್ವಜನಿಕರು ನಿರ್ಮಾಣಕ್ಕೆ ತಡೆಹಿಡಿದ್ದರು. ಬಳಿಕ ಗುತ್ತಿದಾರರು ಪಂಚಾಂಗವನ್ನು ಮರುನಿರ್ಮಿಸಿ ಕಾಮಗಾರಿಯ ಗುಣಮಟ್ಟ ಕಾಯ್ದು ಕೊಳ್ಳುವ ಬಗ್ಗೆ ಭರವಸೆ ನೀಡಿದ ಬಳಿಕ ಮುಂದುವರಿಸಲಾಗಿತ್ತು. ಆದರೆ ಶೌಚಾಲಯದ ಗುಂಡಿ ಆಳವಾಗಿರದ ಪರಿಣಾಮ ಒಂದು ವರ್ಷದಲ್ಲಿಯೇ ಶೌಚಾಲಯ ತುಂಬಿ ತುಳುಕಿತ್ತು. ಮಳೆಗಾಲದಲ್ಲಿ ಈ ಶೌಚಾಲಯ ನೀರು ತುಂಬಿ ಬರುವ ಕಾರಣ ಸಾರ್ವಜನಿಕರು ಬಳಸದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ದರಿಂದ ದುರಸ್ತಿಗೊಳಿಸುವಂತೆ ಸಾರ್ವಜನಿಕರು ಸ್ಥಳಿಯಾಡಳಿತಕ್ಕೆ ಒತ್ತಡ ಹೇರಿದ್ದರು. ಒಂದು ತಿಂಗಳ ಹಿಂದೆ ಹಳೆಯ ಕಟ್ಟಡವನ್ನು ಕೆಡವಿ ಹಾಕಲಾಗಿತ್ತು. ಬೃಹತ್‌ ಶೌಚಾಲಯದ ಗುಂಡಿಯನ್ನು ಬಸ್‌ ತಂಗುದಾಣದ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದೆ. ಇದರಿಂದ ಯಾವ ಕ್ಷಣದಲ್ಲಿಯೂ ಅಪಾಯ ಸಂಭವಿಸಬಹುದಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಆಲಂಕಾರು ಪೇಟೆಗೆ ಬಂದ ಜನರು ಶೌಚಾಲಯಕ್ಕಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಯಾವುದಾದರು ಕಚೇರಿ ಅಥವಾ ಅಂಗಡಿಗಳ ಶೌಚಾಲಯಕ್ಕೆ ಮೊರೆ ಹೋಗಬೇಕಾದ ಅನಿವಾರ್ಯತೆ ಇದೆ.

ಇಚ್ಛಾ ಶಕ್ತಿಯ ಕೊರತೆ
ಶೌಚಾಲಯದ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬಲ್ಲ ಗುತ್ತಿಗೆದಾರರಿಗೆ ನೀಡದಿರುವುದು ವಿಳಂಬಕ್ಕೆ ಕಾರಣ. ಸ್ಥಳಿಯಾಡಳಿತ ವಿವಿಧ ಅನುದಾನಗಳನ್ನು ಬಳಸಿ ಕೊಂಡು ಇನ್ನಿತರ ಅಭಿವೃದ್ದಿ ಕಾರ್ಯ ಗಳನ್ನು ಮುತುವರ್ಜಿಯಿಂದ ಮುಂದುವರಿಸುತ್ತಿದೆ. ಆದರೆ ಸಾರ್ವ ಜನಿಕವಾಗಿ ಉಪಯೋಗಕ್ಕೆ ಬರುವಂತಹ ಶೌಚಾಲಯದ ಕಾಮಗಾರಿಗೆ ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಪರಿಣಾಮ ಸಾರ್ವಜನಿಕರು ಕಂಡ ಕಂಡಲ್ಲಿ ಮೂತ್ರ ವಿಸರ್ಜನೆ ಮಾಡುವುದರ ಮೂಲಕ ಪೇಟೆಯ ಸ್ವತ್ಛತೆ ಕಡಿಮೆಯಾಗಿ ಗಬ್ಬು ವಾಸನೆ ಬರುತ್ತಿದೆ ಎಂದು ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಪುರಂದರ ಗೌಡ ಆರೋಪಿಸಿದರು.

ಗುತ್ತಿಗೆದಾರರಿಗೆ ಸೂಚನೆ
ತಾ.ಪಂ. , ಗ್ರಾ.ಪಂ.ನ ಜಂಟಿ ಅನುದಾನಗಳನ್ನು ಬಳಸಿ ಕೊಂಡು ಸುಸಜ್ಜಿತ ಶೌಚಾಲಯ ನಿರ್ಮಿಸಲಾಗುವುದು. 1.82 ಲಕ್ಷ ರೂ. ಅನುದಾನದಲ್ಲಿ ಈ ಕಾಮಗಾರಿ ನಡೆಯಲಿದ್ದು, ಗುತ್ತಿಗೆದಾರರು ವಿಳಂಬ ನೀತಿ ಅನುಸರಿಸದೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ.
-ಸದಾನಂದ ಆಚಾರ್ಯ,
ಗ್ರಾ.ಪಂ. ಅಧ್ಯಕ್ಷರು, ಅಲಂಕಾರು

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.