ಎಸೆಸೆಲ್ಸಿ ಮೌಲ್ಯಮಾಪನ ಕೇಂದ್ರಕ್ಕೂ ಸಮ್ಮತಿ

ಪುತ್ತೂರಿನಲ್ಲಿ ಖಾಸಗಿ ಪರೀಕ್ಷೆ ಕೇಂದ್ರ ಪ್ರಾರಂಭ

Team Udayavani, Feb 17, 2022, 5:50 AM IST

ಎಸೆಸೆಲ್ಸಿ ಮೌಲ್ಯಮಾಪನ ಕೇಂದ್ರಕ್ಕೂ ಸಮ್ಮತಿ

ಸಾಂದರ್ಭಿಕ ಚಿತ್ರ.

ಪುತ್ತೂರು: ಉಪವಿಭಾಗದ ನಾಲ್ಕು ತಾಲೂಕಿಗೆ ಸಂಬಂಧಿಸಿ ಖಾಸಗಿ ಯಾಗಿ ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಪುತ್ತೂರಿನಲ್ಲಿ ಪರೀಕ್ಷಾ ಕೇಂದ್ರ ತೆರೆಯಲು ಗ್ರೀನ್‌ ಸಿಗ್ನಲ್‌ ದೊರೆತಿದೆ. ಜತೆಗೆ ಎಸೆಸೆಲ್ಸಿ ಮೌಲ್ಯಮಾಪನ ಕೇಂದ್ರವು ಪ್ರಾರಂಭಗೊಳ್ಳಲಿದ್ದು ಅಧಿಕೃತ ಒಪ್ಪಿಗೆ ದೊರೆಯಲಷ್ಟೇ ಬಾಕಿ.

ಏನಿದು ಪರೀಕ್ಷಾ ಕೇಂದ್ರ?
ಎಸೆಸೆಲ್ಸಿಯಲ್ಲಿ ಖಾಸಗಿಯಾಗಿ ಪರೀಕ್ಷೆ ಬರೆಯಲು ಅವಕಾಶ ಇದ್ದು, ಈ ವಿದ್ಯಾರ್ಥಿಗಳು ಮಂಗಳೂರಿಗೆ ತೆರಳಿ ಪರೀಕ್ಷೆ ಬರೆಯಬೇಕಿತ್ತು. ಈ ಬಾರಿ ಖಾಸಗಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವವರಿಗೆ ಪ್ರತ್ತೂರಿನಲ್ಲಿ ಪರೀûಾ ಕೇಂದ್ರ ಮಂಜೂರು ಮಾಡಲಾಗಿದೆ. ಪುತ್ತೂರು ನಗರದ ತೆಂಕಿಲ, ವಿವೇಕನಂದ ವಿದ್ಯಾಸಂಸ್ಥೆಯಲ್ಲಿ ಪರೀಕ್ಷಾ ಕೇಂದ್ರ ತೆರಯಲಾಗುತ್ತದೆ. ಪುತ್ತೂರು ಉಪ ವಿಭಾಗದ ಎಲ್ಲ ತಾ|ನ ವಿದ್ಯಾರ್ಥಿಗಳು ಇದುವರೆಗೆ ಮಂಗಳೂರಿನಲ್ಲಿ ಪರೀಕ್ಷೆ ಬರೆಯಬೇಕಿತ್ತು. ಸುಳ್ಯ, ಪುತ್ತೂರು, ಬೆಳ್ತಂಗಡಿ, ಕಡಬ ಭಾಗದವರಿಗೆ ಇದರಿಂದ ಸಮಯ ವ್ಯರ್ಥವಾಗುತ್ತಿತ್ತು. ಇನ್ನು ಮುಂದೆ ಈ ಸಮಸ್ಯೆಯಿಲ್ಲ. ನಾಲ್ಕು ತಾಲೂಕಿನ ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪರೀಕ್ಷೆ ಬರೆಯಬಹುದು.

ಮೌಲ್ಯಮಾಪನ ಕೇಂದ್ರ
ಕಳೆದ ವರ್ಷವೇ ಪುತ್ತೂರಿನಲ್ಲಿ ಎಸೆಸೆಲ್ಸಿ ಪರೀಕ್ಷೆ ಮೌಲ್ಯಮಾಪನ ನಡೆಸಲು ಉಪಕ್ರಮ ಆರಂಭಿಸಿಲಾಗಿತ್ತಾದರೂ ಕೋವಿಡ್‌ ಪರಿಸ್ಥಿತಿಯಿಂದಾಗಿ ಈಡೇ ರಿಲ್ಲ. ಈ ಬಾರಿ ಯಾವುದೇ ಸಮಸ್ಯೆ ಯಿಲ್ಲದೆ ಎಸೆಸೆಲ್ಸಿ ಪರೀಕ್ಷೆ ನಡೆಯುವ ನಿರೀಕ್ಷೆ ಮೂಡಿದ್ದು, ಪುತ್ತೂರಿನಲ್ಲಿ ಮೌಲ್ಯಮಾಪನ ಕೇಂದ್ರ ಪ್ರಾರಂಭಗೊಳ್ಳಲಿದೆ.

ನಾಲ್ಕು ತಾಲೂಕು ವ್ಯಾಪ್ತಿ
ಪ್ರಸ್ತುತ ಮಂಗಳೂರಿನಲ್ಲಿ ಪರೀಕ್ಷಾ ಮೌಲ್ಯಮಾಪನ ಕೇಂದ್ರಗಳಿವೆ. ಎಲ್ಲ ತಾ|ನ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಅಲ್ಲಿ ನಡೆಯುತ್ತಿತ್ತು. ಪುತ್ತೂರಿನಲ್ಲಿ ಮೌಲ್ಯಮಾಪನ ಕೇಂದ್ರ ಆರಂಭಗೊಂಡ ಮೇಲೆ ಸುಳ್ಯ, ಪುತ್ತೂರು, ಕಡಬ ಮತ್ತು ಬೆಳ್ತಂಗಡಿ ತಾಲೂಕುಗಳ ಮೌಲ್ಯಮಾಪಕರು ಪುತ್ತೂರಿನಲ್ಲಿಯೇ ಕರ್ತವ್ಯ ನಿರ್ವಹಿಸಲಿದ್ದಾರೆ. ಯಾವ ಜಿಲ್ಲೆಯ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಪುತ್ತೂರು ಕೇಂದ್ರದಲ್ಲಿ ನಡೆ ಯಲಿದೆ ಎನ್ನುವ ಬಗ್ಗೆ ಇಲಾಖೆ ನಿರ್ಧಾರ ಕೈಗೊಂಡ ಬಳಿಕ ಅಂತಿಮಗೊಳ್ಳಲಿದೆ.

ಎರಡು ಪ್ರೌಢಶಾಲೆ ಆಯ್ಕೆ
ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ನಡೆದ ಸಮಾಲೋಚನಾ ಸಭೆಯ ಬಳಿಕ ಮೂಲಸೌಕರ್ಯಗಳ ಲಭ್ಯತೆ ಬಗ್ಗೆ ವರದಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಪುತ್ತೂರು ಬಿಇಒ ಕಚೇರಿಗೆ ಸೂಚನ ನೀಡಿದ್ದರು. ಪುತ್ತೂರಿನಿಂದ ಒಟ್ಟು ನಾಲ್ಕು ಕೇಂದ್ರಗಳ ಹೆಸರನ್ನು ಕಳಿಸ ಲಾಗಿದ್ದು, ಅದರಲ್ಲಿ ಸುದಾನ ಶಾಲೆ,
ವಿವೇಕಾನಂದ ಶಾಲೆಯನ್ನು ಅಂತಿಮ ವಾಗಿ ಅರಿಸಲಾಗಿದೆ. ಇಲ್ಲಿ ರುವ ಮೂಲ ಸೌಕರ್ಯಗಳ ಬಗ್ಗೆ ವರದಿ ಸಲ್ಲಿಸಲಾಗಿದೆ. ಕೊಠಡಿ ವ್ಯವಸ್ಥೆ, ಕಂಪ್ಯೂಟರ್‌, ಡಾಟಾ ಎಂಟ್ರಿ ಆಪರೇಟರ್‌ ಮತ್ತಿತರ ಸೌಲಭ್ಯದ ಬಗ್ಗೆ ವರದಿಯಲ್ಲಿ ತಿಳಿಸಲಾಗಿದ್ದು, ಮೌಲ್ಯ ಮಾಪನ ಕೇಂದ್ರಕ್ಕೆ ಬೇಕಾದ ವ್ಯವಸ್ಥೆಗಳನ್ನು ಇಲ್ಲಿ ಜೋಡಿಸಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಮ್ಮತಿ ಸಿಕ್ಕಿದೆ
ಪ್ರೌಢಶಾಲೆಯ ಶಿಕ್ಷಕ ಸಂಘವು ಪುತ್ತೂರು ಉಪವಿಭಾಗ ವ್ಯಾಪ್ತಿಗೆ ಸಂಬಂಧಿಸಿ ಪುತ್ತೂರಿನಲ್ಲಿ ಎಸೆಸೆಲ್ಸಿ ಮೌಲ್ಯಮಾಪನ ಕೇಂದ್ರ ತೆರೆಯುವ ಬೇಡಿಕೆ ಸಲ್ಲಿಸಿತ್ತು. ಅದರಂತೆ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸಿದ್ದು, ಸಮ್ಮತಿ ಸಿಕ್ಕಿದೆ. ಕೇಂದ್ರಗಳಲ್ಲಿ ಮೂಲ ಸೌಕರ್ಯ ವ್ಯವಸ್ಥೆ ಜೋಡಣೆಗೆ ಸೂಚಿಸಲಾಗಿದೆ.
-ಸಂಜೀವ ಮಠಂದೂರು,
ಶಾಸಕರು, ಪುತ್ತೂರು

ಪ್ರಸ್ತಾವನೆ ಸಲ್ಲಿಕೆ
ಕಳೆದ ವರ್ಷವೇ ಮೌಲ್ಯಮಾಪನ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಬಾರಿ ಪುತ್ತೂರಿನಲ್ಲಿ ಪರೀûಾ ಮೌಲ್ಯಮಾಪನ ನಡೆಯುವುದು ಬಹುತೇಕ ಖಚಿತ. ಹಾಗೆಯೇ ಖಾಸಗಿಯಾಗಿ ಪರೀಕ್ಷಾ ಬರೆಯುವವರಿಗೂ ಪುತ್ತೂರಿನಲ್ಲಿ ಪರೀಕ್ಷಾ ಕೇಂದ್ರ ಮಂಜೂರಾಗಿದೆ.
-ಸಿ.ಲೋಕೇಶ್‌,
ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.