ನ್ಯಾಯ ಕೊಡಿ, ನ್ಯಾಯ ಕೊಡಿ ಸ್ಪೀಕರ್ ಅವರೇ ನ್ಯಾಯ ಕೊಡಿ: ಚಪ್ಪಾಳೆ ಪ್ರತಿಭಟನೆ
Team Udayavani, Feb 17, 2022, 1:01 PM IST
ಬೆಂಗಳೂರು : ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಗುರುವಾರವೂ ವಿಧಾನಸಭೆಯಲ್ಲಿ ಧರಣಿ ಮುಂದುವರಿದಿದ್ದು, ” ನ್ಯಾಯ ಕೊಡಿ ನ್ಯಾಯ ಕೊಡಿ ಸ್ಪೀಕರ್ ಅವರೇ ನ್ಯಾಯ ಕೊಡಿ ” ಎಂದು ಕಾಂಗ್ರೆಸ್ ಶಾಸಕರು ಚಪ್ಪಾಳೆ ಪ್ರತಿಭಟನೆ ನಡೆಸಿದ್ದಾರೆ.
ಗುರುವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಸಂತಾಪ ನಿರ್ಣಯವನ್ನು ಸ್ಪೀಕರ್ ಮಂಡಿಸಿದರು. ಆ ಬಳಿಕ ಪ್ರಶ್ನೋತ್ತರ ಕಲಾಪ ಆರಂಭವಾಯಿತು. ಈ ಬಗ್ಗೆ ಪ್ರತಿಭಟನಾ ನಿರತ ಕಾಂಗ್ರೆಸಿಗರು ಆಕ್ಷೇಪ ವ್ಯಕ್ತಪಡಿಸಿದರು ಪ್ರಯೋಜನವಾಗಲಿಲ್ಲ.
ಹೀಗಾಗಿ ಕಾಂಗ್ರೆಸ್ ಶಾಸಕರು ಘೋಷಣೆಗೆ ಶರಣಾದರು. ” ದೇಶದ್ರೋಹಿ ದೇಶದ್ರೋಹಿ ಈಶ್ಚರಪ್ಪ ದೇಶದ್ರೋಹಿ ” ಎಂದು ಕೂಗಿ ಈಶ್ವರಪ್ಪ ಅವರನ್ನು ಕೆರಳಿಸುವ ಪ್ರಯತ್ನ ನಡೆಸಿದರು.
ಆದರೆ ಪ್ರಶ್ನೋತ್ತರ ಕಲಾಪ ನಿಲ್ಲಲಿಲ್ಲ. ಹೀಗಾಗಿ ಸ್ಪೀಕರ್ ಪೀಠದತ್ತ ಮುಖಮಾಡಿ ” ನ್ಯಾಯ ಕೊಡಿ ನ್ಯಾಯ ಕೊಡಿ ಸ್ಪೀಕರ್ ಅವರೇ ನ್ಯಾಯ ಕೊಡಿ” , ಕಣ್ಣು ಬಿಡಿ ಕಣ್ಣು ಬಿಡಿ ಸ್ಪೀಕರ್ ಅವರೇ ಕಣ್ಣು ಬಿಡಿ ಎಂದು ಚಪ್ಪಾಳೆ ಹಾಕಿ ಘೋಷಣೆ ಹಾಕಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಸ್ಟ್ಯಾಂಪ್ ವಿಧೇಯಕವೂ ಮಂಡನೆಯಾಯ್ತು. ಆದರೆ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ ಸದನವನ್ನು ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ