ಹಿಜಾಬ್ ವಿವಾದ: ಬೆಳಗಾವಿಯಲ್ಲಿ ಹೈಡ್ರಾಮ; 6 ಯುವಕರು ವಶಕ್ಕೆ
Team Udayavani, Feb 17, 2022, 1:15 PM IST
ಬೆಳಗಾವಿ: ಹಿಜಾಬ್ ಧರಿಸಲು ಅನುಮತಿ ನೀಡದ್ದಕ್ಕೆ ಕೆಲ ಯುವಕರು ಇಲ್ಲಿಯ ಸದಾಶಿವನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಬಳಿಯ ವಿಜಯ ಪ್ಯಾರಾಮೆಡಿಕಲ್ ಆಪ್ ಸೈನ್ಸ್ ಕಾಲೇಜು ಬಳಿ ಹೈಡ್ರಾಮಾ ನಡೆಸಿದ ವೇಳೆ 6 ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ನಡೆದಿದೆ.
ಕಾಲೇಜಿನ ತರಗತಿಯೊಳಗೆ ಹಿಜಾಬ್ ಗೆ ಅವಕಾಶ ಇಲ್ಲ ಎಂದು ಕಾಲೇಜು ಸಿಬ್ಬಂದಿ ಹೇಳುತ್ತಿದ್ದಂತೆ ವಿದ್ಯಾರ್ಥಿನಿಯರು ವಿರೋಧ ವ್ಯಕ್ತಪಡಿಸಿದರು. ಕೆಲ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದರು. ಕೆಲ ಯುವಕರು ಸ್ಥಳಕ್ಕೆ ಬಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದದ್ದು, ನಂತರ ಅಲ್ಲಾಹು ಅಕ್ಬರ್ ಎಂಬ ಘೋಷಣೆ ಕೂಗಿ ಗೊಂದಲಕ್ಕೆ ಕಾರಣರಾದರ ಆರು ಜನ ಯುವಕರನ್ನು ಪೊಲೀಸರು ವಶಪಡಿಸಿಕೊಂಡು ಪರಿಸ್ಥಿತಿ ತಿಳಿಗೊಳಿಸಿದರು.
ಇದನ್ನೂ ಓದಿ:ತಾರ್ಕಿಕ ಅಂತ್ಯದವರೆಗೆ ಅಹೋರಾತ್ರಿ ಧರಣಿ: ಸಿದ್ಧರಾಮಯ್ಯ ಆಕ್ರೋಶ
ಡಿಸಿಪಿ ರವೀಂದ್ರ ಗಡಾದಿ ಸ್ಥಳಕ್ಕೆ ಬಂದು ವಿದ್ಯಾರ್ಥಿನಿಯರು ಹಾಗೂ ಯುವಕರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಹೈಕೋರ್ಟ್ ನ ಮಧ್ಯಂತರ ತೀರ್ಪು ಹಿನ್ನೆಲೆಯಲ್ಲಿ ಸದ್ಯ ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ. ಹೀಗಾಗಿ ಈ ನಿಯಮ ಪಾಲಿಸಬೇಕೆಂದು ತಿಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ